ನಾರ್ವೇನಲ್ಲಿ ಲಸಿಕೆ ಪಡೆದ 23 ವಯೋವೃದ್ಧರ ಸಾವು; ಲಸಿಕೆ ಅಡ್ಡಪರಿಣಾಮ ಶಂಕೆ
ನಾರ್ವೆ, ಜನವರಿ 16: ಕೊರೊನಾ ಸೋಂಕಿಗೆ ಹಲವು ದೇಶಗಳಲ್ಲಿ ಈಗಾಗಲೇ ಲಸಿಕೆಗಳನ್ನು ನೀಡಲು ಆರಂಭಿಸಲಾಗಿದೆ. ಕೊರೊನಾ ವಿರುದ್ಧ ಹೋರಾಡಲು ಅಭಿವೃದ್ಧಿಪಡಿಸಿರುವ ಕೆಲವು ಲಸಿಕೆಗಳಿಂದ ಅಡ್ಡ ಪರಿಣಾಮಗಳು ಕಂಡುಬರುತ್ತಿದ್ದು, ನಾರ್ವೇನಲ್ಲಿಯೂ ಲಸಿಕೆ ಪಡೆದ ನಂತರ ಸುಮಾರು 23 ವಯೋವೃದ್ಧರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಈ 23 ಮಂದಿ ಹೊರತಾಗಿ ಲಸಿಕೆ ಪಡೆದ ನಂತರ ಹಲವರು ಅಸ್ವಸ್ಥಗೊಂಡಿರುವುದಾಗಿ ವರದಿಯಾಗಿದೆ.
ವಯೋವೃದ್ಧರ ಈ ಸಾವಿನ ಹಿಂದಿನ ನಿಖರ ಕಾರಣದ ಕುರಿತು ತಜ್ಞರು ಪರಿಶೀಲನೆ ನಡೆಸುತ್ತಿದ್ದು, ಬಯೋ ಎನ್ ಟೆಕ್ ನ ಫೈಜರ್ ಲಸಿಕೆ ಪಡೆದ 23 ಮಂದಿ ಸಾವನ್ನಪ್ಪಿರುವುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಇವರೆಲ್ಲರೂ 80 ವಯಸ್ಸಿನ ಮೇಲ್ಪಟ್ಟವರಾಗಿದ್ದು, ಲಸಿಕೆ ಅಡ್ಡಪರಿಣಾಮ ಗೋಚರಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಲಸಿಕೆಗೂ, ವಯೋವೃದ್ಧರ ಸಾವಿಗೂ ಇರುವ ನೇರ ಸಂಬಂಧದ ಬಗ್ಗೆ ಇನ್ನೂ ಸ್ಪಷ್ಟತೆ ದೊರೆತಿಲ್ಲ. ಆದರೆ ಸತ್ತ 23 ಮಂದಿಯಲ್ಲಿ 13 ಮಂದಿಗೆ ಒಂದೇ ರೀತಿಯ ಲಕ್ಷಣಗಳು ಕಾಣಿಸಿಕೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ನಾರ್ವೇನಲ್ಲಿ ಈ ಸಾವುಗಳು ವರದಿಯಾಗುತ್ತಿದ್ದಂತೆ ಯುರೋಪಿಯನ್ ದೇಶಗಳಿಗೆ ಲಸಿಕೆ ಪೂರೈಸುವುದನ್ನು ಫೈಜರ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಸಂಗತಿ ನಂತರ 80 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕುರಿತು ಮುಂಜಾಗ್ರತಾ ಕ್ರಮ ವಹಿಸಬೇಕೆಂದು ನಾರ್ವೇ ಸಾರ್ವಜನಿಕಾ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
ನಾರ್ವೇನಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಕೊರೊನಾ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಇದುವರೆಗೂ ಮೂವತ್ತು ಸಾವಿರ ಮಂದಿಗೆ ಲಸಿಕೆ ನೀಡಲಾಗಿದೆ. ಫೈಜರ್ ಹಾಗೂ ಮಾಡೆರ್ನಾ ಲಸಿಕೆಗಳ ಬಳಕೆಗೆ ನಾರ್ವೇ ಅನುಮತಿ ನೀಡಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications