ಯುದ್ಧ ವಿಮಾನಗಳ ಆರ್ಭಟ, ಚೀನಾ-ತೈವಾನ್ ಯುದ್ಧ ಫಿಕ್ಸ್..?
ಚೀನಾ ಬುಡಕ್ಕೆ ಬೆಂಕಿ ಬಿದ್ದಿದೆ. ತೈವಾನ್ ದ್ವೀಪರಾಷ್ಟ್ರಕ್ಕೆ ಅಮೆರಿಕದ ವಿದೇಶಾಂಗ ಇಲಾಖೆಯ ಸಹಾಯಕ ಕಾರ್ಯದರ್ಶಿ ಭೇಟಿ ನೀಡಿದ್ದೇ ತಡ ಡ್ರ್ಯಾಗನ್ ನಾಡು ಕೆಂಡವಾಗಿದೆ. ಇದೇ ಕಾರಣಕ್ಕೆ ತೈವಾನ್ ಗಡಿಯತ್ತ ಚೀನಾ ಯುದ್ಧ ವಿಮಾನಗಳನ್ನು ನುಗ್ಗಿಸಿದೆ. ಈ ಮೂಲಕ ಚೀನಾ ತೈವಾನ್ ವಿರುದ್ಧ ಯುದ್ಧ ಸಾರುವ ಭಂಡ ಧೈರ್ಯ ತೋರಿಸುತ್ತಿದೆ.
ಅಂದಹಾಗೆ ತೈವಾನ್ ಪಾಲಿಗೆ 'ಮಿಸ್ಟರ್ ಡೆಮಾಕ್ರಸಿ' ಎಂದೇ ಕರೆಸಿಕೊಳ್ಳುವ ಲೀ ಟೆಂಗ್ ಹೂ ಅವರಿಗೆ ಅಂತಿಮ ಗೌರವ ಸಲ್ಲಿಸುವ ಸಮಾರಂಭವೇ ಈಗ ಚೀನಾದ ಉರಿಗೆ ಕಾರಣವಾಗಿದೆ. ಇದೇ ಸಮಾರಂಭದಲ್ಲಿ ಅಮೆರಿಕ ವಿದೇಶಾಂಗ ಇಲಾಖೆಯ ಸಹಾಯಕ ಕಾರ್ಯದರ್ಶಿ ಕೀತ್ ಕ್ರಾಚ್ ಭಾಗವಹಿಸಿದ್ದರು.
ಆದರೆ ಈ ಹಿಂದಿನಿಂದಲೂ ತೈವಾನ್ ನನ್ನ ಭೂಮಿ ಅಂತಾ ಚೀನಾ ವಾದಿಸುತ್ತಿದ್ದು, ತನ್ನ ಶತ್ರು ಅಮೆರಿಕದ ಅಧಿಕಾರಿಯೊಬ್ಬರು ತೈವಾನ್ಗೆ ಭೇಟಿ ನೀಡಿರುವುದನ್ನು ಸಹಿಸುತ್ತಿಲ್ಲ. ಹೀಗಾಗಿ ಕೀತ್ ಕ್ರಾಚ್ ಭೇಟಿ ಚೀನಾ ಒಡಲಲ್ಲಿ ಕಿಚ್ಚು ಹೊತ್ತಿಸಿದ್ದು, ಸತತ 2ನೇ ದಿನವೂ ತನ್ನ ಯುದ್ಧ ವಿಮಾನಗಳನ್ನು ತೈವಾನ್ ಕಡೆಗೆ ಕಳುಹಿಸುವ ಮೂಲಕ, ಯುದ್ಧಕ್ಕೆ ಚೀನಾ ಪ್ರಚೋದನೆ ನೀಡುತ್ತಿದೆ.

ಮೊದಲು 18, ಈಗ 19 ವಿಮಾನ..!
ಲೀ ಟೆಂಗ್ ಹೂ ಅಂತಿಮ ಗೌರವ ಸಮಾರಂಭದಲ್ಲಿ ಅಮೆರಿಕದ ವಿದೇಶಾಂಗ ಇಲಾಖೆಯ ಉನ್ನತ ಅಧಿಕಾರಿ ಭಾಗವಹಿಸಿದ ತಕ್ಷಣ ತೈವಾನ್ ಜಲಸಂಧಿ ಮಧ್ಯಭಾಗಕ್ಕೆ 18 ಯುದ್ಧ ವಿಮಾನಗಳನ್ನು ಚೀನಾ ರವಾನಿಸಿತ್ತು. ಶನಿವಾರ ಬೀಜಿಂಗ್ನಿಂದ ಮತ್ತೆ 19 ಯುದ್ಧ ವಿಮಾನಗಳು ತೈವಾನ್ನತ್ತ ನುಗ್ಗಿ ಬಂದಿವೆ. ಚೀನಿ ವಿಮಾನಗಳು ನುಗ್ಗಿ ಬಂದಿರುವುದನ್ನು ತೈವಾನ್ ಕೂಡ ಸ್ಪಷ್ಟಪಡಿಸಿದೆ. ತೈವಾನ್ನತ್ತ ನುಗ್ಗಿದ 19 ಯುದ್ಧ ವಿಮಾನಗಳಲ್ಲಿ 2 ಬಾಂಬರ್ ವಿಮಾನಗಳೂ ಸೇರಿದ್ದವು ಎಂಬುದು ಆತಂಕವನ್ನು ಹೆಚ್ಚಿಸಿದೆ. ಹೀಗಾಗಿ ಚೀನಾದ ಚಟುವಟಿಕೆಗಳ ಮೇಲೆ ನಿಗಾ ಇಡಲು ತೈವಾನ್ ವಾಯು ರಕ್ಷಣಾ ಕ್ಷಿಪಣಿಯನ್ನು ನಿಯೋಜಿಸಿದೆ.

ಮಿಲಿಟರಿ ಪಂಚ್ ಕೊಟ್ಟಿತ್ತು ತೈವಾನ್..!
ಚೀನಾ ಹಾಗೂ ತೈವಾನ್ ಸಂಘರ್ಷ ಕೆಲ ತಿಂಗಳಿಂದ ಉಗ್ರ ಸ್ವರೂಪ ಪಡೆಯುತ್ತಿದೆ. ಚೀನಾ ಪದೇ ಪದೆ ತೈವಾನ್ ವಿಚಾರ ಕೆದಕುವಾಗಲೇ, ಜುಲೈನಲ್ಲಿ ತೈವಾನ್ ಮಿಲಿಟರಿ ದಿಟ್ಟತನ ಪ್ರದರ್ಶಿಸಿತ್ತು. ಚೀನಾ ಕಡೆಗೆ ಮುಖ ಮಾಡಿರುವ ತೈಚುಂಗ್ನ ದ್ವೀಪವೊಂದರ ಕಡಲ ತೀರದ ಬಳಿ ತೈವಾನ್ ಸೇನೆ ಸಮರಾಭ್ಯಾಸ ನಡೆಸಿತ್ತು. ಸಮರಾಭ್ಯಾಸದ ವೇಳೆ ತೈವಾನ್ನ ಯುದ್ಧ ವಿಮಾನಗಳು, ಹೆಲಿಕಾಪ್ಟರ್ಸ್ ಸಮುದ್ರಕ್ಕೆ ಕ್ಷಿಪಣಿ ಹಾಗೂ ಬಾಂಬ್ಗಳನ್ನು ಉಡಾಯಿಸುವ ಮೂಲಕ ಚೀನಾಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದವು. ಇದು ತೈವಾನ್ ಸೇನೆಯ ಶಕ್ತಿಪ್ರದರ್ಶನಕ್ಕೆ ವೇದಿಕೆಯಾಗಿತ್ತು.

ಕಮ್ಯುನಿಸ್ಟರ ಪಕ್ಕದಲ್ಲೇ ಪ್ರಜಾಪ್ರಭುತ್ವ..!
ತೈವಾನ್ ಚೀನಾದಷ್ಟು ದೊಡ್ಡ ದೇಶವಲ್ಲ, ಆದರೂ ತೈವಾನ್ ಗಂಡೆದೆ ಮೆಚ್ಚಲೇಬೇಕು. ತನ್ನದೇ ಸರ್ಕಾರ ಹೊಂದಿರುವ ತೈವಾನ್ನಲ್ಲಿ 2.40 ಕೋಟಿ ಜನ ವಾಸಿಸುತ್ತಿದ್ದಾರೆ. ಇಲ್ಲಿ ಕೆಲ ದಶಕಗಳ ಹಿಂದೆ ರಾಜಕೀಯ ಸ್ಥಿರತೆ ಇರಲಿಲ್ಲ. 2 ದಶಕಗಳಿಂದ ಈಚೆಗೆ ಅಂದರೆ 1996ರ ನಂತರ ಪ್ರಜಾಪ್ರಭುತ್ವ ವ್ಯವಸ್ಥೆ ಅಲ್ಲಿ ಜಾರಿಗೆ ಬಂದಿದೆ. ಅದಕ್ಕೂ ಮೊದಲು ಹಲವು ದೇಶಗಳು, ಇದೇ ತೈವಾನ್ನ ಹರಿದು-ಹಂಚಿ ಆಳ್ವಿಕೆ ನಡೆಸಿದ್ದವು. ಹೀಗೆ ಕಮ್ಯುನಿಸ್ಟ್ ಚೀನಾ ಪಕ್ಕದಲ್ಲೇ ತೈವಾನ್ ಪ್ರಜಾಪ್ರಭುತ್ವ ದೇಶವಾಗಿ ಬೆಳೆದು ನಿಂತಿದೆ.

ಚೀನಾ, ತೈವಾನ್ ಮಧ್ಯೆ ನಿರಂತರ ಘರ್ಷಣೆ
ಆರಂಭದಲ್ಲಿ ತೈವಾನ್ ಡಚ್ಚರ ವಸಾಹತಾಗಿತ್ತು. ನಂತರ ಜಪಾನ್ ಆಡಳಿತ ಮಾಡಿತ್ತು. 2ನೇ ಮಹಾಯುದ್ಧದ ಬಳಿಕ ಚೀನಾದ ರಾಷ್ಟ್ರೀಯವಾದಿ ಪಕ್ಷದ ಚಿಯಾಂಗ್ ಕೈ-ಶೇಕ್ ಅಧ್ಯಕ್ಷರಾದರು. 1949ರಲ್ಲಿ ಅಂತರ್ಯುದ್ಧ ನಡೆದಾಗ ಮಾವೋ ನೇತೃತ್ವದ ಕಮ್ಯುನಿಸ್ಟ್ ಸೇನೆ ಚಿಯಾಂಗ್ ಪಡೆಯನ್ನ ಹೊರದಬ್ಬಿತ್ತು. ತನ್ನ ಬೆಂಬಲಿಗರ ಜೊತೆ ಚಿಯಾಂಗ್ ಬಂದು ಸೇರಿದ್ದು ಇದೇ ತೈವಾನ್ ಅನ್ನ. ಮಾವೋ ವಶದಲ್ಲಿದ್ದ ಚೀನಾ ಮುಖ್ಯ ಭೂಭಾಗ ಕಮ್ಯೂನಿಸ್ಟರಿಗೆ ನೆಲೆ ಕೊಟ್ಟಿದ್ದರೆ, ತೈವಾನ್ 'ರಿಪಬ್ಲಿಕ್ ಆಫ್ ಚೀನಾ' ಆಗಿ ಉಳಿಯಿತು. ನಂತರ ಚೀನಾ ಮತ್ತು ತೈವಾನ್ ಮಧ್ಯೆ ನಿರಂತರ ಘರ್ಷಣೆಗಳು ನಡೆದಿದ್ದವು.

ಬದಲಾವಣೆ ತಂದಿದ್ದೇ ‘ಮಿಸ್ಟರ್ ಡೆಮಾಕ್ರಸಿ’..!
ಲೀ ಟೆಂಗ್ ಹೂಯಿ ಇರದೇ ಇದ್ದಿದ್ದರೆ ತೈವಾನ್ನ ಸ್ವಾಭಿಮಾನದ ಉಳಿವಿನ ಪ್ರಶ್ನೆ ಉದ್ಭವಿಸುತ್ತಲೇ ಇರಲಿಲ್ಲ. ಏಕೆಂದರೆ ಇಷ್ಟೊತ್ತಿಗೆ ಹಾಂಕಾಂಗ್ ರೀತಿಯಲ್ಲೇ ತೈವಾನ್ ಕೂಡ ಸಾಮ್ರಾಜ್ಯಶಾಹಿ ಚೀನಾ ಕೈಕೆಳಗೆ ನರಳಿ ಬದುಕಬೇಕಾಗಿತ್ತು. ಆದರೆ ತೈವಾನ್ನ 'ಮಿಸ್ಟರ್ ಡೆಮಾಕ್ರಸಿ' ಎಂದು ಕರೆಸಿಕೊಳ್ಳುವ ಲೀ ಟೆಂಗ್ ಹೂಯಿ, 90ರ ದಶಕದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದರು. ಇವರ ಪರಿಶ್ರಮದಿಂದ 1996ರಲ್ಲಿ ತೈವಾನ್ ಸಂಪೂರ್ಣ ಪ್ರಜಾಪ್ರಭುತ್ವದತ್ತ ತಿರುಗಿತು.
1996ರಲ್ಲಿ ನಡೆದ ತೈವಾನ್ನ ಮೊಟ್ಟಮೊದಲ ಪ್ರಜಾಸತ್ತಾತ್ಮಕ ಚುನಾವಣೆಯಲ್ಲಿ ಲೀ ಗೆದ್ದು ಬೀಗಿದರು. ಈ ಮೂಲಕ ಚೀನಾಗೆ ಸರಿಯಾಗೇ ಬುದ್ಧಿ ಕಲಿಸಿದ್ದವರು ಲೀ. ಆದರೆ 97 ವರ್ಷದ ಲೀ ಜುಲೈ 30ರಂದು ನಿಧನರಾಗಿದ್ದರು. ಬಳಿಕ ಚೀನಾ ಸರ್ಕಾರದ ಮುಖವಾಣಿ 'ಗ್ಲೋಬಲ್ ಟೈಮ್ಸ್' ಲೀ ಸಾವಿನ ಬಗ್ಗೆ ಅಹಿತಕರ ವರದಿ ಪ್ರಕಟಿಸಿತ್ತು. ಈಗ ಮತ್ತೆ ಚೀನಾ ಕ್ಯಾತೆ ತೆಗೆದಿರೋದು ಅಮೆರಿಕ ಸೇರಿದಂತೆ ಚೀನಾದ ಶತ್ರು ರಾಷ್ಟ್ರಗಳನ್ನ ಕೆರಳಿಸಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications