Breaking: ಬಾಂಗ್ಲಾದೇಶದಲ್ಲಿ ಜನರಿಗೆ ಆವರಿಸಿದ ಕತ್ತಲು
ಢಾಕಾ, ಅಕ್ಟೋಬರ್ 04: ಬಾಂಗ್ಲಾದೇಶದಲ್ಲಿ ಗ್ರಿಡ್ ವೈಫಲ್ಯದಿಂದಾಗಿ ಸುಮಾರು 140 ಮಿಲಿಯನ್ ಜನರು ಕತ್ತಲೆಯಲ್ಲಿ ಕಳೆಯುವಂತಾ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹ್ನ ವಿದ್ಯುತ್ ಇಲ್ಲದೆ ಮಂಗಳವಾರ ಬಾಂಗ್ಲಾದೇಶ ಜನರು ಪರಿತಪಿಸುವಂತಹ ಸ್ಥಿತಿ ಸೃಷ್ಟಿಯಾಗಿತ್ತು ಎಂದು ಸರ್ಕಾರದ ಪವರ್ ಯುಟಿಲಿಟಿ ಕಂಪನಿ ಮಾಹಿತಿ ನೀಡಿದೆ.
ಪವರ್ ಡೆವಲಪ್ಮೆಂಟ್ ಬೋರ್ಡ್ ಪ್ರಕಾರ, ದೇಶದ 80 ಪ್ರತಿಶತಕ್ಕೂ ಹೆಚ್ಚು ಜನರು ಸ್ಥಳೀಯ ಕಾಲಮಾನ ಮಧ್ಯಾಹ್ನ 2 ಗಂಟೆಯ ನಂತರ ಹಠಾತ್ ವಿದ್ಯುತ್ ವ್ಯತ್ಯಯದ ಸಮಸ್ಯೆಯನ್ನು ಎದುರಿಸಿದರು. ಬಾಂಗ್ಲಾದೇಶದ ವಾಯುವ್ಯದ ಕೆಲವು ಸ್ಥಳಗಳನ್ನು ಹೊರತುಪಡಿಸಿ, "ದೇಶದ ಉಳಿದ ಭಾಗಗಳಲ್ಲಿ ವಿದ್ಯುತ್ ಇರಲಿಲ್ಲ" ಎಂದು ಏಜೆನ್ಸಿ ವಕ್ತಾರ ಶಮೀಮ್ ಅಹ್ಸನ್ ತಿಳಿಸಿದರು.
130 ಮಿಲಿಯನ್ ಅಥವಾ ಅದಕ್ಕಿಂತ ಹೆಚ್ಚು ಜನರು ವಿದ್ಯುತ್ ಇಲ್ಲದೆ ಇದ್ದಾರೆ. ದೋಷಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ ಎಂದು ಅಹ್ಸಾನ್ ಹೇಳಿದರು. "ಇದು ಇನ್ನೂ ತನಿಖೆಯಲ್ಲಿದೆ, ತಾಂತ್ರಿಕ ಅಸಮರ್ಪಕ ಕಾರಣ ಸಾಧ್ಯತೆಯಿದೆ," ಎಂದು ಅವರು ಹೇಳಿದರು

ರಾತ್ರಿ 8 ಗಂಟೆ ವೇಳೆಗೆ ಕರೆಂಟ್ ಬರುತ್ತೆ:
22 ದಶಲಕ್ಷಕ್ಕೂ ಹೆಚ್ಚು ಜನರು ವಾಸಿಸುವ ರಾಜಧಾನಿ ಢಾಕಾದಲ್ಲಿ ರಾತ್ರಿ 8 ಗಂಟೆಯ ವೇಳೆಗೆ ವಿದ್ಯುತ್ ಅನ್ನು ಪುನಃಸ್ಥಾಪಿಸಲಾಗುವುದು ಎಂದು ಜೂನಿಯರ್ ತಂತ್ರಜ್ಞಾನ ಸಚಿವ ಜುನೈದ್ ಪಾಲಕ್ ಫೇಸ್ಬುಕ್ನಲ್ಲಿ ತಿಳಿಸಿದ್ದಾರೆ. ರಷ್ಯಾ-ಉಕ್ರೇನ್ ಆಕ್ರಮಣದ ನಂತರ ಜಾಗತಿಕ ಇಂಧನ ಬೆಲೆಗಳ ಏರಿಕೆ ಪರಿಣಾಮವಾಗಿ ಬಾಂಗ್ಲಾದೇಶವು ಇತ್ತೀಚಿನ ತಿಂಗಳುಗಳಲ್ಲಿ ವಿದ್ಯುತ್ ಬಿಕ್ಕಟ್ಟನ್ನು ಅನುಭವಿಸಿದೆ.
ಬಾಂಗ್ಲಾದೇಶವು ಕೊನೆಯದಾಗಿ ನವೆಂಬರ್ 2014ರಲ್ಲಿ ಒಂದು ದೊಡ್ಡ ಅನಿರೀಕ್ಷಿತ ಬ್ಲ್ಯಾಕೌಟ್ಗೆ ಸಾಕ್ಷಿಯಾಯಿತು. ದೇಶದ ಸುಮಾರು ಶೇ.70ರಷ್ಟು ಜನರು ಸುಮಾರು 10 ಗಂಟೆಗಳ ಕಾಲ ವಿದ್ಯುತ್ ಇಲ್ಲದೆ ಹೋದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications