ಐಎಎಫ್ ಪೈಲಟ್ ಅಭಿನಂದನ್ ಗೆ ಸಂಬಂಧಿಸಿದ 11 ವಿಡಿಯೋ ಬಂದ್
ಬೆಂಗಳೂರು, ಮಾರ್ಚ್ 01: ಭಾರತೀಯ ವಾಯುಸೇನೆ ವಿಂಗ್ ಕಮಾಂಡರ್, ಪೈಲಟ್ ಅಭಿನಂದನ್ ವರ್ತಮಾನ್ ಅವರಿಗೆ ಸಂಬಂಧಿಸಿದ 11 ಆಕ್ಷೇಪಾರ್ಹ ವಿಡಿಯೋಗಳನ್ನು ಗೂಗಲ್ ಸ್ವಾಮ್ಯದ ಯೂಟ್ಯೂಬಿನಿಂದ ತೆಗೆದು ಹಾಕಲಾಗಿದೆ.
ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯಿಂದ ಈ ವಿಡಿಯೋಗಳನ್ನು ತೆಗೆದು ಹಾಕುವಂತೆ ಮನವಿ ಬಂದಿತ್ತು. ಆಯಾ ನೆಲದ ಕಾನೂನಾತ್ಮಕ ವಿಷಯಗಳಿಗೆ ನಾವು ಬೆಲೆ ನೀಡುತ್ತೇವೆ. ತಕ್ಷಣವೇ ಮನವಿಯನ್ನು ಪುರಸ್ಕರಿಸಿ, ಆಕ್ಷೇಪಾರ್ಹ ವಿಡಿಯೋಗಳನ್ನು ತೆಗೆದು ಹಾಕಲಾಗಿದೆ ಎಂದು ಗೂಗಲ್ ಸಂಸ್ಥೆ ವಕ್ತಾರರು ಹೇಳಿದ್ದಾರೆ.
ಪಾಕಿಸ್ತಾನದ ಎಫ್ 16 ವಿಮಾನವನ್ನು ಹೊಡೆದುರುಳಿಸುವ ಭರದಲ್ಲಿ ಮಿಗ್ 21ರಲ್ಲಿದ್ದ ಪೈಲಟ್ ಅಭಿನಂದನ್ ಅವರು ಪಾಕ್ ಗಡಿ ಪ್ರವೇಶಿಸಿದ್ದಾರೆ. ಯುದ್ಧ ವಿಮಾನದಿಂದ ಪ್ಯಾರಚ್ಯೂಟ್ ಬಳಸಿ ನೆಲಕ್ಕೆ ಬಿದ್ದ ಅಭಿನಂದನ್ ಅವರನ್ನು ಪಾಕಿಸ್ತಾನಿ ಸೇನೆ ಸೆರೆ ಹಿಡಿದಿತ್ತು.

ಅಭಿನಂದನ್ ಅವರು ಸೆರೆ ಸಿಕ್ಕಾಗ ಅವರ ಮೇಲೆ ಹಲ್ಲೆಯಾಗಿದೆ. ಮುಖ ರಕ್ತಮಯವಾಗಿದೆ. ಪಾಕ್ ಸೈನಿಕರು ಹಲ್ಲೆ ಮಾಡಿದ್ದಾರೆ. ಕಣ್ಣುಪಟ್ಟಿ ಕಟ್ಟಿ ಹಿಂಸೆ ನೀಡಿದ್ದಾರೆ ಎಂಬ ವಿಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಬುಧವಾರದಿಂದಲೆ ಹರಿದಾಡುತ್ತಿದ್ದವು. ಜಿನೀವಾ ಒಪ್ಪಂದ ಹಾಗೂ ಅಂತಾರಾಷ್ಟ್ರೀಯ ಮಾನವತಾವಾದ ಕಾನೂನಿನ ಪ್ರಕಾರ ಈ ರೀತಿ ಯಾವುದೇ ದೇಶದ ಯುದ್ಧ ಕೈದಿಯ ಕುರಿತ ಮಾಹಿತಿ, ಚಿತ್ರ ಹಾಗೂ ವಿಡಿಯೋಗಳನ್ನು ಯಾವ ದೇಶ ಕೂಡಾ ಪ್ರಸಾರ ಮಾಡುವಂತಿಲ್ಲ.
ಜಾಗತಿಕ ಮಟ್ಟದಲ್ಲಿ ಭಾರಿ ಒತ್ತಡ ಕಂಡು ಬಂದಿದ್ದರಿಂದ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಜಂಟಿ ಸಂಸತ್ ಅಧಿವೇಶನದಲ್ಲಿ, ಐಎಎಫ್ ಪೈಲಟ್ ಅಭಿನಂದನ್ ಅವರನ್ನು ಶುಕ್ರವಾರ ಮಧ್ಯಾಹ್ನ ಬಿಡುಗಡೆ ಮಾಡುವುದಾಗಿ ಘೋಷಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications