Earthquake: ಪೆಸಿಫಿಕ್ ಮಹಾಸಾಗರದಲ್ಲಿ 7.7 ತೀವ್ರತೆಯ ಭೂಕಂಪ, ಮೂರು ದೇಶಗಳಿಗೆ ಸುನಾಮಿ ಎಚ್ಚರಿಕೆ
ಪೆಸಿಫಿಕ್ ಮಹಾಸಾಗರದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು ಆತಂಕವನ್ನು ಸೃಷ್ಟಿ ಮಾಡಿದೆ. ಯಾಕೆಮದರೆ ಇದರಿಂದ ಭಾರೀ ಹಾನಿಯಾಗುವ ನಿರೀಕ್ಷೆ ಇದೆ. ಭೂಕಂಪನದಿಂದಾಗಿ ಮೂರು ದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಇವುಗಳಲ್ಲಿ ವನವಾಟು, ಫಿಜಿ, ನ್ಯೂ ಕ್ಯಾಲೆಡೋನಿಯಾ ಸೇರಿವೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಈ ಭೂಕಂಪ ನೆಲದ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ.
ಸುನಾಮಿ ಯಾವುದೇ ಸಮಯದಲ್ಲಿ ಸಂಭವಿಸಬಹುದು: ವನವಾಟು ಹವಾಮಾನಶಾಸ್ತ್ರ

ವನವಾಟು ಹವಾಮಾನ ಮತ್ತು ಭೂ-ಹಜಾರ್ಡ್ಸ್ ಇಲಾಖೆಯು ಸುನಾಮಿ ಎಚ್ಚರಿಕೆಯನ್ನು ನೀಡಿದೆ. ಈ ಪ್ರಮಾಣದ ಭೂಕಂಪ ವಿನಾಶಕಾರಿ ಸುನಾಮಿಯನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಕೇಂದ್ರಬಿಂದುವಿನ ಬಳಿ ಮತ್ತು ಹೆಚ್ಚು ದೂರದ ಕರಾವಳಿ ತೀರಗಳನ್ನು ನಿಮಿಷಗಳಲ್ಲಿ ಅಪ್ಪಳಿಸಬಹುದು. ಇದರಿಂದಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಚೇರಿಯು ಸುನಾಮಿಯ ಎಚ್ಚರಿಕೆಯನ್ನು ಸ್ವೀಕರಿಸಿದ ನಂತರ ಸೂಕ್ತ ಕ್ರಮ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ವನವಾಟು ಜನರಿಗೆ ಸಲಹೆ ನೀಡಿದೆ. ಇದು ಕರಾವಳಿ ಪ್ರದೇಶಗಳಿಂದ ಎತ್ತರದ ಸ್ಥಳಗಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
We are assessing whether the M7.7 SOUTHEAST OF LOYALTY ISLANDS earthquake poses any tsunami threat to New Zealand. If a tsunami has been generated it is not likely to arrive in New Zealand for at least 1 hour hours.
— National Emergency Management Agency (@NZcivildefence) May 19, 2023
ಭೂಕಂಪ ಯಾವಾಗ ಮತ್ತು ಹೇಗೆ ಸಂಭವಿಸುತ್ತದೆ?
ಭೂಮಿಯೊಳಗೆ ಇರುವ ಟೆಕ್ಟೋನಿಕ್ ಪ್ಲೇಟ್ಗಳು ಯಾವಾಗಲೂ ನಿಧಾನವಾಗಿ ಚಲಿಸುತ್ತಿರುತ್ತವೆ. ಆದರೆ ಕೆಲವೊಮ್ಮೆ ಘರ್ಷಣೆಯಿಂದಾಗಿ ಅವು ತಮ್ಮ ಅಂಚುಗಳಲ್ಲಿ ಸಿಲುಕಿಕೊಳ್ಳುತ್ತವೆ ಅಥವಾ ಪರಸ್ಪರ ಡಿಕ್ಕಿ ಹೊಡೆಯುತ್ತವೆ. ಸಾಮಾನ್ಯವಾಗಿ ಈ ಕಾರಣಗಳಿಂದಾಗಿ ಪ್ಲೇಟ್ಗಳು ಇದ್ದಕ್ಕಿದ್ದಂತೆ ಬದಲಾದಾಗ ಅಥವಾ ಅವು ಇದ್ದಕ್ಕಿದ್ದಂತೆ ಸ್ಥಳದಲ್ಲಿ ಬದಲಾದಾಗ ಭೂಕಂಪಗಳು ಸಂಭವಿಸುತ್ತದೆ. ಈ ಕಾರಣದಿಂದಾಗಿ ಭೂಮಿಯ ಗರ್ಭದಿಂದ ಶಕ್ತಿಯು ಹೊರಬರುತ್ತದೆ. ಈ ವೇಳೆ ನಾವು ಮೇಲ್ಮೈಯಲ್ಲಿ ಕಂಪನಗಳನ್ನು ಅನುಭವಿಸುತ್ತೇವೆ. ಭೂಮಿಯ ಹೊರಪದರವನ್ನು 7 ತುಂಡುಗಳಾಗಿ ವಿಂಗಡಿಸಲಾಗಿದೆ ಮತ್ತು ಇದನ್ನು ಟೆಕ್ಟೋನಿಕ್ ಪ್ಲೇಟ್ ಎಂದು ಕರೆಯಲಾಗುತ್ತದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications