ನೇಪಾಳದಲ್ಲಿ ಭಾರಿ ಚಂಡಮಾರುತಕ್ಕೆ ಸಿಲುಕಿ 35 ಮಂದಿ ಸಾವು, 400ಕ್ಕೂ ಹೆಚ್ಚು ಮಂದಿಗೆ ಗಾಯ
ಕಠ್ಮಂಡು, ಏ.1: ನೇಪಾಳದಲ್ಲಿ ಭಾನುವಾರ ಸಂಜೆ ಸೃಷ್ಟಿಯಾಗಿದ್ದ ಭಾರಿ ಚಂಡಮಾರುತಕ್ಕೆ 35 ಮಂದಿ ಬಲಿಯಾಗಿದ್ದಾರೆ.
ದಕ್ಷಿಣ ಭಾಗದ ಬಾರಾ ಜಿಲ್ಲೆ ಹಾಗೂ ಪರ್ಸಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ ಸಾವು ನೋವು ಸಂಭವಿಸಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.
ವಿರಾಜಪೇಟೆ, ಬಂಡೀಪುರದಲ್ಲಿ ಮಳೆ, ರೈತರಲ್ಲಿ ಸಂತಸ
ಪರ್ಸಾದಲ್ಲಿ ಇನ್ನೂ ಮಳೆ ನಿಂತಿಲ್ಲವಾಗಿ ಸಾವಿನ ಸಂಖ್ಯೆ ಹೆಚ್ಚಬಹುದೆಂದು ಪರ್ಸಾ ಜಿಲ್ಲಾ ಪೋಲೀಸ್ ಅಧಿಕಾರಿಗಳು ಹೇಳಿದ್ದಾರೆ. 400 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಭದ್ರತಾ ಸಿಬ್ಬಂದಿಯನ್ನು ಚಂಡಮಾರುತ ಪೀಡಿತ ಪ್ರದೇಶದಲ್ಲಿ ಇರಿಸಲಾಗಿದೆ.
ಇನ್ನೆರಡು ದಿನದಲ್ಲಿ ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಮಳೆ
ಎರಡು ಬೆಟಾಲಿಯನ್ ಗಳನ್ನು ತಕ್ಷಣವೇ ಇಲ್ಲಿಂ ನಿಯೋಜಿಸಲಾಗಿದೆ.ತ್ತುರ್ತು ನಿಗಾ ಹೆಲಿಕಾಪ್ಟರ್ ಗಳು ಕಾರ್ಯಾಚರಣೆ ನಡೆಸುತ್ತಿದೆ ನಮ್ಮ ಭದ್ರತಾ ಸಂಸ್ಥೆಗಳು ಹವಾಮಾನ ತಿಳಿಯಾಗುವುದನ್ನು ಕಾಯ್ಯುತ್ತಿದೆ. ಪ್ರಧಾನಿಗಳ ಆಪ್ತ ಸಲಹೆಗಾರ ಬಿಷ್ಣು ರಿಮಲ್ ತಿಳಿಸಿದ್ದಾರೆ.