ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕೆ 1 ಲಕ್ಷ ಶಿಕ್ಷಕರು ಸಸ್ಪೆಂಡ್!
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ; ಹೀಗೆ ಭಾರತದಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನವಿದೆ. ಸಾವಿರಾರು ವರ್ಷಗಳಿಂದ ಗುರುವಿಗೆ ಪೂಜ್ಯನೀಯ ಸ್ಥಾನ ನೀಡಲಾಗಿದೆ. ಆದರೆ ಭಾರತದ ನೆರೆಯ ರಾಷ್ಟ್ರ ಮಾತ್ರ ಗುರುಗಳಿಗೆ ದ್ರೋಹ ಬಗೆದು, ಶಿಕ್ಷಕರ ವಿರುದ್ಧವೇ ಸಮರ ಸಾರಿದೆ.
ಹೌದು, ನಾವು ಹೇಳ್ತಿರೋದು ಮ್ಯಾನ್ಮಾರ್ ಶಿಕ್ಷಕರ ವ್ಯಥೆಯನ್ನು. ಫೆಬ್ರುವರಿ ತಿಂಗಳಲ್ಲಿ ನಡೆದಿದ್ದ ಸೇನಾ ದಂಗೆ ವಿರೋಧಿಸಲು ಪ್ರತಿಭಟನೆ ನಡೆಸುತ್ತಿದ್ದವರ ಜೊತೆ ಸೇರಿದ್ದಕ್ಕಾಗಿ ಮ್ಯಾನ್ಮಾರ್ನ 1.25 ಲಕ್ಷಕ್ಕೂ ಹೆಚ್ಚು ಶಾಲಾ ಶಿಕ್ಷಕರನ್ನ ಅಮಾನತು ಮಾಡಿದ್ದಾರಂತೆ ಸೇನಾಧಿಕಾರಿಗಳು. ಫೆಬ್ರವರಿ 1ರಂದು ಮ್ಯಾನ್ಮಾರ್ ಸೇನೆ ಪ್ರಧಾನಿ ಸೂಕಿ ನಿವಾಸಕ್ಕೆ ನುಗ್ಗಿತ್ತು.
ಬಳಿಕ ಮ್ಯಾನ್ಮಾರ್ ಪ್ರಧಾನಿ ಆಂಗ್ ಸಾನ್ ಸೂಕಿ ಸೇರಿದಂತೆ ಸಂಪುಟ ಸಚಿವರು ಮತ್ತು ಸಂಸದರನ್ನು ಗೃಹ ಬಂಧನದಲ್ಲಿ ಇರಿಸಿತ್ತು. ಹೀಗೆ ದೇಶ ಸೇನೆ ಹಿಡಿತಕ್ಕೆ ಹೋದ ನಂತರ ಮ್ಯಾನ್ಮಾರ್ ಅಕ್ಷರಶಃ ನರಕವಾಗಿದ್ದು, ಸೇನೆ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಈಗಾಗಲೇ 800ಕ್ಕೂ ಹೆಚ್ಚು ಅಮಾಯಕರ ರಕ್ತಪಾತ ನಡೆದಿದೆ. ಆದರೆ ಇಷ್ಟಕ್ಕೂ ಸುಮ್ಮನಾಗದ ಅಲ್ಲಿನ ಸೇನಾಧಿಕಾರಿಗಳು ಲಕ್ಷಾಂತರ ಶಿಕ್ಷಕರನ್ನ ಸಸ್ಪೆಂಡ್ ಮಾಡಿದ್ದಾರೆ.

ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರಾ..?
ಈ ನಿರ್ಧಾರದ ಬಗ್ಗೆ ಬಹುತೇಕ ಶಿಕ್ಷಕರ ಆರೋಪವೆಂದರೆ, ನಮ್ಮನ್ನು ಸರ್ಕಾರ ಕೆಲಸಕ್ಕೆ ಕರೆಯುತ್ತಿದೆ. ಆದರೆ ಬೆದರಿಕೆಗೆ ನಾವು ಹೆದರುತ್ತಿಲ್ಲ. ಹೀಗಾಗಿಯೇ ನಮನ್ನು ಬ್ಲ್ಯಾಕ್ ಮೇಲ್ ಮಾಡಲು ಸಸ್ಪೆಂಡ್ ಮಾಡಿದ್ದಾರೆ, ಆದರೂ ನಾವು ಕೆಲಸಕ್ಕೆ ಹೋಗಲ್ಲ ಎನ್ನುತ್ತಿದ್ದಾರೆ. ಹಲವು ದಶಕಗಳ ಕಾಲ ಮ್ಯಾನ್ಮಾರ್ ಸೇನೆ ಹಿಡಿತದಲ್ಲೇ ಇತ್ತು.
ಕೆಲ ವರ್ಷಗಳ ಹಿಂದೆ ಆಂಗ್ ಸಾನ್ ಸೂಕಿ ಹೋರಾಟದ ಫಲವಾಗಿ ಮ್ಯಾನ್ಮಾರ್ ಪ್ರಜಾಪ್ರಭುತ್ವದ ತೆಕ್ಕೆಗೆ ವಾಲಿತ್ತು. ಆದರೆ ಆಂಗ್ ಸಾನ್ ಸೂಕಿ ಆಡಳಿತದಲ್ಲಿ ರೊಹಿಂಗ್ಯಾ ಮುಸ್ಲೀಮರ ಮೇಲೆ ಮ್ಯಾನ್ಮಾರ್ನ ಸೇನೆ ದೌರ್ಜನ್ಯ ನಡೆಸಿತ್ತು ಎಂಬ ಆರೋಪವಿದೆ. ಆದರೂ ಸೂಕಿ ತೆಪ್ಪಗಿದ್ದ ಕಾರಣಕ್ಕೆ ಸೂಕಿ ವಿರುದ್ಧ ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈಗ ಸ್ವತಃ ಸೂಕಿಯೇ ಮ್ಯಾನ್ಮಾರ್ ಸೇನೆ ಕೈಯಲ್ಲಿ ಸಿಲುಕಿ ನರಳುತ್ತಿದ್ದಾರೆ.

ಪೊಲೀಸರನ್ನು ವಾಪಸ್ ಕಳಿಸಿ..!
ಕೆಲ ತಿಂಗಳ ಹಿಂದೆ ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರನ್ನು ವಶಕ್ಕೆ ನೀಡಿ ಎಂದು ಒತ್ತಾಯಿಸಿ ಮ್ಯಾನ್ಮಾರ್ ಪತ್ರ ಬರೆದಿತ್ತು. ಉಭಯ ರಾಷ್ಟ್ರಗಳ ಸಂಬಂಧ ಮುಂದುವರಿಯಲು ಪೊಲೀಸ್ ಅಧಿಕಾರಿಗಳನ್ನು ಮ್ಯಾನ್ಮಾರ್ಗೆ ಹಸ್ತಾಂತರಿಸಿ ಅಂತಾ ಮಿಜೋರಾಂ ರಾಜ್ಯದ ಚಂಪೈ ಜಿಲ್ಲೆಯ ಉಪ ಆಯುಕ್ತೆಗೆ ಮ್ಯಾನ್ಮಾರ್ನ ಅಧಿಕಾರಿಗಳು ಪತ್ರ ಬರೆದಿದ್ದರು. ಪತ್ರ ಬರೆದ ಕೆಲವೇ ದಿನದಲ್ಲಿ ಆಘಾತಕಾರಿ ಅಂಶ ಬಯಲಾಗಿದೆ. ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರು ಅಲ್ಲಿನ ಭಯಾನಕ ಸ್ಥಿತಿಯನ್ನ ಬಿಡಿಸಿಟ್ಟಿದ್ದಾರೆ. ಮ್ಯಾನ್ಮಾರ್ ಜನರ ಸದ್ಯದ ಪರಿಸ್ಥಿತಿ ಹಾಗೂ ಹಿಂಸೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ.

ಮಿಲಿಟರಿ ಆಡಳಿತ ಶುರು..!
ಮ್ಯಾನ್ಮಾರ್ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ. ಕಂಡಲ್ಲಿ ಗುಂಡಿಟ್ಟು ಜನರನ್ನ ಕೊಲೆ ಮಾಡುತ್ತಿದೆ ಸೇನೆ.
Recommended Video

800ಕ್ಕೂ ಹೆಚ್ಚು ಹೋರಾಟಗಾರರು ಬಲಿ..?
ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 800ಕ್ಕೂ ಹೆಚ್ಚು ಜನರನ್ನು ಮ್ಯಾನ್ಮಾರ್ ಸೇನೆ ಬಲಿಪಡೆದಿರುವ ಆರೋಪವಿದೆ. ಹೀಗಾಗಿ ನಾಗರಿಕರನ್ನ ಕೊಂದು ಹಾಕಿರುವ ಮ್ಯಾನ್ಮಾರ್ ಸೇನೆ ವಿರುದ್ಧ ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಜಾಪ್ರಭುತ್ವವಾದಿ ರಾಷ್ಟ್ರಗಳು ಮ್ಯಾನ್ಮಾರ್ ಮಿಲಿಟರಿ ಕ್ರಮವನ್ನು ಟೀಕಿಸಿವೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲ್ಲಿನ ಸೇನಾಧಿಕಾರಿಗಳು, ಪ್ರತಿಭಟನೆ ನಡೆಸುತ್ತಿರುವ ಜನರ ನಿಯಂತ್ರಣ ಹಾಗೂ ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ ಮಾಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಲವರು ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಆವರಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications