ನೆದರ್ ಲ್ಯಾಂಡ್ಸ್ ನ ಹೇಗ್ ನಲ್ಲಿ ವಿಶ್ವ ಯೋಗ ದಿನಾಚರಣೆ
ಹೇಗ್, ಜೂನ್ 19: ಇಡೀ ಮನುಕುಲಕ್ಕೆ ಭಾರತ ನೀಡಿದ ಕೊಡುಗೆ ಯೋಗ. ಇಂಥ ಯೋಗ ದಿನಾಚರಣೆಗೆ ಮೂರು ವರ್ಷದ ಹಿಂದೆ ಪ್ರಧಾನಿ ಮೋದಿ ಚಾಲನೆ ಕೊಟ್ಟರು ಎಂದು ನೆದರ್ ಲ್ಯಾಂಡ್ಸ್ ಗೆ ಭಾರತದ ನೂತನ ರಾಯಭಾರಿ ಆಗಿರುವ ವೇಣು ರಾಜಮೊಣಿ ಅವರು ಹೇಳಿದರು.
ನೆದರ್ ಲ್ಯಾಂಡ್ಸ್ ನ ಹೇಗ್ ನಲ್ಲಿ ಜೂನ್ ಹದಿನೆಂಟರ ಭಾನುವಾರ ಹೇಗ್ ನ ಐಸ್ ಪ್ಯಾಲೇಸ್ ನಲ್ಲಿ ಭಾರತ ರಾಯಭಾರ ಕಚೇರಿ ಆಯೋಜಿಸಿದ್ದ ಮೂರನೇ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತುಂಬ ದೊಡ್ಡ ಮಟ್ಟದಲಿ ಆಚರಿಸಿದ ಯೋಗ ದಿನ ಕಾರ್ಯಕ್ರಮದಲ್ಲಿ ಸಾವಿರ ಮಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೆ ಹೇಗ್ ಸಿಟಿ ಕೌನ್ಸಿಲ್ ನ ಬೆಂಬಲವಿತ್ತು. ಯೋಗದ ಅಭ್ಯಾಸ ನಡೆದ ವೇಳೆ ಭಾರತೀಯ ಕ್ರಿಕೆಟರ್ ಸುರೇಶ್ ರೈನಾ, ನೆಂದರ್ ಲ್ಯಾಂಡ್ಸ್ ನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜೋರಿಸ್ ಗ್ರೀವನ್, ಮಿಸ್ ಇಂಡಿಯಾ ಹಾಲೆಂಡ್ 2017 ಪ್ರೀತಿ ಧಿಲ್ಲೋನ್ ಮತ್ತಿತರರು ಪಾಲ್ಗೊಂಡಿದ್ದರು.
ಇನ್ನು ಈ ಕಾರ್ಯಕ್ರಮಕ್ಕೆ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್, ಭಾರತೀಯ ಪ್ರವಾಸೋದ್ಯಮ-ಆಮ್ ಸ್ಟರ್ ಡ್ಯಾಮ್, ಆರ್ಟ್ ಆಫ್ ಲಿವಿಂಗ್ ಫೌಂಡೇಷನ್, ಇಷಾ ಫೌಂಡೇಷನ್ ಮತ್ತು ಜೆಟ್ ಏರ್ ವೇಸ್ ನ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭಾರತ ರಾಯಭಾರ ಕಚೇರಿಯ ಸಾಂಸ್ಕೃತಿಕ ವಿಭಾಗದ ಹೇಗ್ ನ ಗಾಂಧಿ ಕೇಂದ್ರದ ಯೋಗ ತಜ್ಞ ಡಾ.ಅಮಿತ್ ಖನ್ನಾ ಯೋಗ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನವದೆಹಲಿಯ ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಯೋಗದ ಶಿಖಾ ಖನ್ನಾ, ಆರ್ಟ್ ಆಫ್ ಲಿವಿಂಗ್ ನ ಮೆಡೆಲಿನ್ ಗಾಸ್ತ್ರಾ ಮತ್ತು ಸ್ಥಳೀಯ ಯೋಗ ತರಬೇತುದಾರ ಫಾರೂಕ್ ಅಬ್ದುಲ್ ಖಾದರ್ ಭಾಗವಹಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications