ಟೇಕ್ ಆಫ್ ನಂತರ ಕಳಚಿ ಬಿತ್ತು ವಿಮಾನದ ಚಕ್ರ: ಮುಂದೇನಾಯ್ತು? Video Viral
ಅಮೆರಿಕಾದಿಂದ ಜಪಾನ್ಗೆ ಹೊರಟಿದ್ದ ವಿಮಾನವೊಂದು ಟೇಕ್ ಆಫ್ ಕೆಲವೇ ಹೊತ್ತಲ್ಲಿ ಮರಳಿ ತುರ್ತು ಭೂಸ್ಪರ್ಶ ಮಾಡಿತು. ಅದೃಷ್ಟವಶಾತ್ ಯಾವ ಪ್ರಯಾಣಿಕರಿಗೂ ತೊಂದರೆ ಆಗಿಲ್ಲ ಎಂದು ವರದಿ ಆಗಿದೆ.
ಹೌದು, ಜಪಾನ್ಗೆ ಹೊರಡಲು ಬೋಯಿಂಗ್ 777 ವಿಮಾನವು ಅಮೆರಿಕಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದ ಸ್ಯಾನ್ ಫ್ರಾನ್ಸಿಸ್ಕೋ ನಿಲ್ದಾಣದಿಂದ ಟೇಕ್ ಆಫ್ ಆಯಿತು. ಆದರೆ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನದ ಚಕ್ರವೊಂದು ಕಳಚಿ ನೆಲಕ್ಕೆ ಬಿದ್ದ ಘಟನೆ ನಡೆದಿದೆ. ಈ ಕುರಿತು ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಮಾನದ ಚಕ್ರ ಕಳಚಿ ಬೀಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬಳಿಕ ನಾಗರಿಕ ವಿಮಾನಯಾನ ಅಧಿಕಾರಿಗಳು ಪೈಲಟ್ಗೆ ಮಾಹಿತಿ ತಿಳಿಸಿದ್ದಾರೆ. ಟೇಕ್ ಆಫ್ ಕೆಲವೇ ಹೊತ್ತಿನಲ್ಲಿ ಮರಳಿ ಸ್ಯಾನ್ ಫ್ರಾನ್ಸಿಸ್ಕೋ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಕಾರಿನ ಮೇಲೆ ಬಿದ್ದ ವಿಮಾನದ ಚಕ್ರ
ವಿಮಾನದಿಂದ ಕಳಚಿ ಬಿದ್ದ ಚಕ್ರವು ನಿಲ್ದಾಣದ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರುಗಳು ಮತ್ತು ತಂತಿ ಬೇಲಿಯ ಕಾಂಪೌಂಡ್ ಮೇಲೆ ಬಿದ್ದಿದೆ. ಇದರಿಂದ ಕಾರುಗಳು ಜಖಂಗೊಂಡಿವೆ ಎಂದು ನಾಗರಿಕ ವಿಮಾನಯಾನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನ ಚಕ್ರ ಬಿದ್ದ ರಭಸಕ್ಕೆ ತಂತಿ ಬೇಲಿ ಸಹ ಕಿತ್ತು ಹೋಗಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.
🚨 #BREAKING: A United Airlines Boeing 777 has lost a wheel while taking off San Francisco
— Nick Sortor (@nicksortor) March 7, 2024
Several cars have been CRUSHED by the falling wheel
WHAT’S GOING ON WITH BOEING AND THE AIRLINES? pic.twitter.com/zu7s5YJixg
ಘಟನೆ ಬಳಿಕ ಯುನೈಟೈಟ್ ಏರ್ಲೈನ್ಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತುರ್ತು ಭೂಸ್ಪರ್ಶವಾದ ವಿಮಾನ ಪರಿಶೀಲಿಸಿದ್ದಾರೆ. ಘಟನೆಯ ವಿಡಿಯೋವನ್ನು (X @nicksortor) ಎಕ್ಸ್ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಭಾರಿ ವೈರಲ್ ಆಗಿದೆ.

ಯುನೈಟೈಟ್ ಏರ್ಲೈನ್ಸ್ ವಿಮಾನವು ಟೇಕ್ ಆಫ್ ಆಗುತ್ತಿದ್ದಂತೆ ಮಾಹಿತಿ ಮೇರೆಗೆ ಎಚ್ಚೆತ್ತ ಪೈಲಟ್ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಮಾಡುವಲ್ಲಿ ಸಫಲನಾಗಿದ್ದಾನೆ. ಇದರಿಂದ ನೂರಾರು ಜನರ ಜೀವ ರಕ್ಷಿಸಿದಂತಾಗಿದೆ. ಸ್ಯಾನ್ ಫ್ರಾನ್ಸಿಸ್ಕೋ ದಿಂದ ಜಪಾನಿನ ಒಸಾಕಾ ನಿಲ್ದಾಣಕ್ಕೆ ಈ ವಿಮಾನವು ಸುಮಾರು 240ಕ್ಕೂ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications