ಮ್ಯಾಂಚೆಸ್ಟರ್ ಅರೇನಾದಲ್ಲಿ ಬಾಂಬ್ ಸ್ಫೋಟ, 22 ಮಂದಿ ಸಾವು
ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ಅರೇನಾದಲ್ಲಿ ಸೋಮವಾರ ಪಾಪ್ ಸಗೀತ ಕಾರ್ಯಕ್ರಮದ ನಂತರ ಬಾಂಬ್ ಸ್ಫೋಟವಾಗಿ 22 ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ಬಗ್ಗೆ ವರದಿ ಇಲ್ಲಿದೆ
22 ಮಂದಿ ಮೃತಪಟ್ಟು, ಐವತ್ತು ಮಂದಿಗೆ ಗಾಯವಾದ ಘಟನೆ ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ಅರೇನಾದ ಸಂಗೀತ ಕಾರ್ಯಕ್ರಮದಲ್ಲಿ ಸಂಭವಿಸಿದೆ.
ಆತ್ಮಹತ್ಯಾ ಬಾಂಬರ್ ನಿಂದ ಈ ಕೃತ್ಯ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮ್ಯಾಂಚೆಸ್ಟರ್ ಪೊಲೀಸರು ಫೇಸ್ ಬುಕ್ ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
"ಮ್ಯಾಂಚೆಸ್ಟರ್ ಅರೇನಾದ ಬಾಂಬ್ ಸ್ಫೋಟವಾದ ಸ್ಥಳದಲ್ಲಿ ತುರ್ತು ಸೇವೆ ಒದಗಿಸಲಾಗುತ್ತಿದೆ. ಈ ಘಟನೆಯಲ್ಲಿ ಹಲವರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಆ ಸ್ಥಳದಲ್ಲಿ ಕಾರ್ಯಾಚರಣೆ ಕೈಗೊಳ್ಳಲು ನೆರವಾಗಿ. ಅಲ್ಲಿಂದ ದೂರವಿರಿ. ಗಾಯಾಳುಗಳ ಬಗ್ಗೆ ಮಾಹಿತಿ ನೀಡುವ ದಳವು ಶೀಘ್ರವೇ ಮಾಹಿತಿ ಒದಗಿಸುತ್ತದೆ" ಎಂದು ತಿಳಿಸಿದ್ದಾರೆ.[ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ, 10 ಸಾವು]

ಅರೇನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಸೋಮವಾರ ಎರಡು ಭಾರೀ ಸ್ಫೋಟದ ಸದ್ದು ಕೇಳಿದ ನಂತರ ಮ್ಯಾಂಚೆಸ್ಟರ್ ಅರೇನಾದಿಂದ ದೂರ ಉಳಿಯುವಂತೆ ಎಚ್ಚರಿಕೆ ನೀಡಲಾಗಿದೆ. ಇವೋ ಡೆಲ್ಗಾಡೋ ಎಂಬ ಪ್ರತ್ಯಕ್ಷದರ್ಶಿ ಸಿಎನ್ ಎನ್ ಮಾಧ್ಯಮದ ಜತೆ ಮಾತನಾಡಿ, ವೇದಿಕೆ ಹಾಗೂ ಪ್ರೇಕ್ಷಕರು ಕೂರುವ ಸ್ಥಳದಲ್ಲಿ ಭಾರೀ ಹೊಗೆಯಿತ್ತು. ಅಲ್ಲಿ ತುಂಬ ದೊಡ್ಡ ಸ್ಫೋಟವಾಯಿತು. ಎಲ್ಲರೂ ಕೂಗಿಕೊಂಡು ಓಡಿಹೋದರು ಎಂದು ಹೇಳಿದ್ದಾರೆ.
ಸಂಗೀತ ಕಾರ್ಯಕ್ರಮದ ನಂತರ ಎರಡು ಬಾರಿ ದೊಡ್ಡ ಶಬ್ದ ಕೇಳಿಸಿತು. ಇನ್ನು ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ಹೇಳಿರುವ ಪ್ರಕಾರ, ಹಲವರು ಮೃತಪಟ್ಟು, ಅನೇಕರಿಗೆ ಗಾಯಗಳಾಗಿವೆ. ಬಾಂಬ್ ಸ್ಫೋಟಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಭಯೋತ್ಪಾದನಾ ನಿಗ್ರಹ ದಳವು ಇದನ್ನು ಭಯೋತ್ಪಾದನೆ ಕೃತ್ಯ ಎಂದೇ ಪರಿಗಣಿಸಲಿದೆ.[ಸಿರಿಯಾದಲ್ಲಿ ಕಾರ್ ಬಾಂಬ್ ದಾಳಿಗೆ 100ಕ್ಕೂ ಅಧಿಕ ಮಂದಿ ಬಲಿ]
ಸ್ಫೋಟದ ಸ್ಥಳಕ್ಕೆ ಹತ್ತಿರದಲ್ಲಿರುವ ಮ್ಯಾಂಚೆಸ್ಟರ್ ವಿಕ್ಟೋರಿಯಾ ನಿಲ್ದಾಣವನ್ನು ಮುಚ್ಚಲಾಗಿದೆ. ಎಲ್ಲ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಬಿಬಿಸಿ ವರದಿ ಪ್ರಕಾರ ಗಾಯಾಳುಗಳಿಗೆ ಪ್ಯಾರಾ ಮೆಡಿಕಲ್ ನವರು ಚಿಕಿತ್ಸೆ ನೀಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications