Video Viral: ರೈಲಿನ ಬೋಗಿಯಲ್ಲೇ ಬಕೆಟ್ ಹಿಡಿದು ಸ್ನಾನ ಮಾಡಿದ ಯುವಕ: ಮುಂದಾಗಿದ್ದೇನು?
ನವದೆಹಲಿ, ನವೆಂಬರ್ 10: ಭಾರತೀಯ ರೈಲ್ವೆಯು ಇತ್ತೀಚೆಗೆ ನಿಯಮ ಉಲ್ಲಂಘಿಸುವ ವ್ಯಕ್ತಿಗಳಿಂದ ಸುದ್ದಿಯಲ್ಲಿದೆ. ನಿರಂತರವಾಗಿ ರೈಲಿನಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಮೊನ್ನೆಯಷ್ಟೇ ರೈಲಿನ ಬೋಗಿಯಿಂದ ಇಲಾಖೆ ಸಿಬ್ಬಂದಿಯೇ ಕಸವನ್ನು ಚೀಲದಲ್ಲಿ ಟ್ರ್ಯಾಕ್ ಮೇಲೆ ಎಸೆದ ವಿಡಿಯೋ ವೈರಲ್ ಆಗಿತ್ತು. ಇದೀಗ ರೈಲು ಬೋಗಿಯಲ್ಲೇ ಬಕೆಟ್ ಇಟ್ಟುಕೊಂಡು ಸ್ನಾನ ಮಾಡಿದ ವಿಡಿಯೋ ಹರಿದಾಡುತ್ತಿದೆ.
ಝಾನ್ಸಿ ರೈಲು ನಿಲ್ದಾಣದಲ್ಲಿ ರೈಲಿನಲ್ಲಿ ಯುವಕನೊಬ್ಬ ಸ್ನಾನ ಮಾಡುತ್ತಿರುವ ವಿಡಿಯೋ ಚಿತ್ರೀಕರಿಸಲಾಗಿದೆ. ಆನ್ಲೈನ್ನಲ್ಲಿ ಜನಪ್ರಿಯತೆ ಗಳಿಸುವ ಉದ್ದೇಶದಿಂದ ಯುವಕ ಈ ರೀತಿ ರೀಲ್ ಮಾಡಿದ್ದಾರೆ. ರೈಲ್ವೆ ಇಲಾಖೆ ಸಿಬ್ಬಂದಿ, ರಕ್ಷಣಾ ಪಡೆ ಆತನನ್ನು ಪತ್ತೆ ಮಾಡಿ ವಿಚಾರಿಸಿದಾಗ ಆತನೇ ಈ ಬಗ್ಗೆ ಒಪ್ಪಿಕೊಂಡಿದ್ದಾರೆ. ಸದ್ಯ ಆ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದೆ. ಉತ್ತರ ಮಧ್ಯ ರೈಲ್ವೆ ಎಲ್ಲಾ ಪ್ರಯಾಣಿಕರು ಇತರ ಪ್ರಯಾಣಿಕರಿಗೆ ಅನುಚಿತ ಮತ್ತು ಅನಾನುಕೂಲಕರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ರೈಲ್ವೆ ಇಲಾಖೆ ಕೋರಿದೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿರುವ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. 'ವ್ಯಕ್ತಿಯೊಬ್ಬ ರೈಲನ್ನು ತನ್ನ ಬಾತ್ ರೂಮ್ ಆಗಿ ಮಾಡಿಕೊಂಡಿದ್ದಾನೆ' ಎಂಬ ಶಿರ್ಷಿಕೆಯ ವಿಡಿಯೋವನ್ನು ಓಕ್ ಎಮಿನೆಂಟ್ ಎಕ್ಸ್ ಹ್ಯಾಂಡಲ್ನಿಂದ ಹಂಚಿಕೊಳ್ಳಲಾಗಿದೆ. ಅದೇ ವಿಡಿಯೋವನ್ನು ರಿಪೋಸ್ಟ್ ಮಾಡಿರುವ ಉತ್ತರ ಮಧ್ಯ ರೈಲ್ವೆಯು, ಕಾನೂನು ಕ್ರಮ ಕೈಗೊಂಡಿದ್ದಾಗಿ ತಿಳಿಸಿದೆ.
वीरांगना लक्ष्मीबाई झांसी स्टेशन पर ट्रेन में नहाने का वीडियो बनाने वाले व्यक्ति की पहचान कर ली गई है। इस व्यक्ति द्वारा रील बनाकर लोकप्रियता हासिल करने के लिये ऐसा कार्य करने की बात स्वीकार की गयी है। आरपीएफ द्वारा उपरोक्त व्यक्ति के विरुध्द विधिक कार्यवाही की जा रही है।
— North Central Railway (@CPRONCR) November 9, 2025
उत्तर… https://t.co/eZ9akMmqOF
ರೈಲಿನಲ್ಲಿ, ರೈಲ್ವೆ ನಿಲ್ದಾಣ ಸೇರಿದಂತೆ ದೇಶದ ರೈಲು ಇಲಾಖೆ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ಮರುಕಳಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಅಸಯ್ಯ, ಮುಜುಗರ ತರುವಂತೆ ಮಾಡಿದ ಈ ಯುವಕನ ವಿರುದ್ಧ ದಂಡ ಹೇರಬೇಕು. ಇತರರು ಮುಂದೆ ಈ ರೀತಿ ನಡೆದುಕೊಳ್ಳದಂತೆ ಎಚ್ಚರ ವಹಿಸಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ಇತ್ತೀಚೆಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ರೈಲಿನ ಟಾಯ್ಲೆಟ್ ಪಕ್ಕ ಕಸ ಹಾಕಲು ಇಟ್ಟಿದ್ದ ಬಾಕ್ಸ್ ನಿಂದ ಎಲ್ಲ ತ್ಯಾಜ್ಯವನ್ನು ಪ್ಲಾಸ್ಟಿಕ್ ಕಪ್ಪು ಚೀಲದಲ್ಲಿ ತುಂಬಿ ಚಲಿಸುವ ರೈಲಿನಿಂದ ಹೊರಕ್ಕೆ ಟ್ರ್ಯಾಕ್ ಮೇಲೆ ಎಸೆದಿದ್ದಾರೆ. ಈ ವಿಡಿಯೋವನ್ನು ಅದೇ ಬೋಗಿಯಲ್ಲಿದ್ದ ಪ್ರಯಾಣಿಕರು ಸೆರೆ ಹಿಡಿದು ಹರಿಬಿಟ್ಟಿದ್ದರು. ಸ್ವಚ್ಛತೆಗೆ ಆದ್ಯತೆ ನೀಡುವ ಭಾರತೀಯ ರೈಲ್ವೆ ಇಲಾಖೆಯು ಇಂತಹ ಘಟನೆಗಳು, ನಿರ್ಲಕ್ಷ್ಯ ವಿರುದ್ಧ ಮೌನ ವಹಿಸದೇ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.
-
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications