ಕೊಲಂಬಿಯಾದ ವಸತಿ ಪ್ರದೇಶದಲ್ಲಿ ಸಣ್ಣ ವಿಮಾನ ಪತನ: 8 ಜನರ ಸಾವು
ಬೊಗೋಟಾ: ಎಂಟು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಕೊಲಂಬಿಯಾದ ಮೆಡೆಲಿನ್ ನಗರದಲ್ಲಿ ಪತನಗೊಂಡಿದೆ. ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಸೋಮವಾರ ಮಾಹಿತಿ ನೀಡಿದ್ದಾರೆ.
ವಿಮಾನವು ಸೋಮವಾರ ಬೆಳಿಗ್ಗೆ ಒಲಯಾ ಹೆರೆರಾ ನಿಲ್ದಾಣದಿಂದ ಟೇಕ್ಆಪ್ ಆಗಿದೆ. ಟೇಕ್ಆಪ್ ಆದ ಸ್ಪಲ್ಪ ಸಮಯದಲ್ಲೇ ಮೆಡೆಲಿನ್ ನಗರದ ವಸತಿ ಪ್ರದೇಶದಲ್ಲಿರುವ ಮನೆಯೊಂದಕ್ಕೆ ಡಿಕ್ಕಿ ಹೊಡೆದ ಕಾರಣ ಈ ಅಪಘಾತ ಸಂಭವಿಸಿದೆ.
ಅಪಘಾತ ಸಂಭವಿಸಿದ ಜಾಗದಲ್ಲಿ ದಟ್ಟವಾದ ಕಪ್ಪು ಹೊಗೆ ಕಾಣಿಸಿಕೊಂಡಿದ್ದು, ಇದಕ್ಕೆ ಎಂಜಿನ್ ವೈಫಲ್ಯವೇ ಕಾರಣ ಎಂದು ತಿಳಿದುಬಂದಿದೆ.

ವಿಮಾನದಲ್ಲಿದ್ದ ಎಂಟು ಜನರಲ್ಲಿ ಆರು ಮಂದಿ ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಸೇರಿದ್ದಾರೆ ಎಂದು ವಿಮಾನ ನಿಲ್ದಾಣದ ಟ್ವಿಟ್ವರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.
ವಿಮಾನ ಡಿಕ್ಕಿ ಹೊಡೆದ ಮನೆಯಲ್ಲಿ ಯಾರಾದರೂ ಗಾಯಗೊಂಡಿದ್ದಾರೆಯೇ ಅಥವಾ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಕೊಲಂಬಿಯಾದ ಎರಡನೇ ಅತಿ ದೊಡ್ಡ ನಗರ ಮೆಡೆಲಿನ್. ಇಲ್ಲಿನ ಬೆಲೆನ್ ರೊಸೆಲ್ಸ್ ಸೆಕ್ಟರ್ನಲ್ಲಿ ವಿಮಾನ ದುರಂತ ಸಂಭವಿಸಿದೆ. ಸಂತ್ರಸ್ತರಿಗೆ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರ ಸನ್ನದ್ಧವಾಗಿದೆ ಎಂದು ಮೇಯರ್ ಡೇನಿಯಲ್ ಕ್ವಿಂಟೆರೋ ಟ್ವೀಟ್ ಮಾಡಿದ್ದಾರೆ.
ಅಪಘಾತಕ್ಕೀಡಾದ ವಿಮಾನವು ಮೆಡೆಲಿನ್ನಿಂದ ಚೊಕೊ ಪ್ರದೇಶದ ಪಿಝಾರೊ ಪಟ್ಟಣಕ್ಕೆ ಪ್ರಯಾಣ ಬೆಳೆಸಿತ್ತು.
ವಿಮಾನದ ಟೇಕ್ಆಫ್ ಸಂದರ್ಭದಲ್ಲೇ ಎಂಜಿನ್ ವೈಫಲ್ಯ ಕಾಣಿಸಿಕೊಂಡಿತು. ಪೈಲಟ್ಗಳ ಸತತ ಪ್ರಯತ್ನದ ನಂತರವೂ ಒಲಯಾ ಹೆರೆಯಾ ನಿಲ್ದಾನಕ್ಕೆ ಹಿಂತಿರುಗಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟ್ವಿಟ್ಟರ್ನಲ್ಲಿ ಹಂಚಿಕೊಳ್ಳಲಾದ ವಿಡಿಯೊ ಪ್ರಕಾರ, ವಿಮಾನವು ಮನೆಯೊಂದಕ್ಕೆ ಅಪ್ಪಳಿಸಿದೆ. ಮನೆಯ ಮಹಡಿ ಭಗ್ನಗೊಂಡಿದೆ. ಕುಸಿದ ಇಟ್ಟಿಗೆ ಗೋಡೆಗಳ ನಡುವೆ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಮೆಡೆಲಿನ್ ನಗರವು ಕಿರಿದಾದ ಕಣಿವೆಯಲ್ಲಿದೆ, ಆಂಡಿಸ್ ಪರ್ವತಗಳಿಂದ ಆವೃತವಾಗಿದೆ.
Se ha presentado el accidente de una avioneta en el sector de Belen Rosales. Todas las capacidades de la administración se han activado para socorrer a las Victimas. pic.twitter.com/Vj5qaJBc8T
— Daniel Quintero Calle (@QuinteroCalle) November 21, 2022
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications