ಅಮೆರಿಕಕ್ಕೆ ರಾಜತಾಂತ್ರಿಕ ಪೆಟ್ಟು ಕೊಟ್ಟ ವ್ಲಾಡಿಮಿರ್ ಪುಟಿನ್
ಮಾಸ್ಕೋ, ಜುಲೈ 31: ರಷ್ಯಾದ ವಿರುದ್ಧ ನಿರ್ಬಂಧಗಳನ್ನು ಕಠಿಣಗೊಳಿಸುವ ವಿಧೇಯಕಕ್ಕೆ ಅಮೆರಿಕ ಸೆನೆಟ್ ಅನುಮೋದನೆ ನೀಡಿದ ಬೆನ್ನಲ್ಲೇ ರಷ್ಯಾ ಪ್ರತಿ ದಾಳಿ ಮಾಡಿದೆ.
ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ತನ್ನ ದೇಶದಲ್ಲಿರುವ 755 ಅಮೆರಿಕನ್ ರಾಜತಾಂತ್ರಿಕರು ತಕ್ಷಣವೇ ರಷ್ಯಾದಿಂದ ನಿರ್ಗಮಿಸಬೇಕೆಂದು ಭಾನುವಾರದಂದು ತಾಕೀತು ಮಾಡಿದ್ದಾರೆ ಎಂಬ ಸುದ್ದಿ ಬಂದಿದೆ.

ರಷ್ಯದಲ್ಲಿನ ಅಮೆರಿಕನ್ ರಾಜತಾಂತ್ರಿಕ ಸಂಖ್ಯೆ ಹಾಗೂ ಅಮೆರಿಕದಲ್ಲಿರುವ ರಷ್ಯನ್ ರಾಜತಾಂತ್ರಿಕ ಸಂಖ್ಯೆ ಸಮಾನವಾಗಿರಬೇಕು. ಸೆಪ್ಟೆಂಬರ್ ಅಂತ್ಯದೊಳಗೆ 455 ಸಂಖ್ಯೆಗೆ ಇಳಿಸಬೇಕು ಎಂದು ರಷ್ಯಾದ ವಿದೇಶಾಂಗ ಇಲಾಖೆಯು ಈ ಹಿಂದೆ ಆಗ್ರಹಿಸಿತ್ತು.
'ಅಮೆರಿಕದಲ್ಲಿ ಪ್ರಸ್ತುತ ಸಾವಿರಕ್ಕೂ ಅಧಿಕ ಅಮೆರಿಕನ್ ರಾಜತಾಂತ್ರಿಕರು ಅಮೆರಿಕದ ರಾಯಭಾರಿ ಕಚೇರಿ ಹಾಗೂ ದೂತಾವಾಸ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ' ಎಂದು ಪುತಿನ್ ಅವರು ರಶ್ಯನ್ ಟಿವಿ ವಾಹಿನಿ(Rossiya 1 TV)
ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
'ಅಮೆರಿಕದ ಜೊತೆಗಿನ ನಮ್ಮ ದೇಶದ ಬಾಂಧವ್ಯವು ಉತ್ತಮಗೊಳ್ಳುವುದೆಂದು ನಾವು ಬಹಳ ಸಮಯದಿಂದ ಕಾಯುತ್ತಿದ್ದೆವು. ಅದರೆ ಸದ್ಯಕ್ಕೆ ಅಂತಹ ಸನ್ನಿವೇಶ ಕಂಡು ಬರುತ್ತಿಲ್' ಎಂದಿದ್ದಾರೆ.
ರಶ್ಯವು 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸಿದ ಆರೋಪ ಹಾಗೂ 2014ರಲ್ಲಿ ಕ್ರೀಮಿಯಾದ ಮೇಲೆ ಆಕ್ರಮಣ ಮಾಡಿದ ಕಾರಣವೊಡ್ಡಿ ರಷ್ಯಾ ವಿರುದ್ಧ ಕಠಿಣ ನಿರ್ಬಂಧಗಳನ್ನು ಹೇರುವ ವಿಧೇಯಕವನ್ನು ಅಮೆರಿಕ ಸೆನೆಟ್ ಗುರುವಾರ ಬಹುಮತದೊಂದಿಗೆ ಅಂಗೀಕರಿಸಿತ್ತು. ಇದಾದ ಬಳಿಕ ರಷ್ಯಾ ತನ್ನ ನಡೆ ಇಟ್ಟಿದೆ.(ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications