Breaking; ಕಾಬೂಲ್; ಶಾಲೆಗಳಲ್ಲಿ 3 ಸ್ಪೋಟ, ಹಲವರ ಸಾವು
ಕಾಬೂಲ್, ಏಪ್ರಿಲ್ 19; ಅಫ್ಘಾನಿಸ್ತಾನದ ಕಾಬೂಲ್ನ ಶಾಲೆಯಲ್ಲಿ ಮೂರು ಸ್ಫೋಟ ಸಂಭವಿಸಿದೆ. ಪಶ್ಚಿಮ ಕಾಬೂಲ್ನ ಪ್ರೌಢಶಾಲೆಯಲ್ಲಿ ಘಟನೆ ನಡೆದಿದ್ದು, ಹಲವಾರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ಮಂಗಳವಾರ ಶಾಲೆ ಮತ್ತು ಅದರ ಅಕ್ಕಪಕ್ಕದಲ್ಲಿರುವ ಅಲ್ಪಸಂಖ್ಯಾತ ಶಿಯಾ ಹಜಾರಾ ಸಮುದಾಯದವರನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ. ಘಟನೆಯಲ್ಲಿ ಹಲವಾರು ಜನರು ಮೃತಪಟ್ಟಿದ್ದಾರೆ ಎಂದು ಕಾಬೂಲ್ ಆರೋಗ್ಯ ಸಚಿವಾಲಯ ಹೇಳಿದೆ.

ಇದುವರೆಗೂ ನಾಲ್ವರು ಮೃತಪಟ್ಟಿದ್ದಾರೆ. 14 ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪ್ರೌಢಶಾಲೆಯಲ್ಲಿ ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂದು ಪರಿಶೀಲನೆ ನಡೆಸಲಾಗುತ್ತಿದೆ. ಪಶ್ಚಿಮ ಕಾಬೂಲ್ನ ಮುಮ್ತಾಝ್ ಪ್ರೌಢಶಾಲೆ ಆವರಣದಲ್ಲಿ ಮೊದಲ ಸ್ಫೋಟದ ವರದಿಯಾಗಿದೆ.
ಕಾಬೂಲ್ನ ಕಮಾಂಡರ್ನ ವಕ್ತಾರ ಖಲೀದ್ ಝರ್ಡನ್ ಘಟನೆ ಬಗ್ಗೆ ಮಾಹಿತಿ ನೀಡಿದ್ದು, "ಶಿಯಾ ಸಮುದಾಯದವರನ್ನು ಗುರಿಯಾಗಿಸಿಕೊಂಡು ಮೂರು ಸ್ಪೋಟ ನಡೆಸಲಾಗಿದೆ. ಪ್ರೌಢಶಾಲೆಯಲ್ಲಿ ಹಲವರು ಗಾಯಗೊಂಡಿರುವ ಸಾಧ್ಯತೆ ಇದೆ" ಎಂದು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಇದುವರೆಗೂ ದಾಳಿಯ ಹೊಣೆಯನ್ನು ಯಾವ ಸಂಘಟನೆ ಸಹ ಹೊತ್ತುಕೊಂಡಿಲ್ಲ. ಅಫ್ಘಾನಿಸ್ತಾನದಿಂದ ಅಮೆರಿಕ ಪಡೆಗಳು ವಾಪಸ್ ಆದ ಬಳಿಕ ದೇಶದಲ್ಲಿ ಹಲವಾರು ದಾಳಿಗಳು ನಡೆಯುತ್ತಿವೆ. ಕಾಬೂಲ್ ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ.
ಆಗಸ್ಟ್ನಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ದೇಶವನ್ನು ಸುರಕ್ಷಿತಗೊಳಿಸಲಾಗಿದೆ ಎಂದು ತಾಲಿಬಾನಿಗಳು ಹೇಳಿದ್ದಾರೆ. ಆದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಪರಿಸ್ಥಿತಿಯನ್ನು ಬೇರೆ ರೀತಿಯಲ್ಲೇ ವಿಶ್ಲೇಷಣೆ ಮಾಡಲಾಗುತ್ತಿದೆ. ಇನ್ನೂ ಉಗ್ರರ ಚಟುವಟಿಕೆಗಳು ನಡೆಯುತ್ತಿವೆ ಎಂದು ಉಲ್ಲೇಖಿಸಲಾಗುತ್ತಿದೆ.
ಶಿಯಾ ಹಜಾರಾ ಸಮುದಾಯದವರೇ ಹೆಚ್ಚಾಗಿ ವಾಸಿಸುವ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಹಿಂದೆಯೂ ಸಹ ದಾಳಿ ನಡೆಸಲಾಗಿತ್ತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications