ಕೊರೊನಾ ಭೀತಿ: ಆಸ್ಪತ್ರೆಯಲ್ಲಿದ್ದ 2000 ಮಾಸ್ಕ್ ಕಳ್ಳತನ
ಫ್ರೆಂಚ್, ಮಾರ್ಚ್ 4: ಚೀನಾದಿಂದ ವಿಶ್ವಾದ್ಯಂತ ಹರಡುತ್ತಿರುವ ಭಯಾನಕ ಕೊರೊನಾ ವೈರಸ್ ಈಗ ಹಲವು ದೇಶಗಳಲ್ಲಿ ಮರಣ ಮೃದಂಗ ಬಾರಿಸುತ್ತಿದೆ. ಜಗತ್ತಿನಾದ್ಯಂತ ಸುಮಾರು 93 ಸಾವಿರಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ಬೆಳಕಿಗೆ ಬಂದಿದ್ದು, 3203ಕ್ಕೂ ಅಧಿಕ ಜನರ ಸಾವನ್ನಪ್ಪಿದ್ದಾರೆ.
ಮಾಸ್ಕ್ ಧರಿಸುವುದರಿಂದ ಕೊರೊನಾ ವೈರಸ್ನಿಂದ ತಪ್ಪಿಸಿಕೊಳ್ಳಬಹುದು ಎಂಬ ಸಲಹೆ ಹಿನ್ನೆಲೆ ಜನಸಾಮಾನ್ಯರು ಮಾಸ್ಕ್ ಮೊರೆ ಹೋಗುತ್ತಿದ್ದಾರೆ. ಜಗತ್ತಿನಾದ್ಯಂತ ಮಾಸ್ಕ್ ಗಾಗಿ ಹಾಹಾಕಾರ ಶುರುವಾಗಿದೆ. ಭಾರತದಲ್ಲೂ ಮಾಸ್ಕ್ ಗಾಗಿ ಭಾರಿ ಬೇಡಿಕೆ ಉಂಟಾಗಿದೆ.
ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖದೀಮರು ಮಾಸ್ಕ್ ಗಳನ್ನು ಕಳ್ಳತನ ಮಾಡಲು ಆರಂಭಿಸಿದ್ದಾರೆ. ದಕ್ಷಿಣ ಫ್ರೆಂಚ್ ನಗರದ ಮಾರ್ಸಿಲ್ಲೆ ಆಸ್ಪತ್ರೆಯಲ್ಲಿ ಸುಮಾರು 2000 ಮಾಸ್ಕ್ ಗಳನ್ನು ಕಳ್ಳರು ಕಳ್ಳತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಾಸ್ಕ್ ಗಳು ಕಳ್ಳತನ ಆಗಿರುವ ಕಾರಣ ಆಸ್ಪತ್ರೆ ಅಧಿಕಾರಿಗಳು ಆಂತರಿಕ ತನಿಖೆ ನಡೆಸಲು ಮುಂದಾಗಿದ್ದಾರಂತೆ. ಪ್ರಸ್ತುತ ಪರಿಸ್ಥಿತಿ ನಿಭಾಯಿಸಲು ಆಸ್ಪತ್ರೆಯಲ್ಲಿ ಅಗತ್ಯ ಮಾಸ್ಕ್ ಗಳು ಲಭ್ಯವಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇದುವರೆಗೂ ಫ್ರೆಂಚ್ನಲ್ಲಿ 204 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದೆ. ನಾಲ್ಕು ಜನರು ಕೊರೊನಾಗೆ ಬಲಿಯಾಗಿದ್ದಾರೆ ಎಂದು ವರದಿಗಳು ಹೇಳಿವೆ.
ಇನ್ನು ಭಾರತದಲ್ಲೂ ಮಾಸ್ಕ್ ಗಳಿಗಾಗಿ ಭಾರಿ ಹಾಹಾಕಾರ ಶುರುವಾಗಿದೆ. ಅಗತ್ಯ ಸಂಖ್ಯೆಯ ಮಾಸ್ಕ್ ಗಳಲ್ಲು ಇಲ್ಲದ ಕಾರಣ, ಜನರು ಮಾಸ್ಕ್ ಗಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ. ಕೆಲವೇ ಕೆಲವು ಮೆಡಿಕಲ್ ಶಾಪ್ ಗಳಲ್ಲಿ ಮಾತ್ರ ಮಾಸ್ಕ್ ಲಭ್ಯವಿದ್ದು, ಬೆಲೆ ಕೂಡ ಹೆಚ್ಚು ಮಾಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications