13 ವರ್ಷದ ಬಾಲಕನಿಗೆ 10 ವರ್ಷಗಳ ಕಠಿಣ ಶಿಕ್ಷೆ
13 ವರ್ಷದ ಬಾಲಕನಿಗೆ ನೈಜೀರಿಯಾದ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ನೀಡಿದೆ. ಧರ್ಮನಿಂದನೆ ಆರೋಪದ ಹಿನ್ನೆಲೆಯಲ್ಲಿ ಬಾಲಕನಿಗೆ ಈ ರೀತಿಯ ಕಠಿಣ ಶಿಕ್ಷೆ ವಿಧಿಸಿದೆ. ಬಾಲಕ ಸ್ನೇಹಿತರೊಂದಿಗೆ ವಾದ ಮಾಡುವಾಗ, ಇಸ್ಲಾಂ ಧರ್ಮದ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದ ಎನ್ನಲಾಗಿದೆ. ಬಾಲಕನೂ ಕೂಡ ಇಸ್ಲಾಂ ಧರ್ಮಕ್ಕೆ ಸೇರಿದವನಾಗಿದ್ದ. ಆದರೂ ಧರ್ಮನಿಂದನೆ ಆರೋಪದಡಿ ಬಾಲಕನನ್ನು ಸ್ಥಳೀಯ ಪೊಲೀಸರು ಬಂಧಿಸಿ, ಕೋರ್ಟ್ಗೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ನೈಜೀರಿಯಾದ ಕಾನೋ ರಾಜ್ಯದ ಷರಿಯಾ ಕೋರ್ಟ್, ಆರೋಪ ಸಾಬೀತಾಗಿರುವ ಹಿನ್ನೆಲೆ 13 ವರ್ಷದ ಬಾಲಕನಿಗೆ 10 ವರ್ಷಗಳ ಕಠಿಣ ಶಿಕ್ಷೆ ನೀಡಿದೆ. ಈ ಘಟನೆ ಜಗತ್ತಿನಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದು, ನೈಜೀರಿಯಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮಕ್ಕಳ ಪರ ಸಂಘಟನೆಗಳು ಧ್ವನಿ ಎತ್ತಿವೆ. ಅದರಲ್ಲೂ ಮಕ್ಕಳ ಅಭಿವೃದ್ಧಿ ಹಾಗೂ ರಕ್ಷಣೆಗಾಗಿ ವಿಶ್ವಸಂಸ್ಥೆಯ ಅಂಗವಾಗಿ ಸ್ಥಾಪಿಸಲಾಗಿರುವ ಯೂನಿಸೆಫ್ (UNICEF) ಈ ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ ಇದು ಮಕ್ಕಳ ಹಕ್ಕುಗಳ ಹತ್ಯೆಯಾಗಿದ್ದು, ತೀರ್ಪನ್ನು ಮರುಪರಿಶೀಲನೆ ನಡೆಸುವಂತೆ ಸೂಚಿಸಿದೆ.

ಇಲ್ಲಿ ಬದುಕಲು ನಮಗೆ ಭಯವಾಗುತ್ತಿದೆ
ಒಂದುಕಡೆ ಬಾಲಕನನ್ನು ಕೋರ್ಟ್ ಜೈಲಿಗಟ್ಟಿದ್ದರೆ, ಮತ್ತೊಂದ್ಕಡೆ ಬಾಲಕನ ಊರಲ್ಲಿ ಭಯಾನ ಸ್ಥಿತಿ ನಿರ್ಮಾಣವಾಗಿದೆ. ಗುಂಪು ಕಟ್ಟಿಕೊಂಡು ಬರುತ್ತಿರುವ ಕೆಲವರು, ಬಾಲಕನ ಮನೆ ಮೇಲೆ ದಾಳಿ ಮಾಡಿ ಹೋಗಿದ್ದಾರೆ. ನೈಜೀರಿಯಾದಲ್ಲಿ ಮೂಲಭೂತವಾದ ಆಳವಾಗಿ ಬೇರುಬಿಟ್ಟಿದ್ದು, ಪರಿಸ್ಥಿತಿ ನಿಭಾಯಿಸಲು ಜಾತ್ಯಾತೀತರು ಪರದಾಡುತ್ತಿದ್ದಾರೆ. ಈಗ ಬಾಲಕನ ಹಳ್ಳಿಯಲ್ಲೂ ಇಂತಹದ್ದೇ ಸ್ಥಿತಿ ಇದ್ದು, ಇಲ್ಲಿ ಬದುಕಲು ನಮಗೆ ಭಯವಾಗುತ್ತಿದೆ ಎಂದು ಬಾಲಕನ ತಾಯಿ ಅಳಲು ತೋಡಿಕೊಂಡಿದ್ದಾರೆ.
ಸುಪ್ರೀಂಕೋರ್ಟ್ ಮೆಟ್ಟಿಲೇರಿದ ವಕೀಲರು
13 ವರ್ಷದ ಬಾಲಕನಿಗೆ 10 ವರ್ಷಗಳ ಶಿಕ್ಷೆ ವಿಧಿಸಿರುವ ಷರಿಯಾ ಕೋರ್ಟ್ನ ತೀರ್ಪು ಪ್ರಶ್ನಿಸಿ ಬಾಲಕನ ಪರ ವಕೀಲರು ನೈಜೀರಿಯಾದ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲದೆ ನೈಜೀರಿಯಾದ ಕಾನೂನು ಧರ್ಮನಿಂದನೆ ಬಗ್ಗೆ ಉಲ್ಲೇಖಿಸಿಲ್ಲ, ಹೀಗಾಗಿ ಷರಿಯಾ ಕೋರ್ಟ್ ಬಾಲಕನಿಗೆ ವಿಧಿಸಿರುವ ಶಿಕ್ಷೆ ನೈಜೀರಿಯಾ ಕಾನೂನಿಗೆ ವಿರುದ್ಧವಾಗಿ ಎಂಬುದು ಬಾಲಕನ ಪರ ವಕೀಲರ ವಾದವಾಗಿದೆ. ನೈಜೀರಿಯಾ ಸುಪ್ರೀಂಕೋರ್ಟ್ ಈ ತೀರ್ಪನ್ನು ತಿರಸ್ಕರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications