Earthquake: ಪಪುವಾ ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ: 7.0 ತೀವ್ರತೆ ದಾಖಲು, ಸುನಾಮಿ ಎಚ್ಚರಿಕೆ!
ಆಸ್ಟ್ರೇಲಿಯಾ(ಸಿಡ್ನಿ)ಏಪ್ರಿಲ್ 3: ಪ್ರಪಂಚದಾದ್ಯಂತದ ಅನೇಕ ದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚಾಗಿ ಭೂಕಂಪ ನಿರಂತರವಾಗಿ ಅನುಭವವಾಗುತ್ತಿದ್ದು, ಮನುಕುಲವೇ ಭಯದಲ್ಲಿದೆ. ಸೋಮವಾರ ಬೆಳಗ್ಗೆ ಸಿಡ್ನಿದ ಪಪುವಾ ನ್ಯೂಗಿನಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ
ಟಿಬೆಟ್ ಮತ್ತು ಆಸ್ಟ್ರೇಲಿಯಾದ ಸಮೀಪವಿರುವ ಪಪುವಾ ನ್ಯೂಗಿನಿಯಾದಲ್ಲಿ ಸೋಮವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲಾಗಿದೆ. ಟಿಬೆಟ್ನ ಶಿಜಾಂಗ್ನಲ್ಲಿ ರಿಕ್ಟರ್ ಮಾಪಕದಲ್ಲಿ 4.2 ಅಳತೆಯ ಭೂಕಂಪ ಸಂಭವಿಸಿದರೆ, ವಾಯುವ್ಯ ಪಪುವಾ ನ್ಯೂಗಿನಿಯಾದಲ್ಲಿ 7.0 ಅಳತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಪಪುವಾ ನ್ಯೂಗಿನಿಯಾದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಭೂಕಂಪ ಸಂಭವಿಸಿದ್ದು, ಭೂಕಂಪವು ಕರಾವಳಿ ಪಟ್ಟಣವಾದ ವೆವಾಕ್ನಿಂದ 97 ಕಿಲೋಮೀಟರ್ (60 ಮೈಲುಗಳು) 62 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಮಾಹಿತಿ ನೀಡಿದೆ.
ಪಪುವಾ ನ್ಯೂಗಿನಿಯಾ ಪ್ರದೇಶವು ಕಡಿಮೆ ಜನಸಂಖ್ಯೆಯನ್ನು ಹೊಂದಿದ್ದರೂ, ಇಲ್ಲಿ ವಾಸಿಸುವ ಜನರಿಗೆ ಹಾನಿಯಾಗುವ ಸಾಧ್ಯತೆಯಿದೆ ಎಂದು USGS ಹೇಳಿದೆ. ಅಲ್ಲದೇ ದ್ರವೀಕರಣ ಎಂದು ಕರೆಯಲ್ಪಡುವ ನೆಲದ ಈ ಸಡಿಲಗೊಳಿಸುವಿಕೆಯು ಗಣನೀಯವಾಗಿ ನೆಲದ ಕುಸಿತಕ್ಕೆ ಕಾರಣವಾಗಬಹುದು ಎಂದು ಭೂಕಂಪಶಾಸ್ತ್ರ ಸಂಸ್ಥೆ ಹೇಳಿದೆ.
ಇಂಡೋನೇಷ್ಯಾ ಗಡಿಯಿಂದ ಪೂರ್ವಕ್ಕೆ 100 ಕಿಲೋಮೀಟರ್ ದೂರದಲ್ಲಿರುವ ಪಪುವಾ ನ್ಯೂಗಿನಿಯಾ ದ್ವೀಪದಲ್ಲಿ ಈ ಭೂಕಂಪವು ಇಡೀ ಪ್ರದೇಶವನ್ನು ನಡುಗಿಸಿದೆ ಎಂದು ವರದಿಯಾಗಿದೆ.

ನ್ಯೂ ಬ್ರಿಟನ್ ಹೆಚ್ಚು ಭೂಕಂಪ ಸಂಭವಿಸಿದ ಪ್ರದೇಶವಾಗಿದೆ. ಇದು ಪೂರ್ವ ಪಪುವಾ ನ್ಯೂಗಿನಿಯಾದ ದ್ವೀಪಸಮೂಹದ ಭಾಗವಾಗಿದೆ. ಈ ಹಿಂದೆ ಫೆಬ್ರವರಿ ಅಂತ್ಯದಲ್ಲಿಯೂ 6.2 ತೀವ್ರತೆಯ ಭೂಕಂಪ ಸಂಭವಿಸಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications