ಅಮರ್ ಸಿಂಗ್ ಗೆ 24 ಕಮ್ಯಾಂಡೋಗಳ ಕಾವಲು!
ನವದೆಹಲಿ, ಜ. 8: ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಸಮಾಜವಾದಿ ಪಕ್ಷದಲ್ಲಿ ಭುಗಿಲೆದ್ದಿರುವ ಭಿನ್ನಮತದ ಹಿನ್ನೆಲೆಯಲ್ಲಿ ಆ ಪಕ್ಷದ ರಾಜ್ಯಸಭಾ ಸದಸ್ಯರಾದ ಅಮರ್ ಸಿಂಗ್ ಅವರಿಗೆ 'ಝಡ್' ಶ್ರೇಣಿಯ ಭದ್ರತೆ ನೀಡಲಾಗಿದೆ.
ಹೀಗಾಗಿ, ಅಮರ್ ಸಿಂಗ್ ಅವರನ್ನು ನಿತ್ಯವೂ 24 ಅರೆಸೇನಾ ಸಿಬ್ಬಂದಿಯ ಕಮ್ಯಾಂಡೋಗಳು ಸುತ್ತುವರೆದು ಕಾವಲು ಕಾಯಲಿದ್ದಾರೆ.
ಸಮಾಜವಾದಿ ಪಕ್ಷದಲ್ಲಿ ಇತ್ತೀಚೆಗೆ ನಡೆದಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ಆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗಳು ಸನ್ನಿಹಿತವಾಗಿರುವುದರಿಂದ ಅಮರ್ ಸಿಂಗ್ ಅವರಿಗೆ ತೊಂದರೆಯಾಗಬಹುದಾದ ಲಕ್ಷಣಗಳು ಗೋಚರಿಸಿವೆ ಎನ್ನಲಾಗಿದೆ.

ಸಮಾಜವಾದಿ ಪಕ್ಷದ ಧುರೀಣ ಮುಲಾಯಂ ಸಿಂಗ್ ಅವರ ಆಪ್ತರಾಗಿರುವ ಕಾರಣಕ್ಕೆ ಅಮರ್ ಸಿಂಗ್ ಅವರ ಮೇಲೆ ದಾಳಿ ನಡೆಸಬಹುದೆಂಬ ಸಂಶಯವನ್ನು ಕೇಂದ್ರ ಗುಪ್ತಚರ ಇಲಾಖೆಯು ಕೇಂದ್ರ ಗೃಹ ಸಚಿವಾಲಯಕ್ಕೆ ತಿಳಿಸಿ, ಅವರಿಗೆ ಅತಿ ಗಣ್ಯರಿಗೆ ನೀಡಲಾಗುವ ಭದ್ರತೆಯನ್ನು ನೀಡಬೇಕೆಂದು ತಿಳಿಸಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಮರ್ ಅವರಿಗೆ ಝಡ್ ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಗುಪ್ತದಳ ಇಲಾಖೆಯ ಮಾಹಿತಿ ಬಂದ ಕೂಡಲೇ ಕ್ರಮ ಕೈಗೊಂಡಿರುವ ಕೇಂದ್ರ ಗೃಹ ಸಚಿವಾಲಯ, ಕೇಂದ್ರೀಯ ಔದ್ಯೋಗಿಕಾ ವಲಯದ ಭದ್ರತಾ ಪಡೆಗೆ (ಸಿಐಎಸ್ಎಫ್) ಸೂಚನೆ ನೀಡಿ, ಅಮರ್ ಸಿಂಗ್ ಅವರ ಬಿಗಿ ಭದ್ರತೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಹೇಳಿದೆ. ಈ ಹಿನ್ನೆಲೆಯಲ್ಲಿ, ಕೇಂದ್ರೀಯ ಅರೆಸೇನಾ ಸಿಬ್ಬಂದಿಯನ್ನು ಅಮರ್ ಸಿಂಗ್ ಅವರ ರಕ್ಷಣೆಗೆ ನಿಯೋಜಿಸಲಾಗಿದೆ.
2008ರಲ್ಲಿ ಅಮರ್ ಸಿಂಗ್ ಅವರಿಗೆ ಸಿಐಎಸ್ಎಫ್ ವತಿಯಿಂದ ಭದ್ರತೆ ನೀಡಲಾಗಿತ್ತು. ಆನಂತರ, ಅವರ ಭದ್ರತೆಯ ಜವಾಬ್ದಾರಿಯನ್ನು ಉತ್ತರ ಪ್ರದೇಶ ಪೊಲೀಸ್ ಇಲಾಖೆ ವಹಿಸಿಕೊಂಡಿತ್ತು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications