ಅಪಾರ್ಟ್ಮೆಂಟ್ನಲ್ಲಿ ಬೆಂಕಿ: ಎಂಟು ಮಂದಿ ಸಜೀವ ದಹನ
ಷಿಕಾಗೋ, ಆಗಸ್ಟ್ 27: ಅಮೆರಿಕದ ಷಿಕಾಗೋದಲ್ಲಿನ ಮೂರು ಅಂತಸ್ತಿನ ಅಪಾರ್ಟ್ಮೆಂಟ್ ಒಂದರಲ್ಲಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಆರು ಮಕ್ಕಳೂ ಸೇರಿದಂತೆ ಎಂಟು ಮಂದಿ ಬಲಿಯಾಗಿದ್ದಾರೆ.
ಇನ್ನು ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಬೆಂಕಿ ನಂದಿಸುವ ಸಾಹಸದಲ್ಲಿ ಅಗ್ನಿಶಾಮಕ ಸಿಬ್ಬಂದಿಯೊಬ್ಬರಿಗೂ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಷಿಕಾಗೋ ಅಗ್ನಿಶಾಮಕದ ದಳದ ವಕ್ತಾರ ಲ್ಯಾರಿ ಮೆರಿಟ್ ತಿಳಿಸಿದ್ದಾರೆ.
ಮೃತಪಟ್ಟ ಮಕ್ಕಳಲ್ಲಿ ಒಂದು ನವಜಾತ ಶಿಶುವೂ ಸೇರಿದೆ. ಮೃತರ ವಿವರಗಳನ್ನು ಹಾಗೂ ಘಟನೆಗೆ ಕಾರಣ ಏನೆಂಬುದನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

ಇಷ್ಟೊಂದು ಮಂದಿ ಬೆಂಕಿಗೆ ಆಹುತಿಯಾದ ಈ ರೀತಿಯ ದುರ್ಘಟನೆ ಇಲ್ಲಿ ಎಷ್ಟೋ ವರ್ಷಗಳಿಂದ ಸಂಭವಿಸಿರಲಿಲ್ಲ ಎಂದು ಅಗ್ನಿಶಾಮಕ ವಿಭಾಗದ ಆಯುಕ್ತ ಜೋಸ್ ಸ್ಯಾಂಟಿಯಾಗೊ ತಿಳಿಸಿದ್ದಾರೆ.
ರಾತ್ರಿ ಪಾಳಿಯ ಕೆಲಸ ಮುಗಿಸಿ ಹಿಂದಿರುಗಿದ್ದ ನೆರೆಮನೆಯ ಮಹಿಳೆ ಸುಡುತ್ತಿರುವ ವಾಸನೆ ಗ್ರಹಿಸಿ ಅಪಾರ್ಟ್ಮೆಂಟ್ನ ಮನೆಗಳ ಬಾಗಿಲು ಬಡಿದು ಎಚ್ಚರಿಸಿದ್ದಾರೆ. ಆದರೆ, ತೀವ್ರವಾಗಿ ವ್ಯಾಪಿಸಿದ ಬೆಂಕಿ ಒಂದೇ ಕುಟುಂಬದ ಎಂಟು ಮಂದಿಯನ್ನು ಬಲಿ ತೆಗೆದುಕೊಂಡಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications