ಸಿಬಿಐ ನ್ಯಾಯಾಲಯದ ಕಟಕಟೆಗೆ ಶ್ರೀನಿವಾಸನ್
ಹೈದರಾಬಾದ್, ಸೆ.12: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ತಣ್ಣಾಗುತ್ತಿದ್ದಂತೆ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದ ಎನ್.ಶ್ರೀನಿವಾಸನ್ ಗೆ ಈಗ ಸಿಬಿಐ ವಿಚಾರಣೆ ಬಿಸಿ ತಟ್ಟಲಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸನ್ ಅವರ ಹೆಸರು ಚಾರ್ಜ್ ಶೀಟ್ ನಲ್ಲಿ ಕಾಣಿಸಿಕೊಂಡಿರುವುದರಿಂದ ನಾಂಪಲ್ಲಿ ಕೋರ್ಟಿಗೆ ಶ್ರೀನಿ ಬರಲೇಬೇಕಿದೆ.
ವೈಎಸ್ ಆರ್ ಪಕ್ಷದ ಅಧ್ಯಕ್ಷ ಹಾಗೂ ಕಡಪ ಸಂಸದ ಜಗಮೋಹನ್ ರೆಡ್ಡಿ ಒಡೆತನದ ಕಂಪೆನಿಯಲ್ಲಿ ಕಾನೂನು ಬಾಹಿರವಾಗಿ ಇಂಡಿಯಾ ಸಿಮೆಂಟ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸನ್ ಅವರು ಹಣ ಹೂಡಿಕೆ ಮಾಡಿರುವುದು ತನಿಖೆಯಿಂದ ಸಾಬೀತಾಗಿದೆ. ಸಿಬಿಐ ತಂಡ ಶ್ರೀನಿವಾಸನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಿದೆ ಎಂಬ ಸುದ್ದಿ ಕೂಡಾ ಹಬ್ಬಿದೆ.
ಇತ್ತೀಚೆಗೆ ಸಿಬಿಐ ಹೈದರಾಬಾದ್ ನ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿತ್ತು. ಜಗನ್ ಮೋಹನ್ ರೆಡ್ಡಿ, ಎನ್.ಶ್ರೀನಿವಾಸನ್, ಕೈಗಾರಿಕೋದ್ಯಮಿ ಪೆನ್ನ ಪ್ರತಾಪ್ ರೆಡ್ಡಿ, ಪ್ರೋತ್ಸಾಹಕ ರಘುರಾಮ್, ಇಬ್ಬರು ಐಎಎಸ್ ಆಧಿಕಾರಿಗಳಾದ ಎಂ.ಸ್ಯಾಮ್ಯುಯಲ್, ಆದಿತ್ಯನಾಥ್ ದಾಸ್, ನಿವೃತ್ತ ಐಎಎಸ್ ಅಧಿಕಾರಿ ಬಿ.ಕೃಪಾನಂದಮ್ ಸೇರಿದಂತೆ ಮತ್ತಿತರರ ಮೇಲೆ ದೂರು ಸಲ್ಲಿಸಲಾಗಿತ್ತು. ರೆಡ್ಡಿ ಒಡೆತನದ ಕಂಪೆನಿಯಲ್ಲಿ ಎನ್.ಶ್ರೀನಿವಾಸನ್ ಹಾಗೂ ಮತ್ತಿತರರು ಕಾನೂನು ಬಾಹಿರವಾಗಿ ಹಣ ಹೂಡಿಕೆ ಮಾಡಿದ್ದಾರೆ.
ಇಂಡಿಯಾ ಸಿಮೆಂಟ್ಸ್ ಮಾಲೀಕರು ರಘುರಾಮ್ ಮತ್ತು ಪೆನ್ನ ಸಿಮೆಂಟ್ಸ್ ಹೆಸರಿನಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿರುವುದನ್ನು ಸಿಬಿಐ ಪತ್ತೆ ಮಾಡಿದೆ.

ಇದೀಗ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವುದರಿಂದ ಹೈದರಾಬಾದ್ ನಿಂದ ನಾಂಪಲ್ಲಿಯರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಎನ್.ಶ್ರೀನಿವಾಸನ್ ಸೇರಿದಂತೆ ಅನೇಕರು ಹಾಜರಾಗಬೇಕಿದೆ.
ಬಂಧನ ಸಾಧ್ಯತೆ: ಒಂದು ವೇಳೆ ಹೆಚ್ಚಿನ ಮಾಹಿತಿಗಾಗಿ ಇವರನ್ನು ವಿಚಾರಣೆಗೊಳಪಡಿಸಬೇಕೆಂದು ಸಿಬಿಐ ನ್ಯಾಯಾಲಯಕ್ಕೆ ಕೋರಿದರೆ ಬಂಧನವಾಗುವ ಸಾಧ್ಯತೆ ಹೆಚ್ಚಾಗಿದೆ. ಆಂಧ್ರ ಪ್ರದೇಶ ಹೈಕೋರ್ಟ್ ನ ಸಹಾಯಕ ಸಾಲಿಸಿಟರ್ ಜನರಲ್ ಪಿ.ವಿಷ್ಣುವರ್ಧನ್ ರೆಡ್ಡಿ ಹೇಳಿರುವಂತೆ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿರುವ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಈಗಾಗಲೇ ಅವರ ವಿರುದ್ಧ ಸಮನ್ಸ್ ಜಾರಿಯಾಗಿದೆ. ನ್ಯಾಯಾಲಯ ಜಾಮೀನು ನೀಡದಿದ್ದರೆ ಬಂಧನವಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಪ್ರಕರಣದ ಗಂಭೀರತೆಯನ್ನು ನ್ಯಾಯಾಲಯ ಅರಿತು ಜಾಮೀನು ನಿರ್ಧಾರ ಮಾಡುತ್ತದೆ. ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದರೆ ಸಿಬಿಐ ಬಂಧಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಜಗನ್ ಜಾಮೀನು ಅರ್ಜಿ: ಸಿಬಿಐ ವಿಶೇಷ ನ್ಯಾಯಾಲಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ಮೋಹನ್ ರೆಡ್ಡಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.18 ರಂದು ಕೈಗೆತ್ತಿಕೊಳ್ಳಲಿದೆ. ಕಳೆದ ವರ್ಷ ಮೇ 27ರಂದು ಜಗನ್ ಅವರನ್ನು ಬಂಧಿಸಲಾಗಿತ್ತು. ಸದ್ಯ ಹೈದರಾಬಾದಿನ ಚಂಚಲಗುಡ ಜೈಲಿನಲ್ಲಿದ್ದಾರೆ.
ನ್ಯಾಯಾಂಗ ಬಂಧನ ಸೆ.20ರ ತನಕ ಇದ್ದು ಸಿಬಿಐ ಮತ್ತೆ ಮತ್ತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ಮೂಲಕ ಪ್ರಕರಣವನ್ನು ವಿಳಂಬಗೊಳಿಸುತ್ತಿದೆ. ನಾಲ್ಕು ತಿಂಗಳೊಳಗೆ ಪ್ರಕರಣ ಇತ್ಯರ್ಥಗೊಳಿಸುವಂತೆ ಸಿಬಿಐಗೆ ಕೋರ್ಟ್ನಿ ನಿರ್ದೇಶನ ನೀಡಿದೆ. ಆಂಧ್ರಪ್ರದೇಶದ ಅಳಿವು ಉಳಿವಿನ ಹೋರಾಟ ನಡೆಯುತ್ತಿದ್ದು ರಾಜಕೀಯ ಮುಖಂಡನಾಗಿ ನಾನು ಹೋರಾಟದಲ್ಲಿ ಭಾಗಿಯಾಗಲು ಅವಕಾಶ ನೀಡಬೇಕು ಎಂದು ಜಗನ್ ಅರ್ಜಿ ಹಾಕಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications