26/11 ಮುಂಬೈ ದಾಳಿ ರೂವಾರಿ ಹಫೀಜ್ ಸಯೀದ್ ಗೆ 5 ವರ್ಷ ಜೈಲು
ಇಸ್ಲಮಾಬಾದ್, ಫೆಬ್ರವರಿ.12: ಮುಂಬೈ ಉಗ್ರ ದಾಳಿ ಹಿಂದಿನ ಮಾಸ್ಟರ್ ಮೈಂಡ್ ಎಂದೇ ಕರೆಸಿಕೊಂಡಿರುವ ಲಷ್ಕರ್ -ಇ-ತೈಬಾ ಉಗ್ರ ಸಂಘಟನೆ ಸಂಸ್ಥಾಪಕ ಹಫೀಜ್ ಸಯೀದ್ ಗೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಐದೂವರೆ ವರ್ಷ ಜೈಲುಶಿಕ್ಷೆ ವಿಧಿಸಿದೆ.
ಪಾಕಿಸ್ತಾನದ ಎರಡು ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕ ಸಂಬಂಧಿಸಿದಂತೆ ಪಾಕಿಸ್ತಾನದ ಕೋರ್ಟ್ ಈ ಆದೇಶ ಹೊರಡಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆಯು ವರದಿ ಮಾಡಿದೆ. ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಹಫೀಜ್ ಸಯೀದ್ ಗೆ ಐದೂವರೆಗ ವರ್ಷ ಜೈಲುಶಿಕ್ಷೆ ಹಾಗೂ ಒಂದು ಪ್ರಕರಣಕ್ಕೆ 15 ಸಾವಿರ ರೂಪಾಯಿಯಂತೆ ಎರಡು ಪ್ರಕರಣಕ್ಕೆ 30 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗಿದೆ.
ಎಲ್ಇಟಿ ಸಂಸ್ಥಾಪಕ ಮುಖ್ಯಸ್ಥ ಹಫೀಜ್ ಸಯೀದ್ ನಿಷೇಧಿತ ಲಷ್ಕರ್ ಇ ತೈಬಾ ಹಾಗೂ ಜಮಾತ್ ಉದ್ ದವಾ ಉಗ್ರ ಸಂಘಟನೆಗಳು ನಡೆಸುವ ಉಗ್ರ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದನು ಎಂದು ಆರೋಪಿಸಲಾಗಿತ್ತು.

ನಿಷೇಧಿತ ಸಂಘಟನೆಯ ಮುಖ್ಯಸ್ಥನಲ್ಲಿ ಕೋಟಿ ಕೋಟಿ ಆಸ್ತಿ:
2008ರ ನವೆಂಬರ್ 26ರಂದು ನಡೆದ ಮುಂಬೈ ದಾಳಿಯಲ್ಲಿ 166ಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದರು. ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಇದೇ ಹಫೀಜ್ ಸಯೀದ್ ಎಂದು ಆರೋಪಿಸಲಾಗಿತ್ತು. ಇದರ ಬೆನ್ನಲ್ಲೇ ಅಮೆರಿಕಾ ರಾಷ್ಟ್ರೀಯ ರಕ್ಷಣಾ ಸಮಿತಿಯು ಲಷ್ಕರ್ ಇ ತೈಬಾ ಸಂಘಟನೆಯ್ನು ನಿಷೇಧಿತ ಉಗ್ರ ಸಂಘಟನೆಗಳ ಗುಂಪಿಗೆ ಸೇರಿಸಿತು. ನಂತರದಲ್ಲಿ ಉಗ್ರ ಸಂಘಟನೆಗೆ ಆರ್ಥಿಕ ನೆರವು ನೀಡಿದ ಹಿನ್ನೆಲೆಯಲ್ಲಿ ಪಾಕ್ ಕೋರ್ಟ್ ಇದೀಗ ಹಫೀಜ್ ಸಯೀದ್ ಗೆ ಜೈಲುಶಿಕ್ಷೆ ವಿಧಿಸಿದೆ.
ಇನ್ನು, ಹಫೀಜ್ ಸಯೀದ್ ವಿರುದ್ಧ ಪಾಕಿಸ್ತಾನದಲ್ಲೂ ಕೂಡಾ ಹಲವು ಪ್ರಕರಣಗಳು ದಾಖಲಾಗಿದ್ದು, 23 ಕೇಸ್ ಗಳು ಈತ ಮೇಲಿದ್ದವು. ಇಷ್ಟಾಗಿಯೂ ಕೂಡಾ ಪಾಕಿಸ್ತಾನದಲ್ಲಿ ರಾಜಾರೋಷವಾಗಿ ಓಡಾಡಿಕೊಂಡಿದ್ದ ಹಫೀಜ್ ಸಯೀದ್, ಭಾರತ ವಿರೋಧಿ ಮೆರವಣಿಗೆ, ಸಭೆ, ಸಮಾರಂಭಗಳನ್ನು ನಡೆಸಿಕೊಂಡು ಮೆರೆಯುತ್ತಿದ್ದನು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications