ಟರ್ಕಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: ಅಧಿಕ ಸಾವುನೋವುಗಳ ಭೀತಿ!
ಟರ್ಕಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸದ್ದು ಅನೇಕ ಸಾವುನೋವುಗಳ ಸಂಭವಿಸಲಿರುವ ಭೀತಿ ಎದುರಾಗಿದೆ. ಹಲವಾರು ಕಟ್ಟಡಗಳು ಧರೆಗುರುಳಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಸೋಮವಾರ ಮುಂಜಾನೆ ದಕ್ಷಿಣ ಟರ್ಕಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.8 ರ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ನಂತರ 6.7 ತೀವ್ರತೆಯ ಮತ್ತೊಂದು ಪ್ರಬಲ ಕಂಪನ ಸಂಭವಿಸಿದ್ದು ಅಪಾರ ಸಾವು ನೋವು ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ತಿಳಿಸಿದೆ.
USGS ಮಾಹಿತಿಯ ಪ್ರಕಾರ, ಆರಂಭಿಕ ಭೂಕಂಪ ಗಾಜಿಯಾಂಟೆಪ್ ಪ್ರಾಂತ್ಯದ ನೂರ್ಡಗಿ ನಗರದಿಂದ 26 ಕಿಮೀ ಪೂರ್ವಕ್ಕೆ 17.9 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿತ್ತು. ಎರಡನೆಯದು ನಿಮಿಷಗಳ ನಂತರ ಮಧ್ಯ ಟರ್ಕಿಯಲ್ಲಿ 9.9 ಕಿಮೀ ಆಳದಲ್ಲಿ ಅಪ್ಪಳಿಸಿತು.
Spinneys after the earthquake pic.twitter.com/OgMoccvaa8
— Salah Halawi (@Salah_Halawi) February 6, 2023
ಹಾನಿಯ ಪ್ರಮಾಣ ಮತ್ತು ಸಾವಿನ ಸಂಖ್ಯೆ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲ. ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್ಗಳು ಮತ್ತು ವಿಡಿಯೊಗಳು ಅನೇಕ ಸಾವುನೋವುಗಳನ್ನು ಸೂಚಿಸುತ್ತವೆ. ಭೂಕಂಪದಿಂದಾಗಿ ಅನೇಕ ಕಟ್ಟಡಗಳು ಕುಸಿದಿವೆ ಮತ್ತು ಅನೇಕ ಜನರು ಅವಶೇಷಗಳಲ್ಲಿ ಸಿಲುಕಿರುವ ಭಯವಿದೆ ಎಂದು BNO ನ್ಯೂಸ್ ವರದಿ ಮಾಡಿದೆ.

ಟ್ವಿಟರ್ನಲ್ಲಿ ಹಂಚಿಕೊಳ್ಳಲಾದ ವಿಡಿಯೊಗಳು ಭಯಾನಕ ದೃಶ್ಯಗಳನ್ನೊಳಗೊಂಡಿವೆ. ಜನರು ಪ್ರಾಣಕ್ಕಾಗಿ ಕಿರುಚುತ್ತಿರುವುದು ಮತ್ತು ಓಡುತ್ತಿರುವುದು ದೃಶ್ಯದಲ್ಲಿ ಕಂಡು ಬಂದಿದೆ. ಮಾತ್ರವಲ್ಲದೆ ಸಿರಿಯಾ ಮತ್ತು ಯೆಮೆನ್ನಷ್ಟು ದೂರದಲ್ಲಿ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.
A Massive 7.8 Magnitude Earthquake has struck Central Turkey within the last hour, Severe Damage and multiple Casualties are being reported across the Region. pic.twitter.com/qILgKNAHMK
— OSINTdefender (@sentdefender) February 6, 2023
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications