ಬಾಗ್ದಾದ್ ಮೇಲೆ ಮತ್ತೊಂದು ಬಾಂಬ್ ದಾಳಿ, ಸಾವಿನ ಸಂಖ್ಯೆ 27ಕ್ಕೆ ಏರಿಕೆ
ಬಾಗ್ದಾದ್, ಮೇ 30: ಇರಾಕ್ ರಾಜಧಾನಿ ಬಾಗ್ದಾದಿನ ಐಸ್ ಕ್ರೀಂ ಪಾರ್ಲರ್ ಒಂದರ ಸಮೀಪ ಭಾರೀ ತೀವ್ರತೆಯ ಕಾರ್ ಬಾಂಬ್ ಸ್ಪೋಟಿಸಿದ ಪರಿಣಾಮ ಕನಿಷ್ಠ 16 ಜನ ಅಸುನೀಗಿದ್ದರು. ಇದೀಗ ಬಾಗ್ದಾದಿನಲ್ಲಿ ಮತ್ತೊಂದು ಬಾಂಬ್ ಸ್ಪೋಟಿಸಿದ್ದು ಕನಿಷ್ಟ 11 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆ 27 ಜನ ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಸೋಮವಾರ ತಡ ರಾತ್ರಿ ಇಲ್ಲಿನ ಕರ್ರಾದ ಜಿಲ್ಲೆಯಲ್ಲಿ ಬಾಂಬ್ ಸ್ಟೋಟ ಸಂಭವಿಸಿದ್ದು ಇರಾಕ್ ರಾಜಧಾನಿಯನ್ನು ಬೆಚ್ಚಿ ಬೀಳಿಸಿತ್ತು. ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರರು ಘಟನೆಯ ಹೊಣೆ ಹೊತ್ತುಕೊಂಡಿದ್ದಾರೆ. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಪಾರ್ಲರ್ ಪರಿಸರದಲ್ಲಿ ಕಾರ್ ಪಾರ್ಕ್ ಮಾಡಲಾಗಿತ್ತು. ಈ ಕಾರಿನಲ್ಲಿ ಬಾಂಬ್ ಗಳಿದ್ದವು. ಈ ಕಾರ್ ಸ್ಟೋಟಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಇದೇ ಕರ್ರಾದ ಜಿಲ್ಲೆಯಲ್ಲಿ ಕಳೆದ ವರ್ಷ ಜುಲೈನಲ್ಲಿ ಭೀಕರ ದಾಳಿ ನಡೆದಿತ್ತು. ಈ ದಾಳಿಯಲ್ಲಿ 300 ಜನ ಸಾವನ್ನಪ್ಪಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಮೆರಿಕಾದ ಐಸಿಸ್ ವಿರೋಧಿ ಪಡೆಯ ಮುಖ್ಯಸ್ಥ ಬ್ರೆಟ್ ಮೆಗರ್ಕ್, "ಮಕ್ಕಳು ಮತ್ತು ಕುಟುಂಬಸ್ಥರ ಜತೆ ಐಸ್ ಕ್ರೀಂ ಪಾರ್ಲರಿನಲ್ಲಿ ಸಮಯ ಕಳೆಯುತ್ತಿದ್ದ ವೇಳೆ ಐಸಿಸ್ ಉಗ್ರರು ಇಂದು ರಾತ್ರಿ ಬಾಗ್ದಾದಿನಲ್ಲಿ ದಾಳಿ ಮಾಡಿದ್ದಾರೆ. ನಾವು ಇವರ ವಿರುದ್ಧ ಹೋರಾಡಲು ಇರಾಕ್ ಜತೆ ನಿಂತುಕೊಳ್ಳಲಿದ್ದೇವೆ," ಎಂದು ಹೇಳಿದ್ದಾರೆ.
ಮತ್ತೊಂದು ಬಾಂಬ್
ಇದೀಗ ಬಾಗ್ದಾದಿನ ಮತ್ತೊಂದು ಪ್ರದೇಶದಲ್ಲಿ ಅದೇ ರೀತಿ ಕಾರ್ ಬಾಂಬ್ ಸ್ಪೋಟಿಸಿದೆ. ಇದರಲ್ಲಿ ಕನಿಷ್ಟ 11 ಜನ ಸಾವನ್ನಪ್ಪಿದ್ದು ಇಲ್ಲೂ 40ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಉಗ್ರ ಸಂಗಘನೆ ಅಲ್ ಶಬಾಬ್ ಈ ಘಟನೆಯ ಹೊಣೆ ಹೊತ್ತುಕೊಂಡಿದೆ.
ಮುಸ್ಲಿಂ ಧರ್ಮೀಯರ ಪವಿತ್ರ ಮಾಸ ರಂಜಾನಿನ ಆರಂಭದಲ್ಲೇ ಈ ಎರಡೂ ಬಾಂಬ್ ಸ್ಪೋಟಗಳು ಸಂಭವಿಸಿವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications