Earthquake: ಪನಾಮ-ಕೊಲಂಬಿಯಾ ಗಡಿಯ ಸಮೀಪ ಕೆರಿಬಿಯನ್ನಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ
ಪನಾಮ-ಕೊಲಂಬಿಯಾ ಗಡಿಯಿಂದ ಕೆರಿಬಿಯನ್ ಸಮುದ್ರದಲ್ಲಿ ಬುಧವಾರ ರಾತ್ರಿ 6.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ಭಾರತ ಸೇರಿದಂತೆ ಹಲವು ದೇಶಗಳಲ್ಲಿ ನಿಯತಕಾಲಿಕವಾಗಿ ಭೂಕಂಪಗಳು ಸಂಭವಿಸುತ್ತಿವೆ. ಅದೃಷ್ಟವಶಾತ್ ಹೆಚ್ಚಿನ ಭೂಕಂಪಗಳು ಹಾನಿ ಅಥವಾ ಜೀವಹಾನಿಯನ್ನು ಉಂಟುಮಾಡುವುದಿಲ್ಲ. ಈ ವೇಳೆ ಕೆರಿಬಿಯನ್ ಸಮುದ್ರದಲ್ಲಿ ನಿನ್ನೆ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದೆ.
ಸಮಯ 03:05ಕ್ಕೆ ಕೊಲಂಬಿಯಾದ ಉತ್ತರಕ್ಕೆ 8.86 ಕಿ.ಮೀ ದೂರದಲ್ಲಿ, ಪಶ್ಚಿಮದಿಂದ 77.25 ಕಿಮೀ ದೂರದಲ್ಲಿ 40 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಕೊಲಂಬಿಯಾ ಮೊಂಟೆರಿಯಾದಿಂದ 151 ಕಿಮೀ ದೂರದಲ್ಲಿ ಈ ಭೂಕಂಪನ ಸಂಭವಿಸಿದೆ. ಯಾವುದೇ ಸಾವು, ನೋವು ಸಂಭವಿಸಿದ ವರದಿಯಾಗಿಲ್ಲ. ಸುನಾಮಿ ಬಗ್ಗೆ ಎಚ್ಚರಿಕೆಯನ್ನೂ ಈವರೆಗೆ ನೀಡಲಾಗಿಲ್ಲ. ಆದರೂ ಜನರು ಭಯಭೀತರಾಗಿದ್ದಾರೆ.

ಈ ಹಿಂದೆ ಹಲವಾರು ಬಾರಿ ಕೊಲಂಬಿಯಾದಲ್ಲಿ ಭೂಕಂಪನ ಸಂಭವಿಸಿವೆ. ಕಳೆದ ಶುಕ್ರವಾರವಷ್ಟೇ ಪೆಸಿಫಿಕ್ ಮಹಾಸಾಗರದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿತ್ತು. ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು ಆತಂಕವನ್ನು ಸೃಷ್ಟಿ ಮಾಡಿತ್ತು. ಭೂಕಂಪನದಿಂದಾಗಿ ಮೂರು ದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿತ್ತು. ಇವುಗಳಲ್ಲಿ ವನವಾಟು, ಫಿಜಿ, ನ್ಯೂ ಕ್ಯಾಲೆಡೋನಿಯಾ ಸೇರಿದ್ದವು. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಈ ಭೂಕಂಪ ನೆಲದ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿತ್ತು.ಆದರೆ ಅದೃಷ್ಟವಶಾತ್ ಅಂತಹ ಯಾವುದೇ ತೊಂದರೆ ಭೂಕಂಪದಿಂದಾಗಲಿಲ್ಲ.
ಭೂಕಂಪ ಯಾವಾಗ ಮತ್ತು ಹೇಗೆ ಸಂಭವಿಸುತ್ತದೆ? ಭೂಮಿಯೊಳಗೆ ಇರುವ ಟೆಕ್ಟೋನಿಕ್ ಪ್ಲೇಟ್ಗಳು ಯಾವಾಗಲೂ ನಿಧಾನವಾಗಿ ಚಲಿಸುತ್ತಿರುತ್ತವೆ. ಆದರೆ ಕೆಲವೊಮ್ಮೆ ಘರ್ಷಣೆಯಿಂದಾಗಿ ಅವು ತಮ್ಮ ಅಂಚುಗಳಲ್ಲಿ ಸಿಲುಕಿಕೊಳ್ಳುತ್ತವೆ ಅಥವಾ ಪರಸ್ಪರ ಡಿಕ್ಕಿ ಹೊಡೆಯುತ್ತವೆ. ಸಾಮಾನ್ಯವಾಗಿ ಈ ಕಾರಣಗಳಿಂದಾಗಿ ಪ್ಲೇಟ್ಗಳು ಇದ್ದಕ್ಕಿದ್ದಂತೆ ಬದಲಾದಾಗ ಅಥವಾ ಅವು ಇದ್ದಕ್ಕಿದ್ದಂತೆ ಸ್ಥಳದಲ್ಲಿ ಬದಲಾದಾಗ ಭೂಕಂಪಗಳು ಸಂಭವಿಸುತ್ತದೆ. ಈ ಕಾರಣದಿಂದಾಗಿ ಭೂಮಿಯ ಗರ್ಭದಿಂದ ಶಕ್ತಿಯು ಹೊರಬರುತ್ತದೆ. ಈ ವೇಳೆ ನಾವು ಮೇಲ್ಮೈಯಲ್ಲಿ ಕಂಪನಗಳನ್ನು ಅನುಭವಿಸುತ್ತೇವೆ. ಭೂಮಿಯ ಹೊರಪದರವನ್ನು 7 ತುಂಡುಗಳಾಗಿ ವಿಂಗಡಿಸಲಾಗಿದೆ ಮತ್ತು ಇದನ್ನು ಟೆಕ್ಟೋನಿಕ್ ಪ್ಲೇಟ್ ಎಂದು ಕರೆಯಲಾಗುತ್ತದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications