ಭಾರತ-ಆಸ್ಟ್ರೇಲಿಯಾ ಪ್ರಥಮ ಟೆಸ್ಟ್ ಮುಂದೂಡಿಕೆ
ಮೆಲ್ಬೋರ್ನ್, ನ. 29: ಬೌನ್ಸರ್ಗೆ ಆಸ್ಟ್ರೇಲಿಯಾ ಆಟಗಾರ ಫಿಲ್ ಹ್ಯೂಜಸ್ ಬಲಿಯಾದ ಹಿನ್ನೆಲೆಯಲ್ಲಿ ಭಾರತ-ಆಸ್ಟ್ರೇಲಿಯಾ ಪ್ರಥಮ ಟೆಸ್ಟ್ ಮುಂದೂಡಲ್ಪಟ್ಟಿದೆ.
ಆಸ್ಟ್ರೇಲಿಯಾದ ಬ್ರಿಸ್ಬೇನ್ ನಗರದಲ್ಲಿ ಡಿಸೆಂಬರ್ 4ರಂದು ಆಸ್ಟ್ರೇಲಿಯಾ ಹಾಗೂ ಭಾರತ ಮಧ್ಯೆ ಪ್ರಥಮ ಟೆಸ್ಟ್ ಆರಂಭವಾಗಬೇಕಿತ್ತು. ಈಗ ಪಂದ್ಯವನ್ನು ಮುಂದೂಡಲಾಗಿದ್ದರೂ ಮುಂದಿನ ದಿನಾಂಕವನ್ನು ಪ್ರಕಟಿಸಿಲ್ಲ. ಈ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತವು ನಾಲ್ಕು ಪಂದ್ಯಗಳನ್ನು ಆಡಲಿತ್ತು. [ಭಾರತ-ಆಸ್ಟ್ರೇಲಿಯಾ ವೇಳಾಪಟ್ಟಿ, ಟಿವಿ ಟೈಮಿಂಗ್ಸ್]
ಈ ಸಂದರ್ಭದಲ್ಲಿ ನಿಗದಿಪಡಿಸಿದ್ದ ದಿನಾಂಕದಲ್ಲಿ ಪಂದ್ಯ ಆಡುವುದು ಕಾರ್ಯಸಾಧುವೂ ಅಲ್ಲ, ನ್ಯಾಯೋಚಿತವೂ ಅಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿಕೆ ನೀಡಿದೆ.
ತಂಡದ ಸದಸ್ಯನೋರ್ವನ ಅಂತ್ಯಸಂಸ್ಕಾರದ ಮರುದಿನವೇ ಉಳಿದ ಆಟಗಾರರು ಪಂದ್ಯ ಆಡಲು ಮಾನಸಿಕವಾಗಿ ಸಿದ್ಧರಾಗುವುದು ಸಾಧ್ಯವಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೇಮ್ಸ್ ಸುಥರ್ಲ್ಯಾಂಡ್ ತಿಳಿಸಿದ್ದಾರೆ. [ಆಸ್ಟ್ರೇಲಿಯಾ ಕ್ರಿಕೆಟರ್ ಗೆ ಮಾರಕವಾದ ಬೌನ್ಸರ್]

ಬಿಬಿಸಿಐಗೆ ಧನ್ಯವಾದ ಹೇಳಿದ ಕ್ರಿಕೆಟ್ ಆಸ್ಟ್ರೇಲಿಯಾ: ಆಸ್ಟ್ರೇಲಿಯಾ ಎದುರಿಸುತ್ತಿರುವ ಸಂಧಿಗ್ಧ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಪಂದ್ಯ ಮುಂದೂಡಲು ಕೈಗೊಂಡ ತೀರ್ಮಾನಕ್ಕೆ ಬಿಸಿಸಿಐ ಬೆಂಬಲ ನೀಡಿದೆ. ಇದಕ್ಕಾಗಿ ನಾವು ಅವರಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಜೇಮ್ಸ್ ತಿಳಿಸಿದರು. [ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್, ಕನ್ನಡಿಗ ರಾಹುಲ್ ಆಯ್ಕೆ]
ಪಂದ್ಯ ಮುಂದೂಡಿದ್ದರಿಂದ ಉಂಟಾಗಿರುವ ಗೊಂದಲ ಹಾಗೂ ಆತಂಕಗಳನ್ನು ನಾವು ಕೆಲವೇ ದಿನಗಳಲ್ಲಿ ಬಗೆಹರಿಸಲಿದ್ದೇವೆಂದು ಅವರು ಭರವಸೆ ನೀಡಿದರು. [ಫಿಲ್ ಹ್ಯೂಜ್ ಚೇತರಿಕೆಗೆ ಕೊಯ್ಲಿ ಶುಭ ಹಾರೈಕೆ]
ಅಲ್ಲದೆ, ಹ್ಯೂಜಸ್ ಸಾವಿನ ಹಿನ್ನೆಲೆಯಲ್ಲಿ ಅಡೆಲೇಡ್ ನಗರದಲ್ಲಿ ನಡೆಯಬೇಕಿದ್ದ ಭಾರತದ ಯೋಜಿತ ಎರಡು ದಿನಗಳ ಪಂದ್ಯ ಕೂಡ ರದ್ದಾಗಿದೆ.

ಡಿಸೆಂಬರ್ 3ರಂದು ಹ್ಯೂಜಸ್ ಅಂತ್ಯಸಂಸ್ಕಾರ: ಮೃತ ಹ್ಯೂಜಸ್ ಅವರ ಅಂತ್ಯ ಸಂಸ್ಕಾರ ಡಿಸೆಂಬರ್ 3ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಹ್ಯೂಜಸ್ ಕುಟುಂಬದ ವಾಸಸ್ಥಾನವಾದ ಉತ್ತರದ ನ್ಯೂ ಸೌತ್ ವೇಲ್ಸ್ನಲ್ಲಿರುವ ಮ್ಯಾಕ್ಸ್ವಿಲ್ಲೆ ನಗರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
-
ಐಸಿಸಿ ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಗೌತಮ್ ಗಂಭೀರ್ಗೆ 'ದಾದಾ' ಸೌರವ್ ಗಂಗೂಲಿ ಎಚ್ಚರಿಕೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ












Click it and Unblock the Notifications