YS Sharmila Manhandles: ಪೊಲೀಸರ ಕೆನ್ನೆಗೆ ಹೊಡೆದ ವೈಎಸ್ಆರ್ ತೆಲಂಗಾಣ ಪಕ್ಷದ ನಾಯಕಿ ವೈಎಸ್ ಶರ್ಮಿಳಾ
ಹೈದರಾಬಾದ್, ಏಪ್ರಿಲ್ 24: ವೈಎಸ್ಆರ್ ತೆಲಂಗಾಣ ಪಕ್ಷದ ನಾಯಕಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಪ್ರತಿಭಟನೆಯ ವೇಳೆ ಪೊಲೀಸ್ ಸಿಬ್ಬಂದಿಯ ಕೆನ್ನೆಗೆ ಹೊಡೆದ ವಿಡಿಯೋ ವೈರಲ್ ಆಗಿದ್ದು ನಂತರ ಅವರನ್ನು ಬಂಧಿಸಲಾಗಿದೆ.
ರಾಜ್ಯ ಸರ್ಕಾರ ನಡೆಸಿದ ನೇಮಕಾತಿ ಪರೀಕ್ಷೆಗಳಿಗೆ ಪ್ರಶ್ನೆಗಳು ಸೋರಿಕೆಯಾಗಿರುವ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಕಚೇರಿಗೆ ತೆರಳುತ್ತಿದ್ದಾಗ ಶರ್ಮಿಳಾ ಅವರನ್ನು ಪೊಲೀಸರು ತಡೆದರು. ವೀಡಿಯೊದಲ್ಲಿ ಶರ್ಮಿಳಾ ಅವರು ಕಾರನ್ನು ಹತ್ತಲು ಸಮೀಪಿಸುತ್ತಿದ್ದಂತೆ ಅವರನ್ನು ತಡೆಯಲು ಪೊಲೀಸ್ ಸಿಬ್ಬಂದಿ ಪ್ರಯತ್ನಿಸುತ್ತಿರುವುದನ್ನು ತೋರಿಸಿದೆ. ವಾಹನವನ್ನು ತಡೆದು ನಿಲ್ಲಿಸಿದ ನಂತರ ಶರ್ಮಿಳಾ ಅವರು ಒಬ್ಬ ಪೋಲೀಸ್ನ ಬಳಿಗೆ ಹೋಗುತ್ತಿರುವುದಕ್ಕೆ ಪೊಲೀಸ್ ಒಬ್ಬರಿಗೆ ಕಪಾಳಮೋಕ್ಷ ಮಾಡಿದರು.

ಅಲ್ಲದೆ ಅವರನ್ನು ತಡಯಲು ಬರುತ್ತಿದ್ದ ಕೆಲವು ಪೊಲೀಸರಿಗೂ ಹಲ್ಲೆಗೆ ಮುಂದಾಗುವುದು ನೋಡಬಹುದು. ಬಳಿಕ ಪೊಲೀಸ್ ಅಧಿಕಾರಿ ಮತ್ತು ಶರ್ಮಿಳಾ ನಡುವೆ ವಾಗ್ವಾದವು ಪ್ರಾರಂಭವಾದಾಗ ಇತರ ಪೊಲೀಸ್ ಸಿಬ್ಬಂದಿ ಅವರನ್ನು ಕರೆದೊಯ್ಯಲು ಪ್ರಯತ್ನಿಸಿದರು. ಮತ್ತೊಂದು ವೀಡಿಯೊದಲ್ಲಿ ಶ್ರೀಮತಿ ಶರ್ಮಿಳಾ ಪೊಲೀಸ್ ಮಹಿಳೆಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡುಬಂದಿದ್ದು, ಪೊಲೀಸರು ಆಕೆಯ ಕೈಗಳನ್ನು ಹಿಡಿದು ತಡೆಯಲು ಪ್ರಯತ್ನಿಸುತ್ತಿರುವುದು ಕಂಡು ಬಂದಿದೆ.
#WATCH | YSRTP Chief YS Sharmila manhandles police personnel as she is being detained to prevent her from visiting SIT office over the TSPSC question paper leak case, in Hyderabad pic.twitter.com/StkI7AXkUJ
— ANI (@ANI) April 24, 2023
ತೆಲಂಗಾಣ ರಾಜ್ಯ ಲೋಕಸೇವಾ ಆಯೋಗ ನಡೆಸಿದ ನೇಮಕಾತಿ ಪರೀಕ್ಷೆಗಳಿಗೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿರುವ ಆರೋಪದ ಮೇಲೆ ತೆಲಂಗಾಣ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದೆ. ಈ ಆರೋಪಗಳು ಮುನ್ನೆಲೆಗೆ ಬಂದಾಗಿನಿಂದ ಕನಿಷ್ಠ 11 ಜನರನ್ನು ಬಂಧಿಸಲಾಗಿದೆ ಮತ್ತು ಸರ್ಕಾರಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮೂರು ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.
#WATCH | Telangana Police detains YSRTP Chief YS Sharmila and shifts her to the local police station. She was detained after police officials received information about her visiting SIT office over the TSPSC question paper leak case pic.twitter.com/n6VaYgRarx
— ANI (@ANI) April 24, 2023
ಸೋರಿಕೆ ಆರೋಪದ ಬಗ್ಗೆ ವಿರೋಧ ಪಕ್ಷಗಳು ಕೆ ಚಂದ್ರಶೇಖರ ರಾವ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ತೆಲಂಗಾಣದಲ್ಲಿ ಸ್ವತಂತ್ರ ರಾಜಕೀಯ ಗುರುತನ್ನು ರೂಪಿಸಲು ಶ್ರಮಿಸುತ್ತಿರುವ ಶರ್ಮಿಳಾ ಅವರು ನಿರಂತರವಾಗಿ ಪತ್ರಿಕೆ ಸೋರಿಕೆ ವಿಷಯವನ್ನು ಎತ್ತುತ್ತಿದ್ದಾರೆ. ಕಳೆದ ತಿಂಗಳು, ಈ ವಿಷಯದ ಬಗ್ಗೆ ಹೈದರಾಬಾದ್ನಲ್ಲಿ ನಡೆದ ಪ್ರತಿಭಟನೆಯಿಂದ ಆಕೆಯನ್ನು ಬಂಧಿಸಲಾಯಿತು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications