ಸುಡಾನ್ ಸಂಘರ್ಷ: 43 ಮಂದಿ ಸಾವು, ಸಾವಿರಕ್ಕೂ ಅಧಿಕ ಮನೆಗಳಿಗೆ ಬೆಂಕಿ
ಸುಡಾನ್ನಲ್ಲಿ ನಡೆದ ಸಂಘರ್ಷದಲ್ಲಿ 43 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ವರದಿಯಾಗಿದೆ.
ಸುಡಾನ್ನ ಪಶ್ಚಿಮ ದರ್ಪುರ್ ಪ್ರದೇಶದಲ್ಲಿ ಅರಬ್ ದನಗಾಹಿಗಳು ಮತ್ತು ಮಿಸ್ಸೆರಿಯಾ ಜೆಬೆಲ್ ರೈತರ ನಡುವೆ ನಡೆದ ಸಂಘರ್ಷದಲ್ಲಿ ಕನಿಷ್ಠ 43 ಜನ ಮೃತಪಟ್ಟಿದ್ದು, 1,000ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವಿಶ್ವಸಂಸ್ಥೆ ಗುರುವಾರ ತಿಳಿಸಿದೆ.
ನವೆಂಬರ್ 17 ರಂದು ಚಾಡ್ನ ಗಡಿಗೆ ಸಮೀಪವಿರುವ ಒರಟಾದ ಜೆಬೆಲ್ ಮೂನ್ ಪರ್ವತಗಳಲ್ಲಿ ಶಸ್ತ್ರಸಜ್ಜಿತ ಅರಬ್ ದನಗಾಹಿಗಳ ನಡುವೆ ಹಿಂಸಾಚಾರ ಭುಗಿಲೆದ್ದಿತು ಎಂದು ವೆಸ್ಟ್ ದರ್ಫುರ್ ರಾಜ್ಯದ ಸುಡಾನ್ನ ಮಾನವೀಯ ನೆರವು ಕಮಿಷನರ್ ಒಮರ್ ಅಬ್ದೆಲ್ಕರಿಮ್ ಅವರು ಹೇಳಿದ್ದಾರೆ.

ಸುಡಾನ್ನ ಮಾಜಿ ಅಧ್ಯಕ್ಷ ಓಮರ್ ಅಲ್ ಬಶೀರ್ ಅವರ ಕಾಲಾವಧಿ 2003ರಿಂದಲೂ ಈ ನಾಗರಿಕ ಸಂಘರ್ಷ ನಡೆಯುತ್ತಿದೆ. ಏಪ್ರಿಲ್ 11,2019ರಂದು ಅವರು ಅಧಿಕಾರದಿಂದ ಕೆಳಗಿಳಿದರು.
ಅಕ್ಟೋಬರ್ 3, 2020ರಲ್ಲಿ ದರ್ಫುರ್ ಪ್ರದೇಶದ ಸ್ಥಳಿಯರ ಜೊತೆ ಒಪ್ಪಂದ ಮಾಡಿಸುವ ಮೂಲಕ ಹೊಸ ಸರ್ಕಾರವು ಸಂಘರ್ಷವನ್ನು ಕೊನೆಗೊಳಿಸುವ ಯತ್ನ ನಡೆಸಿತ್ತು. ಆದರೆ, ಇನ್ನೂ ಕೆಲ ಸಂಘಟನೆಗಳು ಒಪ್ಪಂದಕ್ಕೆ ಸಹಿಹಾಕಿಲ್ಲ.
ಜೆಬೆಲ್ ಮೂನ್ ಪ್ರದೇಶದಲ್ಲಿ ಸುಮಾರು 66,500 ಮಂದಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದ್ದು, 43,000ಕ್ಕೂ ಅಧಿಕ ಜನರಿಗೆ ಮಾನವೀಯ ನೆಲೆಯಲ್ಲಿ ನೆರವಿನ ಅಗತ್ಯವಿದೆ ಎಂದು 2021ರ ವರದಿ ಹೇಳಿತ್ತು.
ಪ್ರಾಥಮಿಕ ವರದಿಯ ಪ್ರಕಾರ, ಕನಿಷ್ಠ 43 ಜನರು ಕೊಲ್ಲಲ್ಪಟ್ಟಿದ್ದಾರೆ, 46 ಹಳ್ಳಿಗಳನ್ನು ಸುಟ್ಟುಹಾಕಲಾಗಿದೆ ಮತ್ತು ಲೂಟಿ ಮಾಡಲಾಗಿದೆ. ಈಗ ನಡೆಯುತ್ತಿರುವ ಹೋರಾಟದಲ್ಲಿ ಅಪರಿಚಿತ ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜೆಬೆಲ್ ಮೂನ್ ಪ್ರದೇಶದಲ್ಲಿ ಸುಮಾರು 66,500 ಮಂದಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದ್ದು, 43,000ಕ್ಕೂ ಅಧಿಕ ಜನರಿಗೆ ಮಾನವೀಯ ನೆಲೆಯಲ್ಲಿ ನೆರವಿನ ಅಗತ್ಯವಿದೆ ಎಂದು 2021ರ ವರದಿ ಹೇಳಿತ್ತು.
ಅಕ್ಟೋಬರ್ 3, 2020ರಲ್ಲಿ ದರ್ಫುರ್ ಪ್ರದೇಶದ ಸ್ಥಳೀಯರ ಜತೆ ಒಪ್ಪಂದ ಮಾಡಿಸುವ ಮೂಲಕ ಹೊಸ ಸರ್ಕಾರವು ಸಂಘರ್ಷವನ್ನು ಕೊನೆಗೊಳಿಸುವ ಪ್ರಯತ್ನ ಮಾಡಿತ್ತು. ಆದರೆ, ಇನ್ನೂ ಕೆಲವು ಸಂಘಟನೆಗಳು ಒಪ್ಪಂದಕ್ಕೆ ಸಹಿ ಹಾಕಿಲ್ಲ.
'ಮಕ್ಕಳು ಸೇರಿದಂತೆ ಬಹಳಷ್ಟು ಜನರು ನಾಪತ್ತೆಯಾಗಿದ್ದಾರೆ' ಎಂದು ಸುಡಾನ್ ಅಧಿಕಾರಿಗಳು ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications