ಮುತ್ತಿನ ಮತ್ತೇ ಗಮ್ಮತ್ತು, ಅಳತೆ ಮೀರಿದರೆ ಜೀವಕ್ಕೆ ಕುತ್ತು!
ಮೆಕ್ಸಿಕೋ, ಆಗಸ್ಟ್ 30: ಮುತ್ತಿನ ಮತ್ತೇ ಗಮ್ಮತ್ತು, ಅಳತೆ ಮೀರಿದರೆ ಆಪತ್ತು ಮತ್ತೂ ಮುಂದುವರಿದರೆ ಜೀವಕ್ಕೆ ಕುತ್ತು. ಅರೇ ಇದೇನು? ಹೀಗೆ ಹೇಳ್ತಾ ಇದ್ದಾರಲ್ಲಾ ಎಂದು ಆಶ್ಚರ್ಯಪಡಬೇಕಿಲ್ಲ.
ಮೆಕ್ಸಿಕೋದ ಹದಿಹರೆಯದ ಯುವಕನೊಬ್ಬ 'ಲವ್ ಬೈಟ್' ಗೆ ಬಲಿಯಾಗಿದ್ದಾನೆ. ತನ್ನ ಗೆಳತಿಯಿಂದ ಪಡೆದುಕೊಂಡ ದೀರ್ಘ ಚುಂಬನ ಪರಿಣಾಮ ಮೆದುಳಿಗೆ ರಕ್ತ ಸ್ರಾವವಾಗಿ ಸಾವನ್ನಪ್ಪಿದ್ದಾನೆ.[ಮಲಗಿದ್ದ ಮಹಿಳೆ ಕೆನ್ನೆ ಕಚ್ಚಿ ಪರಾರಿಯಾದವ ಸಿಕ್ಕಿಬಿದ್ದ]

ಬ್ರಿಟನ್ ಪತ್ರಿಕೆ ಒಂದು ವರದಿ ಮಾಡಿರುವಂತೆ, 17 ವರ್ಷದ ಜುಲಿಯೋ ಮಿಕಾಸ್ ಗೆಳತಿಯೊಂದಿಗೆ ಸಂಜೆ ಕಳೆದಿದ್ದಾನೆ. ಇದಾದ ಮೇಲೆ ತನ್ನ ಕುಟುಂಬದವರೊಂದಿಗೆ ಊಟ ಮಾಡಲು ಕುಳಿತಿದ್ದಾನೆ.[ಕುರುಬರ ಸಮಾವೇಶದಲ್ಲಿ ಸಿಎಂ ಸಿದ್ದುಗೆ 'ಕಿಸ್ ಭಾಗ್ಯ']
ಇದ್ದಕ್ಕಿದ್ದಂತೆ ಆತನ ಆರೋಗ್ಯದಲ್ಲಿ ಏರು ಪೇರಾಗಿದೆ. ಕುತ್ತಿಗೆ ಭಾಗದಲ್ಲಿ ಸೆಳೆತ ಆರಂಭವಾಗಿದೆ. ತಕ್ಷಣ ವೈದ್ಯಕೀಯ ಪರೀಕ್ಷೆಗೆ ಕ್ರಮ ತೆಗೆದುಕೊಂಡರು ಯುವಕ ಸಾವನ್ನಪ್ಪಿದ.[ಮಾತು ಮನೆ ಕೆಡಿಸಿತು, ಮುತ್ತು ಮದುವೆಯನ್ನೇ ಕೆಡಿಸಿತು!]
ಯುವಕನ ಸಾವಿಗೆ ಹುಡುಗಿ ಸ್ವಲ್ಪ ಅತಿಯಾದ ಪ್ರೀತಿಯಿಂದ ಕುತ್ತಿಗೆ ಮೇಲೆ ಕಚ್ಚಿದ್ದೆ ಕಾರಣ. ಕಚ್ಚುವಿಕೆಯ ಪರಿಣಾಮವೇ ಮೆದುಳಿನ ರಕ್ತ ಸಂಚಾರದಲ್ಲಿ ಹೆಚ್ಚು ಕಡಿಮೆ ಆಗಿದೆ ಎಂದು ಪತ್ರಿಕೆ ವರದಿಯಲ್ಲಿ ತಿಳಿಸಿದೆ.[ಕಿಸ್ ಮಾಡುವುದು ಹೇಗೆ? ತಗೊಳ್ಳಿ ಟಿಪ್ಸ್..]
ಯುವಕನ ಸಾವಿನ ನಂತರ ಆತನ 24 ವರ್ಷದ ಗೆಳತಿ ನಾಪತ್ತೆಯಾಗಿದ್ದಾಳೆ. ಹುಡುಗನ ಸಾವಿಗೆ ಹುಡುಗಿಯೇ ಕಾರಣ ಎಂದು ಯುವಕನ ಪಾಲಕರು ಆರೋಪ ಮಾಡಿದ್ದಾರೆ.[ಕಿಸ್ ಆಫ್ ಕಿಲೋ ಗಟ್ಟಲೇ ಬ್ಯಾಕ್ಟೀರಿಯಾ...]
ಇಂಥದ್ದೆ ಒಂದು ಉದ್ರೇಕಕಾರಿ ಕಚ್ಚುವಿಕೆಯಿಂದ 2011 ರಲ್ಲಿ ನ್ಯೂಜಿಲೆಂಡ್ ನ 44 ವರ್ಷದ ಮಹಿಳೆ ಮೃತಪಟ್ಟಿದ್ದಳು. ಸದ್ಯ ಈ ಘಟನೆ ಎಲ್ಲ ಯುವ ಪ್ರೇಮಿಗಳಿಗೆ ಒಂದು ಎಚ್ಚರಿಕೆ ಘಂಟೆಯಾಗಿ ಪರಿಣಮಿಸಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications