Japan Earthquake: ಜಪಾನ್ನಲ್ಲಿ ಸೋಮವಾರ 7.6 ತೀವ್ರತೆ ಭೂಕಂಪ ದಾಖಲು, ಸುನಾಮಿ ಎಚ್ಚರಿಕೆ
ನವದೆಹಲಿ, ಜನವರಿ 01: ತಂತ್ರಜ್ಞಾನದಲ್ಲಿ ಸದಾ ಸುದ್ದಿ ಮಾಡುವ ಜಪಾನ್ ದೇಶದಲ್ಲಿ ಮತ್ತೆ ಸುನಾಮಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇದರ ಭಾಗವೆಂಬಂತೆ ಸೋಮವಾರ ಉತ್ತರ ಮಧ್ಯ ಜಪಾನ್ ಅಧಿಕ ತೀವ್ರತೆಯ ಭೂಕಂಪ ಸಂಭವಿಸಿದೆ.
ಹೌದು, ಜಪಾನ್ನ ಉತ್ತರ ಮಧ್ಯ ಭಾಗದಲ್ಲಿ ಸೋಮವಾರ ಬೆಳಗ್ಗೆ 7.6ರ ಪ್ರಾಥಮಿಕ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿ ಆಗಿದೆ. ಇಲ್ಲಿನ ಇಶಿಕಾವಾ, ನಿಗಾಟಾ ಹಾಗೂ ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಪಶ್ಚಿಮ ಪ್ರದೇಶಗಳಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದೆ. ಇದರ ಬೆನ್ನಲ್ಲೆ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದೆ.

ಇನ್ನೂ ಜಪಾನ್ನ ಹೊಕುರಿಕು ಎಲೆಕ್ಟ್ರಿಕ್ ಪವರ್ ತನ್ನ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಯಾವುದೇ ತೊಂದರೆಗಳು ಆಗಿವೆಯೇ? ಎಂದು ಪರಿಶೀಲನೆ ನಡೆಸಿದೆ ಎಂದು ಎನ್ಎಚ್ಕೆ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಭಾಗಗಳಲ್ಲಿ ಭೂಕಂಪ
ಜಪಾನ್ ಹವಾಮಾನ ಸಂಸ್ಥೆಯು ಇಶಿಕಾವಾ ಮತ್ತು ಹತ್ತಿರದ ಪ್ರಾಂತಗಳಲ್ಲಿ ಭೂಕಂಪ ಜರುಗಿದ್ದನ್ನು ಖಚಿತ ಪಡಿಸಿದೆ. ಇಲ್ಲಿ ಒಟ್ಟು 7.4 ರ ಪ್ರಾಥಮಿಕ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ. ಈ ಭೂಕಂಪವು ಭೂಮಿಯ 16.5 ಅಡಿ ಆಳದಲ್ಲಿ ಸಂಭವಿಸಿದೆ ಎನ್ನಲಾಗಿದೆ.

ಭೂಕಂಪ ಸಂಭವಿಸುತ್ತಿದ್ದಂತೆ ಭೂಮಿ ಕಂಪಿಸಿದ ಅನುಭವ ಜನರ ಗಮನಕ್ಕೆ ಬಂದಿದೆ. ಈ ಕೂಡಲೇ ಬೃಹತ್ ಕಟ್ಟಡಗಳಲ್ಲಿ, ಕಚೇರಿಗಳಲ್ಲಿ, ಮನೆಗಳಿಂದ ಜನರು ಹೊರ ಓಡಿ ಬಂದಿದ್ದಾರೆ. ಘಟನೆಯಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಇತ್ತ ಇಶಿಕಾವಾ ಪ್ರಿಫೆಕ್ಚರ್ನ ವಾಜಿಮಾ ನಗರದ ಸಮುದ್ರದಲ್ಲಿ ದೈತ್ಯ ಅಲೆಗಳು ಉಂಟಾಗಿವೆ. ಸುಮಾರು 1 ಮೀಟರ್ಗಿಂತಲೂ ಹೆಚ್ಚು ಎತ್ತರದ ಅಲೆಗಳು ತೀರಕ್ಕೆ ಅಪ್ಪಳಿಸಿವೆ.
ತಾಂತ್ರಿಕವಾಗಿ ಮುನ್ನುಗ್ಗುತ್ತಿರುವ ಜಪಾನ್ ದೇಶದಲ್ಲಿ ಹವಾಮಾನ ವೈಪರಿತ್ಯದ, ಭೂಕಂಪ, ಭೂಕುಸಿತದ ಘಟನೆಗಳು ಈ ಹಿಂದೆಯು ನಡೆದಿದ್ದವು. ದಶಕದ ಹಿಂದೆನಂತೆ ಇದೀಗ ಮತ್ತೆ ಇಲ್ಲಿ ಸುನಾಮಿ ಸಂಭವಿಸುವ ಎಚ್ಚರಿಕೆ ಸಹ ನೀಡಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications