ಬ್ರಿಕ್ಸ್ ಸಭೆ ಬಳಿಕ ಎಲ್ಲಾ ದೇಶದ ಸದಸ್ಯರಿಂದ ಸಾಮೂಹಿಕ 'ನಮಸ್ತೆ'
ನವದೆಹಲಿ, ಜೂನ್ 01: 2021ನೇ ಸಾಲಿನ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ರಾಷ್ಟ್ರಗಳನ್ನೊಳಗೊಂಡ ಬ್ರಿಕ್ಸ್ (BRICS) ಶೃಂಗಸಭೆ ನೇತೃತ್ವ ಭಾರತದ ಹೆಗಲಿಗೆ ಬಿದ್ದಿದ್ದು, ಇಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆ ನಡೆಯಿತು.
Recommended Video
ಸಭೆಯ ಬಳಿಕ ಎಲ್ಲಾ ದೇಶಗಳ ಸದಸ್ಯರು ಕೈಮುಗಿಯುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಅನುಸರಿಸಿದ್ದನ್ನು ನೀವು ನೋಡಬಹುದಾಗಿದೆ.
ಬ್ರಿಕ್ಸ್ ಸದಸ್ಯ ರಾಷ್ಟ್ರಗಳಿಗೆ ಏಕರೂಪವಾಗಿ ಸಂಬಂಧಿತ ವಿಷಯಗಳ ಕುರಿತು ಚರ್ಚೆ, ವಿಚಾರ ವಿನಿಮಯ ಮೂಲಕ ಸರ್ವಸಮ್ಮತ ಅಭಿಪ್ರಾಯ ಮೂಡಿಸುವುದನ್ನು ತಾನು ಎದುರು ನೋಡುವುದಾಗಿ ಚೀನಾ ಹೇಳಿದೆ.

ಕೋವಿಡ್ ಬೀರಿರುವ ಒಟ್ಟು ಪರಿಣಾಮ ಹಾಗೂ ಈ ಶತಮಾನದಲ್ಲಿ ಸಂಭವಿಸಿರುವ ಪ್ರಮುಖ ಬದಲಾವಣೆಗಳ ಹಿನ್ನೆಲೆಯಲ್ಲಿ ಬ್ರಿಕ್ಸ್ ವೇದಿಕೆಯುಪರಸ್ಪರ ಸಹಕಾರ ಮೂಡಿಸುವಲ್ಲಿ ಪ್ರಮುಖವಾದುದು. ಮುಖ್ಯವಾಗಿ ಕೋವಿಡ್ ನಂತರದಲ್ಲಿ ಆರ್ಥಿಕ ಚೇತರಿಕೆಗೆ ಇದು ಸಹಕಾರಿ ಎಂದು ತಿಳಿಸಿದರು.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಸಭೆ ನಡೆದಿದ್ದು, ಈ ಐದು ರಾಷ್ಟ್ರಗಳ ನಾಯಕರು ಕೋವಿಡ್ -19, ಭಯೋತ್ಪಾದನೆಯನ್ನು ಪರಿಣಾಮಕಾರಿಯಾಗಿ ಎದುರಿಸುವ, ಬಹುಪಕ್ಷೀಯ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಸುಧಾರಿಸುವ ಅಗತ್ಯತೆ, ಸುಸ್ಥಿರ ಅಭಿವೃದ್ಧಿ ಸೇರಿದಂತೆ ಜಾಗತಿಕ ಮತ್ತು ಪ್ರಾದೇಶಿಕ ಕಾಳಜಿ ವಿಚಾರಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
ಭಾರತವು ಕೊರೊನಾ ಎರಡನೇ ಅಲೆಯ ಭೀಕರ ಪರಿಸ್ಥಿತಿ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಬ್ರಿಕ್ಸ್ ಸಭೆ ನಡೆಯುತ್ತಿದೆ. ಬ್ರೆಜಿಲ್, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ ರಾಷ್ಟ್ರಗಳಲ್ಲಿಯೂ ಕೊರೊನಾ ಅಬ್ಬರಿಸಿ ಸ್ವಲ್ಪ ತಣ್ಣಗಾಗಿದೆ.
ಕೊರೊನಾ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಬ್ರೆಜಿಲ್ ಎರಡನೇ ಸ್ಥಾನದಲ್ಲಿದ್ದರೆ, ಅತೀ ಹೆಚ್ಚು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಚೀನಾದಲ್ಲೆ ಮೊದಲು ವೈರಸ್ ಪತ್ತೆಯಾಗಿತ್ತಾದರೂ ಕೊರೊನಾದಿಂದ ತ್ವರಿತವಾಗಿ ಹೊರಬಂದಿರುವುದಾಗಿ ಹೇಳಿಕೊಂಡು ಬಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications