Earthquake: ಬೆಳ್ಳಂಬೆಳಗ್ಗೆ ಇಂಡೋನೇಷ್ಯಾದಲ್ಲಿ ಅತ್ಯಧಿಕ ತೀವ್ರತೆಯ ಭೂಕಂಪ
ಬೆಂಗಳೂರು, ಜನವರಿ 09: ಜಪಾನ್ ದೇಶದಲ್ಲಿನ ತೀವ್ರ ಸ್ವರೂಪ ಭೂಕಂಪ ಸಂಭವಿಸಿತ್ತು. ಅದು ಮಾಸುವ ಮುನ್ನವೇ ಮತ್ತೊಂದು ಅಧಿಕ ತೀವ್ರತೆಯ ಭೂಕಂಪ ಮಂಗಳವಾರ ನಸುಕಿನ ಜಾವ ಇಂಡೋನೇಷ್ಯಾಯಾದಲ್ಲಿ ಜರುಗಿದೆ.
ಹೌದು, ಮಂಗಳವಾರ ಬೆಳಗ್ಗೆ 2.18 ಗಂಟೆಗೆ 6.7 ರ ತೀವ್ರತೆಯ ಭೂಕಂಪವು ಇಂಡೋನೇಷಿಯಾದಲ್ಲಿ ತಲೌಡ್ ದ್ವೀಪಗಳಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಅಧಿಕೃತ ಮಾಹಿತಿ ನೀಡಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತನ್ನ ಸಾಮಾಜಿಕ ಜಾಲತಾಣ x ನಲ್ಲಿ ಪೋಸ್ಟ್ ಮಾಡಿದ್ದು, ಜನವರಿ 9 ರಂದು 6.7 ತೀವ್ರತೆಯ ಭೂಕಂಪ ದಾಖಲಾಗಿದೆ. ಇದರ ಲ್ಯಾಟ್ 4.75 ರಷ್ಟಿದ್ದು, ಮತ್ತು ಉದ್ದವು 126.38 ಉದ್ದವಿದೆ. ಭೂಮಿಯ ಆಳಕ್ಕೆ ಸುಮಾರು 80 ಕಿಮೀ ನಷ್ಟು ಇದರ ತೀವ್ರತೆ ಕಂಡು ಬಂದಿದೆ ಎಂದು ತಿಳಿಸಿದೆ.
ಹೊಸ ವರ್ಷಕ್ಕೆ ಜಪಾನ್ಗೆ ಭೂಕಂಪ: ಆಘಾತ
ಒಂದು ವಾರದ ಹಿಂದೆ ಜಪಾನ್ನಲ್ಲಿ 7.5 ತೀವ್ರತೆಯ ಭೂಕಂಪವಾಗಿತ್ತು. ಇದರ ಪರಿಣಾಮದಿಂದ ಇಲ್ಲಿ ಸಾವನ್ನಪ್ಪಿರುವ ಸಂಖ್ಯೆ 128 ರಿಂದ 161 ಕ್ಕೆ ಏರಿದೆ ಎಂದು ಅಲ್ಲಿನ ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.

ಭೂಕಂಪದಿಂದ ಹಾನಿಗೊಳಗಾದ ಮಧ್ಯ ಇಶಿಕಾವಾ ಪ್ರದೇಶದ ಅಧಿಕಾರಿಗಳ ಪ್ರಕಾರ, ಲೆಕ್ಕಕ್ಕೆ ಸಿಗದ ಜನರ ಸಂಖ್ಯೆ 195 ರಿಂದ 103ಕ್ಕೆ ಇಳಿಕೆ ಆಗಿದೆ. ಇಲ್ಲಿ ಅನೇಕ ಕಟ್ಟಡಗಳು ಉರುಳಿವೆ, ದೊಡ್ಡ ಬೆಂಕಿಯನ್ನು ಹುಟ್ಟು ಹಾಕಿತ್ತು.
ಜಪಾನ್ನಾದ್ಯಂತ ಸಾವಿರಾರು ರಕ್ಷಣಾ ತಂಡ ರಚಿಸಲಾಗಿದೆ. ಭೂಕಂಪದಿಂದ ಅಂದಾಜು 1,000 ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಜನರ ಜೀವನ ದುಸ್ತರವಾಗಿದೆ. ಕಳೆದ ಎರಡು ದಿನಗಳಲ್ಲಿ, ಈ ಪ್ರದೇಶವು ಹಿಮದಿಂದ ಆವೃತವಾಗಿದ್ದು, ಕಾರ್ಯಾಚರಣೆಯನ್ನು ಇನ್ನೂ ಕಷ್ಟಕರವಾಗಿಸಿದೆ ಎಂದು ತಿಳಿದು ಬಂದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications