ಭಾರತಕ್ಕೆ ತರುತ್ತಿದ್ದ 1200 ಕೋಟಿ ಮೌಲ್ಯದ ಹೆರಾಯಿನ್ ವಶ
ಕೊಚ್ಚಿ, ಅಕ್ಟೋಬರ್ 07: ಅಫ್ಘಾನಿಸ್ತಾನದಲ್ಲಿ ತಯಾರಿಸಿದ 1,200 ಕೋಟಿ ರೂಪಾಯಿ ಮೌಲ್ಯದ 200 ಕೆಜಿ ಹೆರಾಯಿನ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೊದಲು ಪಾಕಿಸ್ತಾನಕ್ಕೆ ಹೆರಾಯಿನ್ ಅನ್ನು ಅಲ್ಲಿಂದ ಇರಾನ್ ದೋಣಿಯಲ್ಲಿ ಹಾಕಲಾಯಿತು. ಅದನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಮಾರಾಟ ಮಾಡಲು ಉದ್ದೇಶಿಸಲಾಗಿತ್ತು ಎಂದು ಭಾರತೀಯ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮವಾಗಿ ಹೆರಾಯಿನ್ ಅನ್ನು ಸಾಗಾಣಿಕೆಯಲ್ಲಿ ತೊಡಗಿದ್ದ ದೋಣಿ ಹಾಗೂ ಆರು ಮಂದಿ ಇರಾನ್ ಪ್ರಜೆಗೆಳನ್ನು ಬಂಧಿಸಲಾಗಿದೆ ಎಂದು ಭಾರತೀಯ ಅಧಿಕಾರಿಗಳು ಹೇಳಿದ್ದಾರೆ. ಈ ಇರಾನಿನ ದೋಣಿಯ ಮೂಲಕ ವಾಟರ್ ಪ್ರೂಫ್ ಆಗಿರುವ ಏಳು ಪರದೆಯೆ ಪ್ಯಾಕೇಜಿಂಗ್ನಲ್ಲಿ ಈ ಡ್ರಗ್ಸ್ ಅನ್ನು ಸಾಗಿಸಲಾಗುತ್ತಿತ್ತು. ಶ್ರೀಲಂಕಾದ ದೋಣಿಗೆ ವರ್ಗಾಯಿಸಿರುವುದನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಗುರುವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿದ್ದು, ಆರು ಇರಾನ್ ಪ್ರಜೆಗಳೊಂದಿಗೆ ವಶಪಡಿಸಿಕೊಂಡ ಸರಕುಗಳನ್ನು ಕೇರಳದ ಕೊಚ್ಚಿಗೆ ತಂದಿದೆ ಎಂದು ಎನ್ಸಿಬಿಯ ಹಿರಿಯ ಕೊಡುಗೆ ಸಂಜಯ್ ಕುಮಾರ್ ಸಿಂಗ್ ಹೇಳಿದ್ದಾರೆ.
ಡ್ರಗ್ಸ್ ಪ್ಯಾಕೇಟ್ ಮೇಲೆ ವಿಶಿಷ್ಟ ಗುರುತು:
ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕಾರ್ಟೆಲ್ಗಳ ಪ್ಯಾಕೆಟ್ಗಳ ಮೇಲೆ ವಿಶಿಷ್ಟವಾದ ಗುರುತುಗಳನ್ನು ಹೊಂದಿವೆ. "ಕೆಲವು ಡ್ರಗ್ ಪ್ಯಾಕೆಟ್ಗಳು 'ಸ್ಕಾರ್ಪಿಯನ್' ಸೀಲ್ ಗುರುತುಗಳನ್ನು ಹೊಂದಿದ್ದರೆ, ಇತರವುಗಳು 'ಡ್ರ್ಯಾಗನ್' ಸೀಲ್ ಗುರುತುಗಳನ್ನು ಹೊಂದಿದ್ದವು," ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆರಾಯಿನ್ ಅನ್ನು ಬಹುಶಃ ಪಾಕಿಸ್ತಾನದಿಂದ ದೋಣಿಯಲ್ಲಿ ಕಳುಹಿಸಲಾಗಿದೆ. ಇರಾನ್ ಹಡಗಿಗೆ "ಮಧ್ಯ ಸಮುದ್ರ ವಿನಿಮಯದಲ್ಲಿ" ಲೋಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನೌಕೆಯು ನಂತರ ಶ್ರೀಲಂಕಾದ ಹಡಗಿಗೆ ಮತ್ತಷ್ಟು ತಲುಪಿಸಲು ಭಾರತದ ಕಡೆಗೆ ಪ್ರಯಾಣ ಬೆಳೆಸಿತು, ಆದರೆ ಹಸ್ತಾಂತರಕ್ಕೂ ಮುನ್ನವೇ ಸಿಕ್ಕಿಬಿದ್ದಿತ್ತು. ಈ ಶ್ರೀಲಂಕಾದ ಹಡಗನ್ನು ಗುರುತಿಸಲು ಮತ್ತು ಪ್ರತಿಬಂಧಿಸಲು ಪ್ರಯತ್ನಿಸಲಾಯಿತು, ಆದರೆ ಅದನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇರಾನ್ ಹಡಗಿನಲ್ಲಿದ್ದ ವ್ಯಕ್ತಿಗಳು ಸಮುದ್ರಕ್ಕೆ ಹಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಅಲ್ಲದೇ ಹೆರಾಯಿನ್ ಅನ್ನು ನೀರಿನಲ್ಲಿ ಎಸೆಯಲು ಪ್ರಯತ್ನಿಸಿದರು ಎಂದು ಎನ್ಸಿಬಿ ಅಧಿಕಾರಿ ಸಿಂಗ್ ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications