ವಿಶ್ವಯುದ್ಧ II ವಿಜಯೋತ್ಸವ ದಿನ ರಾಣಿ ಎಲಿಜಬೆತ್ ಗೆ ಕಟಂಕ
ಲಂಡನ್, ಆಗಸ್ಟ್ 10: ಬ್ರಿಟನ್ನಿನ ರಾಣಿ ಎಲಿಜಬೆತ್ ಅವರ ಮೇಲೆ ಇರಾಕಿ ಉಗ್ರ ಸಂಘಟನೆಯ ಕಣ್ಣು ಬಿದ್ದಿದೆ. 2ನೇ ವಿಶ್ವ ಯುದ್ದದ ವಿಜಯೋತ್ಸವ ಸಮಾರಂಭದಲ್ಲಿ ರಾಣಿ ಎಲಿಜಬೆತ್ ಕಥೆ ಮುಗಿಸುವುದಾಗಿ ಐಎಸ್ಐಎಸ್ ಹೇಳಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮವಗಳು ವರದಿ ಮಾಡಿವೆ.
ಬೋಸ್ಟನ್ ಮ್ಯಾರಥಾನ್ನಲ್ಲಿ ನಡೆಸಿದ್ದ ದಾಳಿಯ ಮಾದರಿಯಲ್ಲೇ ಪ್ರೆಷರ್ ಕುಕ್ಕರ್ ಬಾಂಬ್ ಸಿಡಿಸಿ ಮಹಾರಾಣಿ ಅವರನ್ನು ಹತ್ಯೆ ಮಾಡಲಾಗುತ್ತದೆ. ಡೌನಿಂಗ್ ಸ್ಟ್ರೀಟ್ನಿಂದ ಅರ್ಧ ಮೈಲಿ ದೂರದಲ್ಲಿರುವ ಹಾರ್ಸ್ ಗಾರ್ಡ್ಸ್ ಪರೇಡ್ ಅನ್ನು ಗುರಿಯಾಗಿಸಿ ದಾಳಿ ನಡೆಸಲು ಇರಾಕಿ ಉಗ್ರರು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ.
ಕ್ವೀನ್ ಎಲಿಜಬೆತ್, ಪ್ರಿನ್ಸ್ ಚಾರ್ಲ್ಸ್, ಬ್ರಿಟನ್ ಪ್ರಧಾನಿ ಡೇವಿಡ್ ಕೆಮರೂನ್ ಸದ್ಯಕ್ಕೆ ಈ ಉಗ್ರರ ಟಾರ್ಗೆಟ್ ನ ಟಾಪ್ ಲಿಸ್ಟ್ ನಲ್ಲಿದ್ದಾರೆ. [ಎಲಿಜಬೆತ್ ರಾಣಿ ವಿರುದ್ಧ ನಿಂತ ಸೇವಕರು]

2ನೇ ಮಹಾಯುದ್ಧದ ವಿಜಯೋತ್ಸವ ಸಮಾರಂಭದಲ್ಲಿ ಫಾರ್ ಈಸ್ಟ್ ಕ್ಯಾಂಪೇನ್ನ 1 ಸಾವಿರ ಹಿರಿಯ ಯೋಧರು ಹಾಗೂ ಸೇನಾ ಪಡೆ ಯೋಧರು ಕೂಡ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಟ್ರಾಫಲ್ಗರ್ ಸ್ಕ್ವೇಯರ್, ವೈಟ್ ಹಾಲ್, ವೆಸ್ಟ್ ಮಿನಿಸ್ಟರ್ ಅಬೇ ಸೇರಿದಂತೆ ಹಲವೆಡೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಐಎಸ್ ಉಗ್ರರ ದಾಳಿಯ ಸುಳಿವನ್ನು ಹಿಡಿದಿರುವ ಸ್ಕಾಟ್ಲೆಂಡ್ ಯಾರ್ಡ್ನ ರಾಯಲ್ ಪ್ರೊಟೆಕ್ಷನ್ ಬ್ರಾಂಚ್ನ ಸಿಬ್ಬಂದಿ ದಾಳಿಯನ್ನು ವಿಫಲಗೊಳಿಸುವ ನಿಟ್ಟಿನಲ್ಲಿ ಸಂಚುಕೋರರನ್ನು ಪತ್ತೆ ಮಾಡಲು ಮುಂದಾಗಿದ್ದಾರೆ. ಆದರೆ, ಯಾವುದೇ ಶಂಕಿತರನ್ನು ಇದುವರೆವಿಗೂ ಬಂಧಿಸಿಲ್ಲ.
ಇತ್ತೀಚೆಗೆ ಬಿಬಿಸಿ ಜೊತೆ ಮಾತನಾಡುತ್ತಾ ಡೇವಿಡ್ ಕೆಮರೂನ್ ಅವರು, ಇರಾಕ್ ಹಾಗೂ ಸಿರಿಯಾದಲ್ಲಿರುವ ಕೆಲ ತಂಡಗಳು ಬ್ರಿಟನ್ನಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಹವಣಿಸುತ್ತಿದ್ದಾರೆ. ಇವರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications