ನಿಮಗೆ ನಾಚಿಕೆಯಾಗಬೇಕು, ಕ್ಷಮೆಯಾಚಿಸಿ : ಸ್ಯಾಮ್ ವಿರುದ್ಧ ಹರಿಹಾಯ್ದ ರಾಹುಲ್
ಫತೇಹ್ ಘರ್ ಸಾಹಿಬ್, ಮೇ 13 : ಸಿಖ್ ಹತ್ಯಾಕಾಂಡದ ಬಗ್ಗೆ ಸ್ಯಾಮ್ ಪಿತ್ರೋಡಾ ಆಡಿರುವ ಬೇಜವಾಬ್ದಾರಿ ಮಾತುಗಳ ವಿರುದ್ಧ ಕಾಂಗ್ರೆಸ್ ವಿರುದ್ಧ ಮತ್ತೆ ಕೆಂಡ ಕಾರಿದ್ದು, 'ನಿಮ್ಮ ಮಾತು ಸಂಪೂರ್ಣ ತಪ್ಪು, ನಿಮಗೆ ನಾಚಿಕೆಯಾಗಬೇಕು, ನೀವು ಇಡೀ ದೇಶದ ಕ್ಷಮೆ ಯಾಚಿಸಬೇಕು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಂಜಾಬ್ ನ ಫತೇಹ್ ಘರ್ ಸಾಹಿಬ್ ನಲ್ಲಿ ಸೋಮವಾರ ಪ್ರಚಾರ ಮಾಡುತ್ತಿದ್ದ ಅವರು, 1984ರ ಸಿಖ್ ವಿರೋಧಿ ದಂಗೆಯ ಬಗ್ಗೆ ಸ್ಯಾಮ್ ಪಿತ್ರೋಡಾ ಅವರು ಹೇಳಿದ್ದು ಸಂಪೂರ್ಣ ತಪ್ಪು. ಇದಕ್ಕಾಗಿ ದೇಶದ ಕ್ಷಮೆ ಕೇಳಬೇಕೆಂದು ಫೋನಿನಲ್ಲಿ ಹೇಳಿದ್ದೇನೆ. ಇಂಥ ಹೇಳಿಕೆ ನೀಡಲು ನಿಮಗೆ ನಾಚಿಕೆಯಾಗಬೇಕು, ಸಾರ್ವಜನಿಕವಾಗಿ ದೇಶದ ಕ್ಷಮೆ ಕೇಳಿ ಎಂದು ಹೇಳಿದ್ದೇನೆ ಎಂದು ಬಹಿರಂಗ ಸಭೆಯಲ್ಲಿ ರಾಹುಲ್ ಹೇಳಿದರು.
ಕೆಲ ದಿನಗಳ ಹಿಂದೆ, ಪತ್ರಿಕಾಗೋಷ್ಠಿಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ 77 ವರ್ಷದ ಹಿರಿಯ ನಾಯಕ, ಟೆಲಿಕಾಂ ಕ್ರಾಂತಿಯ ಹರಿಕಾರ, ಉದ್ಯಮಿ ಸ್ಯಾಮ್ ಪಿತ್ರೋಡಾ ಅವರು, 1984ರ ಸಿಖ್ ಹತ್ಯಾಕಾಂಡದ ಬಗ್ಗೆ ಪ್ರಸ್ತಾಪಿಸುತ್ತ 'ಹುವಾ ಸೋ ಹುವಾ' (ಆದಿದ್ದಾಗಿ ಹೋಯಿತು) ಎಂದು ಹೇಳಿದ್ದರು. ಇದನ್ನು ಸಿಖ್ ಹತ್ಯಾಕಾಂಡಕ್ಕೆ ಅಂದಿನ ಕಾಂಗ್ರೆಸ್ ನಾಯಕರೇ ಒಪ್ಪಿಗೆ ನೀಡಿದ್ದಾರೆ ಎಂಬಂತೆ ಬಿಂಬಿಸಲಾಗುತ್ತಿದೆ.

ಈ ಹೇಳಿಕೆಗೆ ಭಾರತೀಯ ಜನತಾ ಪಕ್ಷದಿಂದ ಭಾರೀ ಪ್ರತಿರೋಧ ವ್ಯಕ್ತವಾಗುತ್ತಿದ್ದಂತೆ ಮತ್ತು ಚುನಾವಣೆಗೆ ಬಳಸಲು ಆರಂಭವಾಗುತ್ತಿದ್ದಂತೆ, ಆ ಹೇಳಿಕೆಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಅಂತರ ಕಾಪಾಡಿಕೊಂಡಿತು. ಈ ಹೇಳಿಕೆ ಕಾಂಗ್ರೆಸ್ಸಿಗೆ ತಿರುಗುಬಾಣವಾಗಿದ್ದು, ಲೋಕಸಭೆ ಚುನಾವಣೆಗೆ ಇನ್ನು ಒಂದೇ ಹಂತದ ಮತದಾನವಿರುವಾಗ ಭಾರೀ ಮುಜುಗರ ತಂದಿದೆ. ಈ ಕಾರಣಕ್ಕಾಗಿಯೇ ರಾಹುಲ್ ಅವರು ಕೆಂಡಾಮಂಡಲರಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರು ನನಗೆ ಹಿಂದಿ ಸರಿಯಾಗಿ ಮಾತಾಡಲು ಬರುವುದಿಲ್ಲ. ಆ ಮಾತು ಹೇಳಿದ್ದಕ್ಕೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದರು. ನನ್ನ ಮಾತಿನ ಅರ್ಥವೇನೆಂದರೆ, ನಮಗೆ ಚರ್ಚಿಸಲು ಇನ್ನೂ ಬೇಕಾದಷ್ಟು ವಿಷಯಗಳಿವೆ, ಸಿಖ್ ದಂಗೆಯಿಂದ ನಾವು ಮುಂದೆ ಹೋಗಬೇಕು ಎಂದಷ್ಟೇ ಆಗಿತ್ತು ಎಂದು ಅವರು ಸ್ಪಷ್ಟೀಕರಣ ನೀಡಿದ್ದರು. ನನ್ನ ಹೇಳಿಕೆಗೆ ತಪ್ಪಾರ್ಥ ಕಲ್ಪಿಸಲಾಗಿದೆ, ಆದರೂ ಕ್ಷಮೆ ಯಾಚಿಸುತ್ತೇನೆ ಎಂದು ಸುದ್ದಿ ಸಂಸ್ಥೆಯೊಂದಿಗೆ ಸ್ಯಾಮ್ ಹೇಳಿದ್ದರು. ಆದರೆ ಬಹಿರಂಗವಾಗಿ ಕ್ಷಮೆ ಯಾಚಿಸಿಲ್ಲ.
ಕಾಂಗ್ರೆಸ್ ಪಕ್ಷದ ವಿದೇಶಿ ವ್ಯವಹಾರಗಳನ್ನು ನೋಡಿಕೊಳ್ಳುತ್ತಿರುವ ಸ್ಯಾಮ್ ಪಿತ್ರೋಡಾ ಅವರನ್ನು ರಾಹುಲ್ ಗಾಂಧಿ ಅವರ ಮಾರ್ಗದರ್ಶಿಯೆಂದೇ ಬಿಂಬಿಸಲಾಗಿದೆ. ದುಬೈ, ಅಮೆರಿಕ, ಸಿಂಗಪುರ ಸೇರಿದಂತೆ ವಿದೇಶಗಳಲ್ಲಿ ನಡೆಸಲಾದ ಹಲವಾರು ಸಭೆಗಳನ್ನು ರಾಹುಲ್ ಗಾಂಧಿಗಾಗಿ ಸ್ಯಾಮ್ ಪಿತ್ರೋಡಾ ಅವರು ಆಯೋಜಿಸಿದ್ದರು. ಆದರೆ, ಆಡಾಡುತ್ತಲೇ ಸ್ಯಾಮ್ ಪಿತ್ರೋಡಾ ಅವರು ಎಡವಟ್ಟು ಮಾಡಿಕೊಂಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications