ಹಾಲು ಕುಡಿಯದ 3 ವರ್ಷದ ಮಗುವನ್ನು ಮನೆಯಿಂದ ಹೊರಹಾಕಿದ ತಂದೆ!
ಆಸ್ಟಿನ್(ಟೆಕ್ಸಾಸ್), ಅಕ್ಟೋಬರ್ 10: ಅಪ್ಪ ಅಂದ್ರೆ ತನ್ನ ಮಕ್ಕಳ ಸಂತೋಷಕ್ಕಾಗಿ ಏನು ಬೇಕಾದರೂ ಮಾಡಬಲ್ಲ ಮಾಂತ್ರಿಕ. ಆದರೆ ಮೂರು ವರ್ಷದ ಪುಟ್ಟ ಮಗುವನ್ನು ಹಾಲು ಕುಡಿಯಲಿಲ್ಲ ಎಂಬ ಒಂದೇ ಕಾರಣಕ್ಕೆ ಮಧ್ಯರಾತ್ರಿಯೇ ಮನೆಯಿಂದ ಹೊರಹಾಕಿದ ಅಪ್ಪನ ಬಗ್ಗೆ ಕೇಳಿದ್ದೀರಾ?
ಅಮೆರಿಕದ ಟೆಕ್ಸಾಸ್ ನ ಆಸ್ಟಿನ್ ಎಂಬಲ್ಲಿ ನಡೆದ ಘಟನೆ ಇದು. ಭಾರತೀಯ ಕಾಲಮಾನದ ಪ್ರಕಾರ ಶನಿವಾರ ರಾತ್ರಿ ಮಾಥ್ಯೂ ಎನ್ನುವವರ ದತ್ತುಪುತ್ರಿ ಶೆರಿನ್ ಹಾಲುಕುಡಿಯುವುದಿಲ್ಲ ಎಂದು ಹಟ ಮಾಡಿದ್ದಾಳೆ. ಪರಿ ಪರಿಯಾಗಿ ಕೇಳಿಕೊಂಡರೂ ಹಾಲು ಕುಡಿಯದ ಪುಟ್ಟ ಮಗುವಿಗೆ ಮನೆಯಾಚೆ ಇರುವ ದೊಡ್ಡ ಮರದ ಕೆಳಗೆ ತಾಸುಗಟ್ಟಲೆ ನಿಂತಿರುವ ಶಿಕ್ಷೆಯನ್ನು ತಂದೆ ದಯಪಾಲಿಸಿದ್ದಾನೆ.

ಕೆಲಹೊತ್ತು ಮಗು ಅಲ್ಲೇ ನಿಂತಿರುವುದನ್ನು ತಂದೆ ಕಿಟಕಿಯಿಂದ ನೋಡಿ ಸುಮ್ಮನಾಗಿದ್ದಾನೆ. ಆದರೆ ಒಂದೆರಡು ತಾಸು ಕಳೆದ ನಂತರ ಮಗು ಅಲ್ಲಿ ಕಾಣದಿದ್ದಾಗ ಸ್ಥಳಕ್ಕೆ ಹೋಗಿ ಹುಡುಕಾಡಿದರೆ ಮಗು ಸುತ್ತ ಮುತ್ತ ಎಲ್ಲೂ ಕಾಣಿಸದೆ, ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಇದರಿಂದ ಗಾಬರಿಗೊಂಡ ಮ್ಯಾಥ್ಯೂ ಪೊಲೀಸರಿಗೆ ದೂರು ನೀಡಿದ್ದಾನೆ.
ಮಗು ಶೆರಿನ್ ಭಾರತೀಯ ಮೂಲದವಳಾಗಿದ್ದು, ಆಕೆಯನ್ನು ಮ್ಯಾಥ್ಯೂ ದಂಪತಿ ದತ್ತುಪಡೆದಿದ್ದರು. ಅಪೌಷ್ಠಿಕತೆಯಿಂದ ಬಳಲುತ್ತಿದ್ದ ಶೆರಿನ್, ಮ್ಯಾಥ್ಯೂ ದಂಪತಿ ಆಕೆಯನ್ನು ದತ್ತುಪಡೆದ ಮೇಲೆ ಆರೋಗ್ಯದಲ್ಲಿ ಸುಧಾರಿಸಿಕೊಂಡಿದ್ದಳು. ಆದರೆ ಮುಗ್ಧ ಮಗು ಹಾಲು ಕುಡಿಯುವುದಿಲ್ಲ ಎಂದು ನಡುರಾತ್ರಿಯಲ್ಲಿ, ಆ ಮಗುವನ್ನು ನಿರ್ದಯವಾಗಿ ಮನೆಯಿಂದ ಆಚೆ ನಿಲ್ಲಿಸಿದ ತಂದೆಯ ವರ್ತನೆ ಕುರಿತು ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಾಪತ್ತೆಯಾಗಿರುವ ಮಗುವಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಮಗುವಿನ ಕುರಿತು ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications