ಇರ್ಮಾ ಚಂಡಮಾರುತಕ್ಕೆ ಸಿಲುಕಿದ್ದ 170 ಭಾರತೀಯರ ರಕ್ಷಣೆ
ಕುರಾಕೊವೊ, ಸೆಪ್ಟೆಂಬರ್ 13: ಭಯಂಕರ ಇರ್ಮಾ ಚಂಡಮಾರುತಕ್ಕೆ ಸಿಂಟ್ ಮಾರ್ಟಿನ್ ದ್ವೀಪದಲ್ಲಿ ಸಿಲುಕಿದ್ದ 170 ಭಾರತೀಯರನ್ನು ರಕ್ಷಿಸಲಾಗಿದೆ. ವಿಶೇಷ ವಿಮಾನಗಳ ಮೂಲಕ ಇವರನ್ನು ಕೆರಿಬಿಯನ್ ದ್ವೀಪ ಕುರಾಕೊವೊಗೆ ಕರೆತರಲಾಗಿದೆ.
ಈ ಸಂತಸದ ಸುದ್ದಿಯನ್ನು ವೆನಿಜುವೆಲಾದ ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿ ಹಂಚಿಕೊಂಡಿದೆ.
ಮೊದಲ ತಂಡದಲ್ಲಿ 110 ಜನರನ್ನು ರಕ್ಷಣೆ ಮಾಡಲಾಗಿತ್ತು. ಇದೀಗ ಮತ್ತೊಂದು ತಂಡದಲ್ಲಿ 60 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಕರೆತರಲಾಗಿದ್ದು ಒಟ್ಟು 170 ಭಾರತೀಯರನ್ನು ಇರ್ಮಾ ಚಂಡಮಾರುತದಿಂದ ರಕ್ಷಿಸಲಾಗಿದೆ.

ಭಾರತೀಯರ ಜತೆ ಇತರರ ರಕ್ಷಣೆ
ಭಾರತೀಯ ರಾಯಭಾರ ಕಚೇರಿ ವಿಶೇಷ ವಿಮಾನದಲ್ಲಿ ಭಾರತೀಯರನ್ನು ಮಾತ್ರ ರಕ್ಷಣೆ ಮಾಡಿಲ್ಲ. ಭಾರತೀಯರ ಜತೆ ಎರಡನೇ ತಂಡದಲ್ಲಿ ಬೇರೆ ದೇಶದ 30 ಪ್ರಯಾಣಿಕರನ್ನೂ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದೆ.
Persons evacuated by Gol from St. Maarten arrive in Curaçao @SushmaSwaraj @Gen_VKSingh @MEAIndia pic.twitter.com/3rv7R1T8TI
— India in Venezuela (@IndiaVenezuela) September 12, 2017
ಸಿಂಟ್ ಮಾರ್ಟಿನ್ ದ್ವೀಪದ ಆಡಳಿತವನ್ನು ಫ್ರಾನ್ಸ್ ಮತ್ತು ನೆದರ್ಲೆಂಡ್ ಜಂಟಿಯಾಗಿ ನೋಡಿಕೊಳ್ಳುತ್ತಿವೆ. ಇದು ಇರ್ಮಾ ಚಂಡಮಾರುತದ ದಾರಿಗೆ ಅಡ್ಡಲಾಗಿದ್ದು, ಭಾರೀ ಹಾನಿಗೆ ಒಳಗಾಗಿತ್ತು. ಇಲ್ಲಿನ ನಾಗರಿಕರು ನಿರಾಶ್ರಿತರಾಗಿ ಬೀದಿಗೆ ಬಂದಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications