Breaking; ಕಾಬೂಲ್; ಶಾಲೆಗಳಲ್ಲಿ 3 ಸ್ಪೋಟ, ಹಲವರ ಸಾವು
ಕಾಬೂಲ್, ಏಪ್ರಿಲ್ 19; ಅಫ್ಘಾನಿಸ್ತಾನದ ಕಾಬೂಲ್ನ ಶಾಲೆಯಲ್ಲಿ ಮೂರು ಸ್ಫೋಟ ಸಂಭವಿಸಿದೆ. ಪಶ್ಚಿಮ ಕಾಬೂಲ್ನ ಪ್ರೌಢಶಾಲೆಯಲ್ಲಿ ಘಟನೆ ನಡೆದಿದ್ದು, ಹಲವಾರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ಮಂಗಳವಾರ ಶಾಲೆ ಮತ್ತು ಅದರ ಅಕ್ಕಪಕ್ಕದಲ್ಲಿರುವ ಅಲ್ಪಸಂಖ್ಯಾತ ಶಿಯಾ ಹಜಾರಾ ಸಮುದಾಯದವರನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ. ಘಟನೆಯಲ್ಲಿ ಹಲವಾರು ಜನರು ಮೃತಪಟ್ಟಿದ್ದಾರೆ ಎಂದು ಕಾಬೂಲ್ ಆರೋಗ್ಯ ಸಚಿವಾಲಯ ಹೇಳಿದೆ.

ಇದುವರೆಗೂ ನಾಲ್ವರು ಮೃತಪಟ್ಟಿದ್ದಾರೆ. 14 ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪ್ರೌಢಶಾಲೆಯಲ್ಲಿ ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂದು ಪರಿಶೀಲನೆ ನಡೆಸಲಾಗುತ್ತಿದೆ. ಪಶ್ಚಿಮ ಕಾಬೂಲ್ನ ಮುಮ್ತಾಝ್ ಪ್ರೌಢಶಾಲೆ ಆವರಣದಲ್ಲಿ ಮೊದಲ ಸ್ಫೋಟದ ವರದಿಯಾಗಿದೆ.
ಕಾಬೂಲ್ನ ಕಮಾಂಡರ್ನ ವಕ್ತಾರ ಖಲೀದ್ ಝರ್ಡನ್ ಘಟನೆ ಬಗ್ಗೆ ಮಾಹಿತಿ ನೀಡಿದ್ದು, "ಶಿಯಾ ಸಮುದಾಯದವರನ್ನು ಗುರಿಯಾಗಿಸಿಕೊಂಡು ಮೂರು ಸ್ಪೋಟ ನಡೆಸಲಾಗಿದೆ. ಪ್ರೌಢಶಾಲೆಯಲ್ಲಿ ಹಲವರು ಗಾಯಗೊಂಡಿರುವ ಸಾಧ್ಯತೆ ಇದೆ" ಎಂದು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಇದುವರೆಗೂ ದಾಳಿಯ ಹೊಣೆಯನ್ನು ಯಾವ ಸಂಘಟನೆ ಸಹ ಹೊತ್ತುಕೊಂಡಿಲ್ಲ. ಅಫ್ಘಾನಿಸ್ತಾನದಿಂದ ಅಮೆರಿಕ ಪಡೆಗಳು ವಾಪಸ್ ಆದ ಬಳಿಕ ದೇಶದಲ್ಲಿ ಹಲವಾರು ದಾಳಿಗಳು ನಡೆಯುತ್ತಿವೆ. ಕಾಬೂಲ್ ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ.
ಆಗಸ್ಟ್ನಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ದೇಶವನ್ನು ಸುರಕ್ಷಿತಗೊಳಿಸಲಾಗಿದೆ ಎಂದು ತಾಲಿಬಾನಿಗಳು ಹೇಳಿದ್ದಾರೆ. ಆದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಪರಿಸ್ಥಿತಿಯನ್ನು ಬೇರೆ ರೀತಿಯಲ್ಲೇ ವಿಶ್ಲೇಷಣೆ ಮಾಡಲಾಗುತ್ತಿದೆ. ಇನ್ನೂ ಉಗ್ರರ ಚಟುವಟಿಕೆಗಳು ನಡೆಯುತ್ತಿವೆ ಎಂದು ಉಲ್ಲೇಖಿಸಲಾಗುತ್ತಿದೆ.
ಶಿಯಾ ಹಜಾರಾ ಸಮುದಾಯದವರೇ ಹೆಚ್ಚಾಗಿ ವಾಸಿಸುವ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಹಿಂದೆಯೂ ಸಹ ದಾಳಿ ನಡೆಸಲಾಗಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications