250 ಕೆಜಿ ತೂಕದ ಐಸಿಸ್ ಉಗ್ರನಿಗೆ ಪೊಲೀಸ್ ಜೀಪ್ ಸಾಕಾಗೋದಿಲ್ಲ!
ಬಾಗ್ದಾದ್, ಜನವರಿ.19: ಇಸ್ಲಾಮಿಕ್ ಸ್ಟೇಟ್ ನ ಉಗ್ರ ಮುಫ್ತಿ ಅಬು ಅಬ್ದುಲ್ ಬಾರಿಯನ್ನು ಬಂಧಿಸುವಲ್ಲಿ ಇರಾಕ್ ನ ವಿಶೇಷ ಭದ್ರತಾ ಪಡೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಆದರೆ, 250 ಕೆಜಿ ತೂಕದ ಉಗ್ರನನ್ನು ಭದ್ರತಾ ಪಡೆ ಸಿಬ್ಬಂದಿ ಕರೆದೊಯ್ಯಲು ಪರದಾಡಿದಂತಾ ಘಟನೆ ನಡೆದಿದೆ.
ಇರಾಕ್ ನಲ್ಲಿ ಬಂಧಿಸಲ್ಪಟ್ಟಿದ್ದ ಉಗ್ರ ಜಬ್ಬಾಗೆ ವಿಶೇಷ ಭದ್ರತಾ ಪಡೆಯ ವಾಹನವೂ ಸಾಕಾಗಲಿಲ್ಲ. ದಢೂತಿ ದೇಹ ಉಗ್ರನನ್ನು ಕರೆಯೊಯ್ಯಲು ಭದ್ರತಾ ಸಿಬ್ಬಂದಿ ಬೇರೆ ವಾಹನವನ್ನೇ ತರಬೇಕಾಯಿತು. ಪುಟ್ಟ ಟ್ರಕ್ ವೊಂದರಲ್ಲಿ ಭದ್ರತಾ ಸಿಬ್ಬಂದಿ ಉಗ್ರನನ್ನು ಕರೆದುಕೊಂಡು ಹೋಗಿದ್ದು ಸುದ್ದಿಯಾಗಿದೆ.
ಜಿಹಾದಿ ಗ್ಯಾಂಗ್ ಸೆರೆ: ಐಸಿಸ್ ಕಮಾಂಡರ್ ವಿದೇಶಕ್ಕೆ ಪರಾರಿ?
ಐಸಿಸ್ ಉಗ್ರ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಫ್ತಿ ಅಬು ಅಬ್ದುಲ್ ಬಾರಿ ಅಲಿಯಾಸ್ ಜಬ್ಬಾ ಭದ್ರತಾ ಸಿಬ್ಬಂದಿ ವಿರುದ್ಧವೇ ಫತ್ವಾ ಹೊರಡಿಸುತ್ತಿದ್ದನು ಎನ್ನಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್ ಆಗಿದ್ದ ಐಸಿಸ್ ಉಗ್ರ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕುತ್ತಿದ್ದನು.

ಮುಸ್ಲಿಂ ಪಾದ್ರಿಗಳ ಹತ್ಯೆಗೂ ಫತ್ವಾ:
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಹೀಗೆ ಒಪ್ಪಿಕೊಳ್ಳದಿದ್ದರೆ ಮುಸ್ಲಿಂ ಪಾದ್ರಿಗಳು ಎನ್ನುವುದನ್ನೂ ನೋಡದೇ ಹತ್ಯೆ ಮಾಡುವಂತೆ ಮುಫ್ತಿ ಅಬು ಅಬ್ದುಲ್ ಬಾರಿ ಫತ್ವಾಗಳನ್ನು ಹೊರಡಿಸುತ್ತಿದ್ದನು. ಇದರ ಜೊತೆಗೆ ಇರಾಕ್ ಭದ್ರತಾ ಸಿಬ್ಬಂದಿ ವಿರುದ್ಧ ತಮ್ಮ ಕೊನೆಯುಸಿರು ಇರುವವರೆಗೂ ಹೋರಾಟ ಮಾಡುವಂತೆ ಪ್ರಚೋದನಕಾರಿ ಪೋಸ್ಟ್ ಗಳನ್ನು ಉಗ್ರನು ಹಾಕಿತ್ತಿದ್ದ ಎನ್ನಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications