ಬೆಳ್ಳಂಬೆಳಿಗ್ಗೆ ನಡುಗಿದ ಭೂಮಿ: ನೇಪಾಳದಲ್ಲಿ ಭೂಕಂಪ
ಕಠ್ಮಂಡು, ಸೆಪ್ಟೆಂಬರ್ 16: ಬುಧವಾರ ಮುಂಜಾನೆ ಸವಿ ನಿದ್ರೆಯಲ್ಲಿದ್ದ ನೇಪಾಳದ ಜನತೆ ಬೆಚ್ಚಿಬೀಳುವಂತೆ ಭೂಮಿ ನಡುಗಿದೆ. ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಬೆಳಿಗ್ಗೆ ರಿಕ್ಟರ್ ಮಾಪನದಲ್ಲಿ 5.4 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
'ನೇಪಾಳದ ಕಠ್ಮಂಡುವಿನ 50 ಕಿ.ಮೀ. ಪೂರ್ವ ಭಾಗದಲ್ಲಿ ಇಂದು ಬೆಳಿಗ್ಗೆ 5.04ರ ವೇಳೆಗೆ ರಿಕ್ಟರ್ ಮಾಪನದಲ್ಲಿ 5.4 ತೀವ್ರತೆಯ ಭೂಕಂಪ ಉಂಟಾಗಿದೆ' ಎಂದು ಕೇಂದ್ರ ಮಾಹಿತಿ ನೀಡಿದೆ. ಸುಮಾರು 4.5 ಮಿಲಿಯನ್ ಜನಸಂಖ್ಯೆ ಇರುವ ಪ್ರದೇಶದಲ್ಲಿ ಭೂಕಂಪನ ಉಂಟಾಗಿದೆ ಎಂದು ಮೂಲಗಳು ಹೇಳಿವೆ.

Recommended Video
ನೇಪಾಳದ ಮಧ್ಯಮಾಂಚಲ, ಕೊಥಾರಿ, ಕ್ಸಿಜಾಂಗ್-ನೇಪಾಳ್ ಗಡಿ ಪ್ರದೇಶ, ಧೂಮ್ತಂಗ್ ಮುಂತಾದ ಪ್ರದೇಶಗಳಲ್ಲಿ ಭೂಮಿ ನಡುಗಿದೆ. ಇದುವರೆಗೂ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಅಪಾಯಕಾರಿ ಪ್ರಮಾಣದಲ್ಲಿ ಭೂಮಿ ನಡುಗಿಲ್ಲ. ಆದರೆ ಮಲಗಿದ್ದವರು ಗಾಬರಿಯಿಂದ ಎದ್ದು ಮನೆಯಿಂದ ಹೊರಗೋಡಿ ಬರುವಷ್ಟು ತೀವ್ರವಾಗಿತ್ತು ಎನ್ನಲಾಗಿದೆ. ಚೀನಾದ ಕೆಲವು ಭಾಗಗಳಲ್ಲಿಯೂ ಭೂಮಿ ಕಂಪಿಸಿದ ಅನುಭವ ಆಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications