ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುವಜನತೆಯಲ್ಲಿ ಆತ್ಮವಿಶ್ವಾಸ ಜಾಗೃತವಾದರೆ, ಆತ್ಮನಿರ್ಭರ ಭಾರತ ಸಾಧ್ಯ: ಮೋದಿ

|
Google Oneindia Kannada News

ನವದೆಹಲಿ, ಮಾರ್ಚ್ 03: ಯುವಜನತೆಯಲ್ಲಿ ಆತ್ಮವಿಶ್ವಾಸವಿದ್ದಾಗ ಮಾತ್ರ ಆತ್ಮನಿರ್ಭರ ಭಾರತ ನಿರ್ಮಾಣ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆತ್ಮ ನಿರ್ಭರ ಕುರಿತು ಸೆಮಿನಾರ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಮೋದಿ, ತಮ್ಮ ಶಿಕ್ಷಣ, ಕೌಶಲ್ಯ ಮತ್ತು ಜ್ಞಾನದಲ್ಲಿ ನಂಬಿಕೆಯಿದ್ದರೆ ಯುವಕರಲ್ಲಿ ತಾನಾಗಿಯೇ ಆತ್ಮವಿಶ್ವಾಸ ಮೂಡುತ್ತದೆ ಎಂದು ಹೇಳಿದರು.

ಆತ್ಮ ನಿರ್ಭರ ಭಾರತಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ; ಮೋದಿಆತ್ಮ ನಿರ್ಭರ ಭಾರತಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ; ಮೋದಿ

ಪ್ರತಿಯೊಂದು ಭಾಷೆಗಳ ತಜ್ಞರು, ವಿಶ್ವದ ಪ್ರಮುಖ ಉತ್ತಮ ವಿಷಯಗಳು ಭಾರತೀಯ ಭಾಷೆಯಲ್ಲಿ ಜನರಿಗೆ ಸಿಗುವಂತೆ ನೋಡಿಕೊಳ್ಳುವುದು ಅವರ ಜವಾಬ್ದಾರಿಯಾಗಿದೆ ಎಂದರು. ಹೈಡ್ರೋಜನ್ ವಾಹನಗಳ ಪರೀಕ್ಷೆಯನ್ನು ಭಾರತ ಮಾಡಿದೆ. ಅದನ್ನು ಸಾರಿಗೆಯ ಇಂಧನವಾಗಿ ಬಳಕೆ ಮಾಡಲು ಉದ್ಯಮವನ್ನು ಸಿದ್ಧಗೊಳಿಸುವಂತೆ ನಾವು ಮಾಡಬೇಕು.

Youth Must Have Self-Confidence, Faith In Education: PM Modi

ಇಂಧನವನ್ನು ಸ್ವಾವಲಂಬನೆ ಮಾಡುವ ನಿಟ್ಟಿನಲ್ಲಿ ಹಸಿರು ಇಂಧನವು ಮುಂದಿನ ದಿನಗಳಲ್ಲಿ ದೇಶಕ್ಕೆ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ವರ್ಷದ ಬಜೆಟ್ ನಲ್ಲಿ ಘೋಷಿಸಿರುವ ಹೈಡ್ರೋಜನ್ ಮಿಷನ್ ಬಹುದೊಡ್ಡ ಕ್ರಾಂತಿಯಾಗಿದೆ ಎಂದು ಪ್ರಧಾನಿ ಹೇಳಿದರು.

ಈ ವರ್ಷದ ಬಜೆಟ್ ನಲ್ಲಿ ಶಿಕ್ಷಣ, ಕೌಶಲ್ಯ, ಸಂಶೋಧನೆ ಮತ್ತು ಸೃಜನಾತ್ಮಕತೆಗೆ ಒತ್ತು ನೀಡಲಾಗಿದೆ ಎಂದ ಪ್ರಧಾನ ಮಂತ್ರಿ, ಹೊಸ ಶಿಕ್ಷಣ ನೀತಿಯಲ್ಲಿ ಭಾರತೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಲಾಗುತ್ತದೆ.

English summary
Prime Minister Narendra Modi addressed the youth of the nation in a seminar today, where he shone a light on the importance of education and self-confidence for transforming India into ‘Atmanirbhar Bharat’ in the upcoming years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X