ಪಾಕಿಸ್ತಾನದ ಐಷಾರಾಮಿ ಹೋಟೆಲ್ನಲ್ಲಿ ಬಾಂಬ್ ಸ್ಫೋಟ, ನಾಲ್ವರು ಸಾವು
ಇಸ್ಲಾಮಾಬಾದ್, ಏಪ್ರಿಲ್ 23: ಪಾಕಿಸ್ತಾನದ ಐಷಾರಾಮಿ ಹೋಟೆಲ್ ಒಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದ ಐಷಾರಾಮಿ ಹೋಟೆಲ್ ನ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

ಬಾಂಬ್ ಸ್ಪೋಟದ ಕೃತ್ಯದ ಹೊಣೆ ತನ್ನದು ಎಂದು ಪಾಕಿಸ್ತಾನ ತಾಲಿಬಾನಿ ಹೇಳಿಕೊಂಡಿದೆ. ಚೀನಾ ರಾಯಭಾರಿ ತಂಗಿದ್ದ ಕ್ವೆಟ್ಟಾ ನಗರದ ಐಷಾರಾಮಿ ಸೆರೆನಾ ಹೋಟೆಲ್ನ ಪಾರ್ಕಿಂಗ್ ಸ್ಥಳದಲ್ಲಿ ಈ ಸ್ಫೋಟ ಸಂಭವಿಸಿದ್ದು, ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಪಾಕಿಸ್ತಾನದಲ್ಲಿರುವ ಚೀನಾ ರಾಯಬಾರಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎನ್ನಲಾಗಿದ್ದು, ರಾಯಭಾರಿ ನೇತೃತ್ವದ ನಾಲ್ಕು ಜನರ ಚೀನಾದ ನಿಯೋಗವು ಹೋಟೆಲ್ನಲ್ಲಿ ತಂಗಿತ್ತು. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ರಾಯಭಾರಿ ಅವರು ಸಭೆಗೆ ತೆರಳಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಅಜರ್ ಇಕ್ರಂ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಲೂಚಿಸ್ತಾನ್ ಪ್ರಾಂತೀಯ ಸರ್ಕಾರದ ವಕ್ತಾರ ಲಿಯಾಕತ್ ಶಹವಾನಿ, ಈ ದಾಳಿಯ ಹಿಂದೆ ಪಾಕಿಸ್ತಾನದ ಶತ್ರುಗಳು ಇದ್ದಾರೆ ಎಂದು ಹೇಳಿದ್ದಾರೆ.
ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ತಾಲಿಬಾನ್ ಕೂಡ ಅಸ್ತಿತ್ವದಲ್ಲಿದ್ದು, ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ ಮತ್ತು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಮುಂತಾದ ಪ್ರತ್ಯೇಕತಾವಾದಿ ಗುಂಪುಗಳಿಂದ ಆಗಾಗ್ಗೆ ದಾಳಿಗಳು ನಡೆಯುತ್ತಿರುತ್ತವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications