ಪ್ರೇಯಸಿಯನ್ನು ಕೊಂದು ಹೂತಿದ್ದವ ತನ್ನ ಹೆತ್ತವರನ್ನೂ ಕೊಂದಿದ್ದ!
ಪ್ರೇಯಸಿಯನ್ನು ಕೊಂದು ತನ್ನ ಬೆಡ್ ರೂಮಿನಲ್ಲಿ ಗೋರಿ ಮಾಡಿ ಹೂತಿದ್ದ ಛತ್ತೀಸ್ ಗಢದ ಕ್ರಿಮಿನಲ್. ಆರು ವರ್ಷಗಳ ಹಿಂದೆ ಹೆತ್ತವರನ್ನೂ ಕೊಂದಿದ್ದಾಗಿ ಒಪ್ಪಿಕೊಂಡಿರುವ ಯುವಕ.
ಭೋಪಾಲ್, ಫೆಬ್ರವರಿ 6: ಬೇರೊಂದು ಸಂಬಂಧವಿಟ್ಟುಕೊಂಡಿದ್ದಾಳೆಂದು ಅನುಮಾನಿಸಿ ತನ್ನ ಪ್ರೇಯಸಿಯನ್ನೇ ಕೊಂದಿರುವ ಕಾರಣಕ್ಕಾಗಿ ಪೊಲೀಸರ ಅತಿಥಿಯಾಗಿರುವ ಪಾತಕಿಯೊಬ್ಬ ಆರು ವರ್ಷಗಳ ಹಿಂದೆ ತನ್ನ ಹೆತ್ತವರನ್ನೂ ಕೊಂದು ತೋಟವೊಂದರಲ್ಲಿ ಹೂತು ಹಾಕಿದ್ದಾಗಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ.
ಬಂಧಿತನಾಗಿರುವ ಉದಯನ್ ದಾಸ್, ಛತ್ತೀಸ್ ಗಢದವನು. ಕಳೆದ ವರ್ಷ ಜೂನ್ ನಲ್ಲಿ ಆತನಿಗೆ ಪಶ್ಚಿಮ ಬಂಗಾಳದ ಬಂಕುರಾ ಮೂಲದ ಆಕಾಂಕ್ಷಾ ಎಂಬ ಯುವತಿ ಈತನಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದಳು.
ಪರಿಚಯವು ಆನಂತರ ಗಾಢವಾದ ಸ್ನೇಹವಾಗಿ ಮಾರ್ಪಟ್ಟಿತ್ತು. ಈತ ತನ್ನನ್ನು ತಾನು ಐಐಟಿ ಇಂಜಿನಿಯರ್ ಎಂದು, ಇತ್ತೀಚೆಗಷ್ಟೇ ಅಮೆರಿಕದಲ್ಲಿ ಸೇವೆ ಸಲ್ಲಿಸಿ ಭಾರತಕ್ಕೆ ಮರಳಿರುವುದಾಗಿ ಬಿಂಬಿಸಿಕೊಂಡಿದ್ದ.
ಇವನೊಂದಿಗೆ ಬೆಳೆದ ಸಲುಗೆಯಿಂದಾಗಿ, ಆಕೆ ಕಳೆದ ವರ್ಷವೇ ಉದಯನ್ ದಾಸ್ ಜತೆಗೆ ಲಿವಿಂಗ್ ಟುಗೆದರ್ ಮಾದರಿಯ ಸಂಬಂಧಕ್ಕೊಪ್ಪಿ ಜತೆಗೆ ಬಂದು ನೆಲೆಸಿದ್ದಳು. ಆದರೆ, ಆಕೆಯ ನಡವಳಿಕೆ ಮೇಲೆ ಅನುಮಾನಗೊಂಡ ಆತ ಆಗಾಗ ಆಕೆಯೊಂದಿಗೆ ಜಗಳ ಕಾಯುತ್ತಿದ್ದ.
ಹೀಗೇ, ಕಳೆದ ಡಿಸೆಂಬರ್ ನಲ್ಲಿ ದೊಡ್ಡ ಜಗಳವಾಗಿ ಆಕಾಂಕ್ಷಾಳನ್ನು ಆತ ಕತ್ತು ಹಿಸುಕಿ ಕೊಂದಿದ್ದಲ್ಲದೆ, ಆಕೆಯನ್ನು ಅವರು ಮಲಗುತ್ತಿದ್ದ ಬೆಡ್ ರೂಮಿನಲ್ಲೇ ಸಿಮೆಂಟ್ ಕಾಂಕ್ರೀಟ್ ಬಳಸಿ ನಿರ್ಮಿಸಿ ಆಕೆಯ ಗೋರಿ ನಿರ್ಮಿಸಿದ್ದ.
ಇತ್ತೀಚೆಗೆ ಆ ಪ್ರಕರಣ ಪತ್ತೆಯಾಗಿ ಪೊಲೀಸರು ಆತನನ್ನು ಬಂಧಿಸಿದ್ದರು. ವಿಚಾರಣೆ ವೇಳೆ, ಕೆಲವಾರು ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ತನ್ನ ತಂದೆ ತಾಯಿಯನ್ನೂ 2010ರಲ್ಲಿ ಕೊಂದಿದ್ದಾಗಿ ಆತ ಹೇಳಿದ್ದಾನೆ. ಆತ ನೀಡಿದ ವಿಳಾಸದ ಮೇರೆಗೆ ಛತ್ತೀಸ್ ಗಢದಲ್ಲಿರುವ ಆತನ ಮನೆ ಪರಿಶೀಲನೆ ನಡೆಸಿರುವ ಪೊಲೀಸರಿಗೆ, ಮನೆಯ ಪಕ್ಕದಲ್ಲಿರುವ ತೋಟದಲ್ಲಿ ಎರಡು ತಲೆಬುರುಡೆಗಳು ಸಿಕ್ಕಿವೆ. ಅವುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications