ಸುಡಾನ್ ಸಂಘರ್ಷ: 43 ಮಂದಿ ಸಾವು, ಸಾವಿರಕ್ಕೂ ಅಧಿಕ ಮನೆಗಳಿಗೆ ಬೆಂಕಿ
ಸುಡಾನ್ನಲ್ಲಿ ನಡೆದ ಸಂಘರ್ಷದಲ್ಲಿ 43 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ವರದಿಯಾಗಿದೆ.
ಸುಡಾನ್ನ ಪಶ್ಚಿಮ ದರ್ಪುರ್ ಪ್ರದೇಶದಲ್ಲಿ ಅರಬ್ ದನಗಾಹಿಗಳು ಮತ್ತು ಮಿಸ್ಸೆರಿಯಾ ಜೆಬೆಲ್ ರೈತರ ನಡುವೆ ನಡೆದ ಸಂಘರ್ಷದಲ್ಲಿ ಕನಿಷ್ಠ 43 ಜನ ಮೃತಪಟ್ಟಿದ್ದು, 1,000ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವಿಶ್ವಸಂಸ್ಥೆ ಗುರುವಾರ ತಿಳಿಸಿದೆ.
ನವೆಂಬರ್ 17 ರಂದು ಚಾಡ್ನ ಗಡಿಗೆ ಸಮೀಪವಿರುವ ಒರಟಾದ ಜೆಬೆಲ್ ಮೂನ್ ಪರ್ವತಗಳಲ್ಲಿ ಶಸ್ತ್ರಸಜ್ಜಿತ ಅರಬ್ ದನಗಾಹಿಗಳ ನಡುವೆ ಹಿಂಸಾಚಾರ ಭುಗಿಲೆದ್ದಿತು ಎಂದು ವೆಸ್ಟ್ ದರ್ಫುರ್ ರಾಜ್ಯದ ಸುಡಾನ್ನ ಮಾನವೀಯ ನೆರವು ಕಮಿಷನರ್ ಒಮರ್ ಅಬ್ದೆಲ್ಕರಿಮ್ ಅವರು ಹೇಳಿದ್ದಾರೆ.

ಸುಡಾನ್ನ ಮಾಜಿ ಅಧ್ಯಕ್ಷ ಓಮರ್ ಅಲ್ ಬಶೀರ್ ಅವರ ಕಾಲಾವಧಿ 2003ರಿಂದಲೂ ಈ ನಾಗರಿಕ ಸಂಘರ್ಷ ನಡೆಯುತ್ತಿದೆ. ಏಪ್ರಿಲ್ 11,2019ರಂದು ಅವರು ಅಧಿಕಾರದಿಂದ ಕೆಳಗಿಳಿದರು.
ಅಕ್ಟೋಬರ್ 3, 2020ರಲ್ಲಿ ದರ್ಫುರ್ ಪ್ರದೇಶದ ಸ್ಥಳಿಯರ ಜೊತೆ ಒಪ್ಪಂದ ಮಾಡಿಸುವ ಮೂಲಕ ಹೊಸ ಸರ್ಕಾರವು ಸಂಘರ್ಷವನ್ನು ಕೊನೆಗೊಳಿಸುವ ಯತ್ನ ನಡೆಸಿತ್ತು. ಆದರೆ, ಇನ್ನೂ ಕೆಲ ಸಂಘಟನೆಗಳು ಒಪ್ಪಂದಕ್ಕೆ ಸಹಿಹಾಕಿಲ್ಲ.
ಜೆಬೆಲ್ ಮೂನ್ ಪ್ರದೇಶದಲ್ಲಿ ಸುಮಾರು 66,500 ಮಂದಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದ್ದು, 43,000ಕ್ಕೂ ಅಧಿಕ ಜನರಿಗೆ ಮಾನವೀಯ ನೆಲೆಯಲ್ಲಿ ನೆರವಿನ ಅಗತ್ಯವಿದೆ ಎಂದು 2021ರ ವರದಿ ಹೇಳಿತ್ತು.
ಪ್ರಾಥಮಿಕ ವರದಿಯ ಪ್ರಕಾರ, ಕನಿಷ್ಠ 43 ಜನರು ಕೊಲ್ಲಲ್ಪಟ್ಟಿದ್ದಾರೆ, 46 ಹಳ್ಳಿಗಳನ್ನು ಸುಟ್ಟುಹಾಕಲಾಗಿದೆ ಮತ್ತು ಲೂಟಿ ಮಾಡಲಾಗಿದೆ. ಈಗ ನಡೆಯುತ್ತಿರುವ ಹೋರಾಟದಲ್ಲಿ ಅಪರಿಚಿತ ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜೆಬೆಲ್ ಮೂನ್ ಪ್ರದೇಶದಲ್ಲಿ ಸುಮಾರು 66,500 ಮಂದಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದ್ದು, 43,000ಕ್ಕೂ ಅಧಿಕ ಜನರಿಗೆ ಮಾನವೀಯ ನೆಲೆಯಲ್ಲಿ ನೆರವಿನ ಅಗತ್ಯವಿದೆ ಎಂದು 2021ರ ವರದಿ ಹೇಳಿತ್ತು.
ಅಕ್ಟೋಬರ್ 3, 2020ರಲ್ಲಿ ದರ್ಫುರ್ ಪ್ರದೇಶದ ಸ್ಥಳೀಯರ ಜತೆ ಒಪ್ಪಂದ ಮಾಡಿಸುವ ಮೂಲಕ ಹೊಸ ಸರ್ಕಾರವು ಸಂಘರ್ಷವನ್ನು ಕೊನೆಗೊಳಿಸುವ ಪ್ರಯತ್ನ ಮಾಡಿತ್ತು. ಆದರೆ, ಇನ್ನೂ ಕೆಲವು ಸಂಘಟನೆಗಳು ಒಪ್ಪಂದಕ್ಕೆ ಸಹಿ ಹಾಕಿಲ್ಲ.
'ಮಕ್ಕಳು ಸೇರಿದಂತೆ ಬಹಳಷ್ಟು ಜನರು ನಾಪತ್ತೆಯಾಗಿದ್ದಾರೆ' ಎಂದು ಸುಡಾನ್ ಅಧಿಕಾರಿಗಳು ಹೇಳಿದ್ದಾರೆ.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications