"Zero Tolerance": ಬಾಲ್ಯವಿವಾಹದ ಮೇಲೆ ಅಸ್ಸಾಂನಾದ್ಯಂತ 1,800 ಕ್ಕೂ ಹೆಚ್ಚು ಬಂಧನ!
ಬಾಲ್ಯವಿವಾಹದಿಂದಾಗಿ ಅಸ್ಸಾಂನಲ್ಲಿ ಹೆಚ್ಚುತ್ತಿರುವ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲು ಅಸ್ಸಾಂ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.
ಗುವಾಹಟಿ ಫೆಬ್ರವರಿ 3: ಅಸ್ಸಾಂನಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಹೆಚ್ಚಾಗಿದ್ದು ಇದಕ್ಕೆ ಬಾಲ್ಯ ವಿವಾಹ ಪ್ರಾಥಮಿಕ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಬಾಲ್ಯ ವಿವಾಹ ತಡೆಗೆ ಅಸ್ಸಾಂ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ.
ಅಸ್ಸಾಂನಲ್ಲಿ ಇದುವರೆಗೆ ಬಾಲ್ಯ ವಿವಾಹ ತಡೆಗೆ 1,800 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು ತಿಳಿಸಿದ್ದಾರೆ. ಹದಿನೈದು ದಿನಗಳೊಳಗೆ ಅಸ್ಸಾಂನಾದ್ಯಂತ ದಾಖಲಾದ 4,000 ಕ್ಕೂ ಹೆಚ್ಚು ಬಾಲ್ಯ ವಿವಾಹ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ನಿನ್ನೆ ತಿಳಿಸಿದ್ದರು, ಶುಕ್ರವಾರದಿಂದ ಶಿಸ್ತುಕ್ರಮ ಪ್ರಾರಂಭವಾಗಲಿದೆ ಎಂದು ಘೋಷಿಸಿದರು.

ಸ್ಸಾಂನಾದ್ಯಂತ 1,800 ಕ್ಕೂ ಹೆಚ್ಚು ಬಂಧನ
"ಬಾಲ್ಯ ವಿವಾಹ ನಿಷೇಧ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಸ್ತುತ ರಾಜ್ಯಾದ್ಯಂತ ಬಂಧನಗಳು ನಡೆಯುತ್ತಿವೆ. 1800 ಕ್ಕೂ ಹೆಚ್ಚು ಜನರನ್ನು ಇಲ್ಲಿಯವರೆಗೆ ಅಸ್ಸಾಂನಲ್ಲಿ ಬಂಧಿಸಲಾಗಿದೆ. ಮಹಿಳೆಯರ ಮೇಲಿನ ಅಕ್ಷಮ್ಯ ಮತ್ತು ಘೋರ ಅಪರಾಧದ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾನು ಅಸ್ಸಾಂ ಪೊಲೀಸರಿಗೆ ಕೇಳಿದ್ದೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬಾಲ್ಯ ವಿವಾಹ (2006) ನಿಷೇಧ ಕಾಯ್ದೆ ಅಡಿ ಕ್ರಮ
'ರಾಜ್ಯದಲ್ಲಿ ಬಾಲ್ಯವಿವಾಹದ ಬೆದರಿಕೆಯನ್ನು ಕೊನೆಗೊಳಿಸುವ ಸಂಕಲ್ಪದಲ್ಲಿ ಅಸ್ಸಾಂ ಸರ್ಕಾರ ದೃಢವಾಗಿದೆ. ಇದುವರೆಗೆ ಅಸ್ಸಾಂ ಪೊಲೀಸರು ರಾಜ್ಯಾದ್ಯಂತ 4,004 ಪ್ರಕರಣಗಳನ್ನು ದಾಖಲಿಸಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿದೆ. ಪ್ರಕರಣಗಳ ಮೇಲಿನ ಕ್ರಮವು ಫೆಬ್ರವರಿ 3 ರಿಂದ ಪ್ರಾರಂಭವಾಗಲಿದೆ. ಎಲ್ಲರೂ ಸಹಕರಿಸುವಂತೆ ವಿನಂತಿಸುತ್ತೇನೆ' ಎಂದು ಅವರು ನಿನ್ನೆ ಟ್ವೀಟ್ ಮಾಡಿದ್ದರು.

ಧರ್ಮಗುರುಗಳು, ಪುರೋಹಿತರ ವಿರುದ್ಧ ಕ್ರಮ
ಅಸ್ಸಾಂ ಕ್ಯಾಬಿನೆಟ್ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವ ಪುರುಷರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಅಥವಾ ಪೋಕ್ಸೊ ಕಾಯ್ದೆಯಡಿ ಪ್ರಕರಣ ವಿಧಿಸಲು ನಿರ್ಧರಿಸಿದೆ. 14-18 ವರ್ಷ ವಯಸ್ಸಿನ ಹದಿಹರೆಯದ ಹುಡುಗಿಯರನ್ನು ಮದುವೆಯಾದ ಪುರುಷರ ವಿರುದ್ಧ ಬಾಲ್ಯ ವಿವಾಹ (2006) ನಿಷೇಧ ಕಾಯ್ದೆ ಅಡಿಯಲ್ಲಿ ಆರೋಪ ಹೊರಿಸಲಾಗುವುದು ಎಂದು ನಿರ್ಧರಿಸಲಾಗಿದೆ. ಧರ್ಮಗುರುಗಳು, ಪುರೋಹಿತರಂತೆ ಇಂತಹ ಮದುವೆಗೆ ಅನುಕೂಲ ಮಾಡಿಕೊಡುವವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಎಂದರು.

ನಿಷೇಧಿತ ವಯಸ್ಸಿನಲ್ಲಿ ವಿವಾಹ
ಅಸ್ಸಾಂನಲ್ಲಿ ಹೆಚ್ಚಿನ ತಾಯಿ ಮತ್ತು ಶಿಶು ಮರಣ ಪ್ರಮಾಣಗಳು ದಾಖಲಾಗುತ್ತಿದೆ. ಇದಕ್ಕೆ ಬಾಲ್ಯ ವಿವಾಹ ಪ್ರಾಥಮಿಕ ಕಾರಣವಾಗಿದೆ. "ಹೆಚ್ಚಿನ ಶಿಶು ಮರಣ ಪ್ರಮಾಣ ಮತ್ತು ತಾಯಂದಿರ ಮರಣ ಅನುಪಾತಕ್ಕೆ (MMR) ಮುಖ್ಯ ಕಾರಣವೆಂದರೆ ಬಾಲ್ಯವಿವಾಹ. ರಾಜ್ಯದಲ್ಲಿ ಸರಾಸರಿ 31 ಪ್ರತಿಶತದಷ್ಟು ವಿವಾಹಗಳು ನಿಷೇಧಿತ ವಯಸ್ಸಿನಲ್ಲೇ ನಡೆಯುತ್ತಿವೆ" ಎಂದು ಶ್ರೀ ಶರ್ಮಾ ಹೇಳಿದರು. "ಶೂನ್ಯ ಸಹಿಷ್ಣುತೆಯ ಮನೋಭಾವ" ಮೂಲಕ ಈ ಬೆದರಿಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಸ್ಸಾಂ ಪೊಲೀಸರನ್ನು ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications