ಭಾರತದಲ್ಲಿ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಆಗಸ್ಟ್ 20: ಜಗತ್ತಿನಲ್ಲೇ ಮೊದಲ ಹಾಗೂ ಮತ್ತು ಭಾರತದಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಡಿಎನ್ಎ ಆಧಾರಿತ ಕೊವಿಡ್-19 ಲಸಿಕೆಗೆ ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ಅನುಮೋದನೆ ನೀಡಿದೆ.
"ಜೈಡಸ್ ಕ್ಯಾಡಿಲಾ ಕಂಪನಿ ಉತ್ಪಾದಿಸುವ ಜೈಕೊವ್-ಡಿ ಲಸಿಕೆಯ ತುರ್ತು ಬಳಕೆಗೆ ಶುಕ್ರವಾರ ಅನುಮೋದನೆ ನೀಡಲಾಗಿದೆ. 12 ವರ್ಷ ಮೇಲ್ಪಟ್ಟ ಮಕ್ಕಳು ಮತ್ತು ವಯಸ್ಕರಿಗೆ ಈ ಲಸಿಕೆ ನೀಡುವುದಕ್ಕೆ ಅನುಮತಿಸಲಾಗಿದೆ," ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.
ಜೈಡಸ್ ಕ್ಯಾಡಿಲಾ ಕಂಪನಿ 3 ಡೋಸ್ ಕೊವಿಡ್-19 ಲಸಿಕೆಗೆ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಭಾರತೀಯ ಔಷಧ ನಿಯಂತ್ರಕರ ತಜ್ಞರ ಸಮಿತಿಯು ಶಿಫಾರಸ್ಸು ಮಾಡಿತ್ತು. ಜೈಡಸ್ ತನ್ನ ಎರಡು ಡೋಸ್ ಲಸಿಕೆಯ ಕಟ್ಟುಪಾಡುಗಳ ಕುರಿತು ಹೆಚ್ಚುವರಿ ದತ್ತಾಂಶವನ್ನು ಸಲ್ಲಿಸುವಂತೆ ಸಮಿತಿ ಸೂಚಿಸಿತ್ತು. ಜೈಡಸ್ ಕ್ಯಾಡಿಲಾ ಹೆಲ್ತ್ ಕೇರ್ ಲಿಮಿಟೆಡ್ ಕಂಪನಿ ಉತ್ಪಾದಿಸುವ ಕೊರೊನಾವೈರಸ್ ಸೋಂಕಿನ ಜೈಕೊವ್-ಡಿ ಲಸಿಕೆಯ ಪರಿಣಾಮಕಾರಿತ್ವದ ಪ್ರಮಾಣವು ಶೇ.66.60ರಷ್ಟಿದ್ದು, ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ಕೋರಿ ಕಳೆದ ಜುಲೈ 1ರಂದೇ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಕೊವಿಡ್-19 ಲಸಿಕೆ ಸುರಕ್ಷತೆ ಮತ್ತು ಪರಿಣಾಮ:
ಭಾರತದಲ್ಲಿ ಜೈಡಸ್ ಕ್ಯಾಡಿಲಾ ಕಂಪನಿಯು ಸಂಶೋಧಿಸಿರುವ ಜೈಕೊವ್-ಡಿ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮವನ್ನು ಪರೀಕ್ಷಿಸುವ ನಿಟ್ಟಿನಲ್ಲಿ ವೈದ್ಯಕೀಯ ಪ್ರಯೋಗ ನಡೆಸಲಾಗಿತ್ತು. ದೇಶಾದ್ಯಂತ 28,000 ಜನರನ್ನು ಬಳಸಿಕೊಂಡು ಈಗಾಗಲೇ ವೈದ್ಯಕೀಯ ಪ್ರಯೋಗ ನಡೆಸಲಾಗಿದೆ. 12 ರಿಂದ 18 ವರ್ಷದ 1,000 ಮಕ್ಕಳನ್ನು ಲಸಿಕೆ ಪರೀಕ್ಷೆಯಲ್ಲಿ ಬಳಸಿಕೊಳ್ಳಲಾಗಿದ್ದು, ಜೈಕೊವ್-ಡಿ ಲಸಿಕೆಯು ಹೆಚ್ಚು ಸುರಕ್ಷಿತ ಹಾಗೂ ಪರಿಣಾಮಕಾರಿ ಎಂಬುದು ಗೊತ್ತಾಗಿದೆ.
ಅನುಮೋದನೆ ಸಿಕ್ಕ ಎರಡು ತಿಂಗಳಿನಲ್ಲಿ ಜೈಕೊವ್-ಡಿ ಲಸಿಕೆ:
ಜೈವಿಕ ತಂತ್ರಜ್ಞಾನ ವಿಭಾಗ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಂಶೋಧಿಸಿರುವ ಜೈಡಸ್ ಕ್ಯಾಡಿಲಾ ಕಂಪನಿ ಉತ್ಪಾದಿಸುವ ಜೈಕೊವ್-ಡಿ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದ ಎರಡು ತಿಂಗಳಿನಲ್ಲಿ ಲಸಿಕೆಯನ್ನು ಬಿಡುಗಡೆಗೊಳಿಸಲಾಗುತ್ತದೆ ಎಂದು ಕಂಪನಿ ಈಗಾಗಲೇ ಸ್ಪಷ್ಟಪಡಿಸಿದೆ. ಜೈಕೊವ್-ಡಿ ಲಸಿಕೆಯನ್ನು 2 ರಿಂದ -8 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸಂಗ್ರಹಿಸಿ ಇಡಬೇಕು. 25 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 3 ತಿಂಗಳ ಅವಧಿವರೆಗೂ ಸಂಗ್ರಹಿಸಲು ಸಾಧ್ಯ ಎಂದು ಕಂಪನಿ ಹೇಳಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications