ಶೀಘ್ರದಲ್ಲೇ 487 ಅಕ್ರಮ ವಲಸಿಗರು ಅಮೆರಿಕದಿಂದ ಭಾರತಕ್ಕೆ ವಾಪಸ್
ಅಮೆರಿಕದಲ್ಲಿ ವಾಸಿಸುತ್ತಿರುವ ಇನ್ನೂ 487 ಅಕ್ರಮ ಭಾರತೀಯ ವಲಸಿಗರನ್ನು ಅಧಿಕಾರಿಗಳು ಗುರುತಿಸಿದ್ದು ಅವರನ್ನು ಶೀಘ್ರದಲ್ಲೇ ಅಮೆರಿಕ ಸರ್ಕಾರ ಗಡೀಪಾರು ಮಾಡಲಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಈಗಾಗಲೇ ಒಂದು ತಂಡ ಅಮೆರಿಕದಿಂದ ವಾಪಸ್ ಆಗಿದ್ದು ಈಗ ಇನ್ನಷ್ಟು ಅಕ್ರಮ ವಲಸಿಗರು ವಾಪಸ್ ಬರಲಿದ್ದಾರೆ.
ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಅಮೆರಿಕದಲ್ಲಿ ನೆಲೆಸಿರುವ 487 ಭಾರತೀಯ ಪ್ರಜೆಗಳನ್ನು ಸ್ಥಳಾಂತರ ಮಾಡಲಿದೆ ಎಂದು ಅಮೆರಿಕ ಭಾರತ ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಅವರು ಹೇಳಿದರು.

ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಹೊರಬರಬೇಕಿದ್ದು ಅಕ್ರಮ ವಲಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಅವರು ಹೇಳಿದರು. ವ್ಯಕ್ತಿಗಳ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಯುಎಸ್ ಅಧಿಕಾರಿಗಳು ಇನ್ನೂ ನೀಡಿಲ್ಲ ಎಂದು ಹೇಳಿದರು. ಗಡೀಪಾರು ಪಟ್ಟಿಯಲ್ಲಿರುವ ಪ್ರಸ್ತುತ 487 ವಲಸಿಗರ ಗುರುತುಗಳನ್ನು ಸರ್ಕಾರ ಪರಿಶೀಲನೆ ನಡೆಸುತ್ತಿದೆ.
ಈಗಾಗಲೇ 104 ಭಾರತೀಯ ಅಕ್ರಮ ವಲಸಿಗರನ್ನು ಅಮೆರಿಕ ವಾಪಸ್ ಕಳಿಸಿದೆ. ಯುಎಸ್ ಮಿಲಿಟರಿ ವಿಮಾನವು ಜನವರಿ 5ರಂದು ಅಕ್ರಮ ವಲಸಿಗರನ್ನು ಕರೆತಂದು ಅಮೃತಸರದಲ್ಲಿ ಇಳಿಸಿದೆ. ಅಕ್ರಮ ವಲಸಿಗರ ವಿರುದ್ಧ ಟ್ರಂಪ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು ಇದು ಟ್ರಂಪ್ ಆಡಳಿತದಲ್ಲಿ ನಡೆದ ಮೊದಲ ದೊಡ್ಡ ಪ್ರಮಾಣ ಗಡೀಪಾರು ಕಾರ್ಯಾಚರಣೆಯಾಗಿದೆ.
ಅನಧಿಕೃತ ಮಾರ್ಗಗಳ ಮೂಲಕ ಅಮೆರಿಕ ಪ್ರವೇಶಿಸಲು ಯತ್ನಿಸಿದವರನ್ನು ಕೈಕಾಲುಗಳನ್ನು ಕಟ್ಟಿ ಭಾರತಕ್ಕೆ ಕರೆತರಲಾಗಿದ್ದು, ಅಮೃತಸರದಲ್ಲಿ ಇಳಿದ ಬಳಿಕವೇ ಅವರ ಸಂಕೋಲೆಗಳನ್ನು ತೆಗೆಯಲಾಗಿದೆ ಎಂದು ಹೇಳಿದ್ದಾರೆ.
ಕಳವಳ ವ್ಯಕ್ತಪಡಿಸಿದ ಮಿಶ್ರಿ
ಅಕ್ರಮ ವಲಸಿಗರ ಕೈಕಾಲು ಕಟ್ಟಿ ಗಡೀಪಾರು ಮಾಡಿದ್ದರ ಬಗ್ಗೆ ವಿಕ್ರಮ್ ಮಿಶ್ರಿ ಕಳವಳ ವ್ಯಕ್ತ ಪಡಿಸಿದ್ದಾರೆ. ಭಾರತ ಸರ್ಕಾರ ಈ ಬಗ್ಗ ಅಮೆರಿಕದ ಜೊತೆ ಚರ್ಚೆ ಮಾಡುತ್ತದೆ ಎಂದು ಹೇಳಿದರು.
2009ರಿಂದ ಈವರೆಗೆ 15,668 ಅಕ್ರಮ ಭಾರತೀಯ ವಲಸಿಗರನ್ನು ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಲಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಹಿತಿ ನೀಡಿದ್ದಾರೆ. ಗಡೀಪಾರಾದವರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಗಡೀಪಾರು ಮಾಡುವ ಪ್ರಕ್ರಿಯೆ ಹಲವು ವರ್ಷಗಳಿಂದ ನಡೆಯುತ್ತಿದೆ ಇದು ಹೊಸ ವಿಚಾರವೇನಲ್ಲ ಎಂದು ಹೇಳಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications