Breaking: 7.1 ತೀವ್ರತೆಯ ಭೂಕಂಪಕ್ಕೆ ನಡುಗಿದ ಉತ್ತರ ಫಿಲಿಪೈನ್ಸ್
ಉತ್ತರ ಫಿಲಿಪೈನ್ಸ್ನಲ್ಲಿ ಬುಧವಾರ ಭಾರಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ, ಭೂಕಂಪನದ ತೀವ್ರತೆಗೆ ಹಲವು ಕಟ್ಟಡಗಳ ಕಿಟಕಿಗಳು ಒಡೆದು ಹೋಗಿವೆ. ಭೂ ಕಂಪನ ಕೇಂದ್ರ ಬಿಂದುವಿನಿಂದ 300 ಕಿಲೋ ಮೀಟರ್ ದೂರದಲ್ಲಿರುವ ರಾಜಧಾನಿ ಮನಿಲಾದಲ್ಲಿ ಎತ್ತರದ ಕಟ್ಟಡಗಳು ಕಂಪಿಸಿವೆ.
ಆಳವಿಲ್ಲದ ಆದರೆ ಶಕ್ತಿಯುತವಾದ ಭೂಕಂಪವು ಲುಜಾನ್ ಮುಖ್ಯ ದ್ವೀಪದಲ್ಲಿ ಬೆಳಗ್ಗೆ 8:43 ರ ಸುಮಾರಿಗೆ ಪರ್ವತ ಪ್ರಾಂತ್ಯದ ಅಬ್ರಾವನ್ನು ಅಪ್ಪಳಿಸಿತು, ಆರಂಭದಲ್ಲಿ ಭೂಕಂಪನೆ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.8 ಇರುವುದು ದಾಖಲಾಗಿದೆ.
ಡೊಲೊರೆಸ್ನಲ್ಲಿ ಭೂಕಂಪನದ ಅನುಭವವಾದ ನಂತರ ಭಯಭೀತರಾದ ಜನರು ತಮ್ಮ ಕಟ್ಟಡಗಳ ಹೊರಗೆ ಓಡಿಹೋದರು ಮತ್ತು ಸ್ಥಳೀಯ ಮಾರುಕಟ್ಟೆಯ ಕಿಟಕಿಗಳು ಒಡೆದುಹೋದವು ಎಂದು ಪೊಲೀಸ್ ಮೇಜರ್ ಎಡ್ವಿನ್ ಸೆರ್ಗಿಯೊ ತಿಳಿಸಿದರು.

"ಭೂಕಂಪವು ತುಂಬಾ ಪ್ರಬಲವಾಗಿದೆ" ಎಂದು ಸೆರ್ಗಿಯೋ ಹೇಳಿದರು, ಪೊಲೀಸ್ ಠಾಣೆಯ ಕಟ್ಟಡದಲ್ಲಿ ಸಣ್ಣ ಬಿರುಕುಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಭೂಕಂಪನದಿಂದ ಇಲ್ಲಿಯವರೆಗೆ ಯಾವುದೇ ಸಾವು-ನೋವು ಅಥವಾ ಹೆಚ್ಚಿನ ಹಾನಿ ವರದಿಯಾಗಿಲ್ಲ ಎಂದು ತಿಳಿದು ಬಂದಿದೆ.
ಜಪಾನ್ನಿಂದ ಆಗ್ನೇಯ ಏಷ್ಯಾದ ಮೂಲಕ ಮತ್ತು ಪೆಸಿಫಿಕ್ ಜಲಾನಯನ ಪ್ರದೇಶದಾದ್ಯಂತ ವ್ಯಾಪಿಸಿರುವ ತೀವ್ರವಾದ ಭೂಕಂಪನ ಚಟುವಟಿಕೆಯ ಚಾಪವಾದ ಪೆಸಿಫಿಕ್ "ರಿಂಗ್ ಆಫ್ ಫೈರ್" ನಲ್ಲಿರುವ ಸ್ಥಳದಿಂದಾಗಿ ಫಿಲಿಪೈನ್ಸ್ನಲ್ಲಿ ನಿಯಮಿತವಾಗಿ ಭೂಕಂಪಗಳು ಸಂಭವಿಸುತ್ತವೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications