ನೇಪಾಳದಲ್ಲಿ ಅನಿಲ ಅವಘಡ: ಮಕ್ಕಳು ಸೇರಿ ಕೇರಳದ ಎಂಟು ಮಂದಿ ಉಸಿರುಗಟ್ಟಿ ಸಾವು
ಕಠ್ಮಂಡು, ಜನವರಿ 21: ನೇಪಾಳದ ದಾಮನ್ ಎಂಬಲ್ಲಿ ನಡೆದ ಹೃದಯವಿದ್ರಾವಕ ಘಟನೆಯಲ್ಲಿ ರೆಸಾರ್ಟ್ ಒಂದರ ಕೊಠಡಿಯಲ್ಲಿ ಕೇರಳದ ಎಂಟು ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಅನಿಲ ಸೋರಿಕೆಯಿಂದ ಉಸಿರಾಡಲು ಸಾಧ್ಯವಾಗದೆ ಈ ಸಾಮೂಹಿಕ ಸಾವು ಸಂಭವಿಸಿದ್ದು, ಮೃತರಲ್ಲಿ ನಾಲ್ವರು ಮಕ್ಕಳು ಕೂಡ ಸೇರಿದ್ದಾರೆ.
ಮೃತರನ್ನು ಪ್ರಬಿನ್ ಕುಮಾರ್ (39), ಶರಣ್ಯ (34), ರಂಜಿತ್ ಕುಮಾರ್ ಟಿಬಿ (39), ಇಂದು ರಂಜಿತ್ (34), ಶ್ರೀ ಭದ್ರಾ (9), ಅಭಿನವ್ ಸೂರ್ಯ (9), ಅಭಿ ನಾಯರ್ (7) ಮತ್ತು ವೈಷ್ಣವ್ ರಂಜಿತ್ (2) ಎಂದು ಗುರುತಿಸಲಾಗಿದೆ.
ಒಟ್ಟು 15 ಜನರ ತಂಡವು ನೇಪಾಳಕ್ಕೆ ಪ್ರವಾಸ ಕೈಗೊಂಡಿತ್ತು. ಅವರಲ್ಲಿ ಮೃತಪಟ್ಟ ಎಂಟೂ ಮಂದಿ ತಿರುವನಂತಪುರಂ ಜಿಲ್ಲೆಯ ಚೆಂಕೊಟ್ಟುಕೊಣಂನವರಾಗಿದ್ದಾರೆ. ಅನಿಲ್ ಸೋರಿಕೆಯಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಉಸಿರುಗಟ್ಟಿ ಒದ್ದಾಡುತ್ತಿದ್ದವರನ್ನು ಏರ್ಲಿಫ್ಟ್ ಮೂಲಕ ಎಚ್ಎಎಂಎಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ದಾಖಲು ಮಾಡುವಾಗಲೇ ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಎವೆರೆಸ್ಟ್ ಪನೋರಮಾ ಎಂಬ ರೆಸಾರ್ಟ್ನಲ್ಲಿ ಎಲ್ಲರೂ ಉಳಿದುಕೊಂಡಿದ್ದರು. ಒಂದು ಕೊಠಡಿಯಲ್ಲಿ ಇಬ್ಬರು ದಂಪತಿ ಮತ್ತು ಅವರ ನಾಲ್ಕು ಮಕ್ಕಳು ಇದ್ದರು. ಕೊಠಡಿ ಬೆಚ್ಚಗೆ ಇರುವಂತೆ ನೋಡಿಕೊಳ್ಳಲು ಗ್ಯಾಸ್ ಹೀಟರ್ ಆನ್ ಮಾಡಿದ್ದರು ಎನ್ನಲಾಗಿದೆ. ಆದರೆ ಹೀಟರ್ ಕೆಟ್ಟು ಗ್ಯಾಸ್ ಹೊರಬಂದಿದ್ದರಿಂದ ಕೊಠಡಿಯೊಳಗೆ ಉಸಿರುಗಟ್ಟಿ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರವಾಸಕ್ಕೆ ತೆರಳಿದ್ದವರು ನಾಲ್ಕು ಕೊಠಡಿಗಳನ್ನು ಬುಕ್ ಮಾಡಿಸಿದ್ದರು. ಆದರೆ ಅವರಲ್ಲಿ ಎಂಟು ಮಂದಿ ಒಂದೇ ಕೊಠಡಿಯಲ್ಲಿ ಸೇರಿಕೊಂಡಿದ್ದರು. ಚಳಿ ಇದ್ದಿದ್ದರಿಂದ ಎಲ್ಲಾ ಕಿಟಕಿ ಬಾಗಿಲುಗಳನ್ನು ಒಳಗಿನಿಂದ ಬಂದ್ ಮಾಡಿಕೊಂಡಿದ್ದರು. ಪ್ರವಾಸ ಮುಗಿಸಿ ಅವರು ತಮ್ಮ ಮನೆಗಳಿಗೆ ಹೊರಡಲು ಸಿದ್ಧತೆ ಮಾಡಿಕೊಂಡಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ












Click it and Unblock the Notifications