ಗುಪ್ತಚರ ವರದಿ, ಬ್ರಿಟನಿನಲ್ಲಿದ್ದಾರಂತೆ 23,000 ಭಯೋತ್ಪಾದಕರು!
ಲಂಡನ್, ಮೇ 29: ಆತಂಕಕಾರಿ ಬೆಳವಣಿಯೆಲ್ಲಿ ಬ್ರಿಟನ್ನಿನಾದ್ಯಂತ 23,000 ಶಂಕಿತ ಭಯೋತ್ಪಾದಕರಿದ್ದಾರೆ ಎಂದು ಗುಪ್ತಚರ ಇಲಾಖೆ ಹೇಳಿದೆ. ಭೀಕರ ಮ್ಯಾಂಚೆಸ್ಟರ್ ದಾಳಿಯಲ್ಲಿ 22 ಜನ ಸಾವಿಗೀಡಾದ ನಂತರ ಇಂಥಹದ್ದೊಂದು ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿದೆ.
ವರದಿಗಳ ಪ್ರಕಾರ ಲಿಬಿಯಾ ಮೂಲದ ಸಲ್ಮಾನ್ ಅಬೆದಿ ಮೇಲೆ ಗುಪ್ತಚರ ಇಲಾಖೆ ನಿಗಾ ಇಟ್ಟಿದೆ. ಇದೀಗ ಆತನ ವಿವರಗಳನ್ನು ಬಹಿರಂಗಪಡಿಸುವಂತೆ ಅಲ್ಲಿನ ಗುಪ್ತಚರ ಇಲಾಖೆ 'ಎಂಐ5' ಮೇಲೆ ಒತ್ತಡ ಹೆಚ್ಚಾಗಿದೆ. ಏತನ್ಮಧ್ಯೆ ಸರಕಾರಿ ಸಂಸ್ಥೆಗಳು ಮಾಧ್ಯಮಗಳಿಗೆ ಮಾಹಿತಿ ನೀಡಿ ಭಯೋತ್ಪಾದಕ ಮನಸ್ಥಿತಿಯ 23,000 ಜನರು ದೇಶದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದೆ.

ಇವರಲ್ಲಿ 3,000 ಜನರು ಅಪಾಯಕಾರಿಗಳು ಎಂದು ವಿಂಗಡಣೆ ಮಾಡಲಾಗಿದ್ದು ಇವರ ಮೇಲೆ ತನಿಖಾ ಸಂಸ್ಥೆಗಲು ನಿರಂತರ ನಿಗಾ ಇಟ್ಟಿವೆ. ಇವರ ಮೇಲೆ ನಿಗಾ ಇಡಲೆಂದೇ 500 ಕಾರ್ಯಾಚರಣೆಗಳನ್ನು ಪೊಲೀಸರು ಮತ್ತು ಗುಪ್ತಚರ ಇಲಾಖೆಗಳು ಮುನ್ನಡೆಸುತ್ತಿವೆ. ಇನ್ನುಳಿದ 20,000 ಜನ ಕಡಿಮೆ ಅಪಾಯಕಾರಿಗಳು ಎಂದು ವಿಂಗಡಣೆ ಮಾಡಲಾಗಿದೆ.
ಇನ್ನು ಮ್ಯಾಂಚೆಸ್ಟರ್ ಸ್ಪೋಟಕ್ಕೆ ಸಂಬಂಧಿಸಿದಂತೆ 14 ಸ್ಥಳಗಳಲ್ಲಿ ಪೊಲೀಸರು ಇನ್ನೂ ಹುಡುಕಾಟ ಮುಂದುವರಿಸಿದ್ದು 11 ಜನ ಶಂಕಿತರನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಮ್ಯಾಂಚೆಸ್ಟರ್ ಪೊಲೀಸರು, "ದಾಳಿಯ ತನಿಖೆಗೆ ಸಂಬಂಧಿಸಿದಂತೆ ವೇಗವಾದ ಪ್ರಗತಿ ಸಾಧಿಸಿದ್ದೇವೆ. ಈ ಸಂಕೀರ್ಣ ಪ್ರಕರಣ ಭೇದಿಸಲು ಬ್ರಿಟನಿನ ಗುಪ್ತಚರ ಇಲಾಖೆ ಜತೆ ಕೈಜೋಡಿಸಿದ್ದೇವೆ. ಈಗಾಗಲೇ ಶಂಕಿತ 11 ಜನರನ್ನು ಕಸ್ಟಡಿಗೆ ಪಡೆಯಲಾಗಿದೆ," ಎಂದು ಹೇಳಿಕೆ ನೀಡಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications