4,00,000 ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಅನುಮೋದನೆ ಕೊಟ್ಟ ಪಾಕಿಸ್ತಾನದಿಂದ ನಾವು ಪಾಠ ಕಲಿಯಬೇಕಿಲ್ಲ: ಭಾರತ
ಭಾರತವು ಪಾಕಿಸ್ತಾನದ ಮೇಲೆ "ಆಪರೇಷನ್ ಸಿಂಧೂರ ಕಾರ್ಯಾಚರಣೆ" ನಡೆಸಿದ ಮೇಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ವಾಕ್ಸಮರ ಮುಂದುವರಿದಿದೆ. ಭಾರತವು ಪಾಕಿಸ್ತಾನಕ್ಕೆ ಎಲ್ಲಾ ಕ್ಷೇತ್ರಗಳಲ್ಲೂ ತಿರುಗೇಟು ನೀಡುತ್ತಿದೆ. ಭಾರತವನ್ನು ಗುರಿಯಾಗಿಸಿಕೊಂಡು ಈಚೆಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ನೀಡಿದ್ದ ಹೇಳಿಕೆ ಭಾರೀ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನದ ಜನ್ಮವನ್ನು ಭಾರತ ಜಾಲಾಡಿದೆ.
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ನಡೆದ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಏರ್ಪಟ್ಟಿದೆ. ಪಾಕಿಸ್ತಾನವು ಭಾರತದ ವಿರುದ್ಧದ ಯುದ್ಧದಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ್ದರೂ, ಯುದ್ಧದಲ್ಲಿ ಭಾರತದ ಯುದ್ಧ ವಿಮಾನಗಳು ಹಾನಿಯಾಗಿವೆ ಎನ್ನುವ ಹಸಿಹಸಿ ಸುಳ್ಳನ್ನು ಹೇಳಿಕೊಂಡಿತ್ತು. ಇದೀಗ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲೇ ಮುಖಭಂಗವಾಗಿದೆ.

ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ತನ್ನದೇ ದೇಶದ ಜನರ ಮೇಲೆ ಬಾಂಬ್ ದಾಳಿ ನಡೆಸುವ ಮತ್ತು ವ್ಯವಸ್ಥಿತ ನರಮೇಧ ನಡೆಸುವ ದೇಶವೆಂದರೆ ಅದು ಪಾಕಿಸ್ತಾನ ಎಂದು ಭಾರತ ಹೇಳಿದೆ. "ಮಹಿಳೆಯರು, ಶಾಂತಿ ಹಾಗೂ ಭದ್ರತೆ" ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ನಡೆದ ಮುಕ್ತ ಚರ್ಚೆ ವೇಳೆ ಭಾರತವು ಪಾಕಿಸ್ತಾನಕ್ಕೆ ಈ ತೀಕ್ಷ್ಣ ಪ್ರತ್ಯುತ್ತರವನ್ನು ಕೊಟ್ಟಿದೆ. ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್ ಅವರು, ಪಾಕಿಸ್ತಾನವು 1971ರಲ್ಲಿ ಆಪರೇಷನ್ ಸರ್ಚ್ಲೈಟ್ ಎಂದು ನಡೆಸಿತು. ತನ್ನದೇ ಸೈನ್ಯದಿಂದ ಅವರದ್ದೇ ದೇಶದ 4 ಲಕ್ಷ ಮಹಿಳೆಯರ ಮೇಲೆ ವ್ಯವಸ್ಥಿತವಾಗಿ ಸಾಮೂಹಿಕ ಅತ್ಯಾಚಾರ ನಡೆಸುವುದಕ್ಕೆ ಅನುಮೋದನೆ ಕೊಡಲಾಗಿತ್ತು ಎಂದಿದ್ದಾರೆ.
ಇದರೊಂದಿಗೆ ಪ್ರತಿ ವರ್ಷ ನನ್ನ ದೇಶದ ವಿರುದ್ಧ, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪಾಕ್ನಿಂದ ಯಾವುದೇ ಸತ್ಯಾಂಶವೂ ಇಲ್ಲದ ಟೀಕೆಗಳನ್ನು ನಾವು ಕೇಳುತ್ತಿದ್ದೇವೆ ಎಂದೂ ಇದೇ ಸಂದರ್ಭದಲ್ಲಿ ಟೀಕೆ ಮಾಡಲಾಗಿದೆ. ತಮ್ಮದೇ ದೇಶದ ಜನರ ಮೇಲೆ ಬಾಂಬ್ ದಾಳಿಗಳನ್ನು ಮಾಡುವ ಹಾಗೂ ವ್ಯವಸ್ಥಿತವಾಗಿ ನರಮೇಧ ಮಾಡುವಂತಹ ದೇಶದಿಂದ ನಾವು ಪಾಠ ಕಲಿಯಬೇಕಾಗಿಲ್ಲ. ಅತಿಶಯೋಕ್ತಿಯಿಂದ ಕೂಡಿದ ವಿಷಯಗಳನ್ನು ಹೇಳುವ ಮೂಲಜ ಜಗತ್ತನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
1971ರ ಮಾರ್ಚ್ 25ರಂದು ಆಪರೇಷನ್ ಸರ್ಚ್ಲೈಟ್ ಹೆಸರಲ್ಲಿ ಪೂರ್ವ ಪಾಕಿಸ್ತಾನದಲ್ಲಿ ಸಾರ್ವಜನಿಕರ ಮೇಲೆ ಸಾಮೂಹಿಕ ಹತ್ಯೆ ನಡೆದಿತ್ತು. ಮಹಿಳೆಯರು, ಶಾಂತಿ ಮತ್ತು ಭದ್ರತೆ ಕಾರ್ಯಸೂಚಿಯಲ್ಲಿ ಭಾರತದ ದಾಖಲೆ ಕಳಂಕರಹಿತವಾಗಿದೆ ಎಂದೂ ಹರೀಶ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಷಯ ಚರ್ಚೆ: ಇನ್ನು ಭಾರತವು ಈ ರೀತಿ ಪಾಕಿಸ್ತಾನಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡುವುದಕ್ಕೆ ಮುಖ್ಯ ಕಾರಣ ಪಾಕಿಸ್ತಾನವು ತನ್ನ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯ ಪ್ರಸ್ತಾಪಿಸಿರುವುದೇ ಆಗಿದೆ. ಭಾರತವು ದೇಶದ ಮಹಿಳೆಯರ ಗುಂಪಿನಿಂದ ಕಾಶ್ಮೀರಿ ಮಹಿಳೆಯರನ್ನು ಹೊರಗೆ ಇರಿಸಿದ್ದು, ಶಾಂತಿ ಮತ್ತು ಭದ್ರತಾ ಕಾರ್ಯಸೂಚಿಯನ್ನು ತನ್ನ ನ್ಯಾಯವ್ಯವಸ್ಥೆಯಿಂದ ಅಳಿಸಿಹಾಕಿದೆ ಎನ್ನುವ ಗಂಭೀರವಾದ ಆರೋಪವನ್ನು ಪಾಕಿಸ್ತಾನಿ ಪ್ರತಿನಿಧಿ ಹೇಳಿಕೆಗೆ ಭಾರತ ತಿರುಗೇಟು ಕೊಟ್ಟಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications